Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಧರಾಗುವ ತವಕದಲ್ಲಿ ಸಂತ್ರಸ್ತ ಯುವಕರು :...

ಯೋಧರಾಗುವ ತವಕದಲ್ಲಿ ಸಂತ್ರಸ್ತ ಯುವಕರು : ಸೇನಾ ನೇಮಕಾತಿ ರ್ಯಾಲಿಗೆ ಯುವ ತಂಡ ಸಜ್ಜು

ಕೊಡಗು ಪ್ರಕೃತಿ ವಿಕೋಪ

ವಾರ್ತಾಭಾರತಿವಾರ್ತಾಭಾರತಿ7 Oct 2018 7:41 PM IST
share
ಯೋಧರಾಗುವ ತವಕದಲ್ಲಿ ಸಂತ್ರಸ್ತ ಯುವಕರು : ಸೇನಾ ನೇಮಕಾತಿ ರ್ಯಾಲಿಗೆ ಯುವ ತಂಡ ಸಜ್ಜು

ಮಡಿಕೇರಿ,ಅ.7 : ಕೊಡಗು ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಸಂಭವಿಸಿದ್ದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳ ಯುವಕರು ಇದೀಗ ಭಾರತೀಯ ಸೇನೆ ಸೇರಲು ಸಜ್ಜಾಗುತ್ತಿದ್ದಾರೆ. ಸಂತ್ರಸ್ತ ಕುಟುಂಬಗಳ 50ಕ್ಕೂ ಹೆಚ್ಚು ಯುವಕರು ಅ.14 ರಂದು ಮಂಡ್ಯದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪೂರ್ವ ತಯಾರಿ ನಡೆಸುತ್ತಿದ್ದಾರೆ.

ಮಡಿಕೇರಿ ಕೊಡವ ಸಮಾಜ, ಸೇನೆ ಸೇರ್ಪಡೆಗೆ ಒಲವು ತೋರಿರುವ ಯುವಕರಿಗೆ 2 ವಾರಗಳ ಉಚಿತ ತರಬೇತಿ ನೀಡಲು ಮುಂದಾಗಿದೆ. ದೈಹಿಕ ಪರೀಕ್ಷೆಯೊಂದಿಗೆ ಸೇನೆ ನಡೆಸುವ ಲಿಖಿತ ಪರೀಕ್ಷೆಗೂ ಯುವಕರನ್ನು ಸಜ್ಜುಗೊಳಿಸಲಾಗುತ್ತಿದ್ದು, ಆ ಮೂಲಕ ಉದ್ಯೋಗದ ಭದ್ರತೆ ಒದಗಿಸುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ.

ಎನ್‍ಸಿಸಿ ವಿಂಗ್‍ನ ಕರ್ನಲ್ ಬೆಳ್ಳಿಯಪ್ಪ ಮತ್ತು ನಾಯಕ್ ವೀರೇಶ್ ಅವರುಗಳು ಸೇನಾ ಭರ್ತಿಗೆ ಆಸಕ್ತಿ ತೋರಿರುವ ಯುವಕರಿಗೆ  ದೈಹಿಕ ಮತ್ತು ಲಿಖಿತ ಪರೀಕ್ಷೆಯ ತಯಾರಿ ಕುರಿತು ಮಾಹಿತಿ ನೀಡಿದರು. ನಗರದ ಜನರಲ್ ತಿಮ್ಮಯ್ಯ ಶಾಲೆಯಲ್ಲಿ ಭಾರತೀಯ ಸೇನಾ ಸೇರ್ಪೆಡೆ ವಿಧಾನ, ಅರ್ಹತೆಗಳು ಮತ್ತು ಮಾನದಂಡಗಳ ಕುರಿತು ಯುವಕರಿಗೆ ಕರ್ನಲ್ ಬೆಳಿಯಪ್ಪ ಮಾಹಿತಿ ನೀಡಿದರು. ಸೇನಾ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಯುವಕರಿಗೆ ಈಗಾಗಲೇ ಹಾಜರಾತಿ ಕಾರ್ಡ್ ವಿತರಿಸಲಾಗಿದ್ದು, ಅ.14ರ ಬೆಳ್ಳಗ್ಗೆ 4 ಗಂಟೆಗೆ ಸೇನಾ ನೇಮಕಾತಿ ನಡೆಯುವ ಮೈದಾನದಲ್ಲಿ ಖಡ್ಡಾಯವಾಗಿ ಹಾಜರಿರಬೇಕೆಂದು ಕರ್ನಲ್ ಬೆಳ್ಳಿಯಪ್ಪ ಸೂಚಿಸಿದರು.

1.6 ಕಿ.ಮೀ ರನ್ನಿಂಗ್ ಮತ್ತು ಪುಲ್‍ಅಪ್ಸ್ ಪರೀಕ್ಷೆ ಮೊದಲ ಹಂತದಲ್ಲಿ ನಡೆಯಲಿದೆ. ಈ ಎರಡೂ ಪರೀಕ್ಷೆಗೆ ತಲಾ 60 ಮತ್ತು 40 ಅಂಕಗಳನ್ನು ನಿಗಧಿ ಪಡಿಸಲಾಗುತ್ತದೆ. ರನ್ನಿಂಗ್ ಪರೀಕ್ಷೆಯಲ್ಲಿ ಪ್ರತಿ ಸೆಕೆಂಡ್‍ಗಳು ಕೂಡ ಮಹತ್ವದಾಗಿದ್ದು, ಅಂಕ ಗಳಿಕೆಗೂ ಸಹಕಾರಿಯಾಗಿರುತ್ತದೆ. ಹೀಗಾಗಿ ಓಟದ ಆರಂಭದಲ್ಲೇ ವೇಗದ ತೀವ್ರತೆಯನ್ನು ಕಾಪಾಡಿಕೊಂಡು ಗರಿಷ್ಟ ಅಂಕ ಗಳಿಕೆ ಕಡೆ ಚಿತ್ತ ಹರಿಸಬೇಕೆಂದು ಕರ್ನಲ್ ಬೆಳ್ಳಿಯಪ್ಪ ತಿಳಿಸಿದರು. ಮೊದಲ ಹಂತದ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದರೆ ನಂತರ ನಡೆಯುವ ಲಿಖಿತ ಪರೀಕ್ಷೆಗೂ ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭ ಮಾತನಾಡಿದ ನಿವೃತ್ತ ಕರ್ನಲ್ ಮುತ್ತಣ್ಣ, ಪ್ರಕೃತಿ ವಿಕೋಪದಲ್ಲಿ ಸಂತಸ್ತರಾದ ಕುಟುಂಬಗಳ ಯುವಕರನ್ನು ಭಾರತೀಯ ಸೇನೆ ಸೇರ್ಪೆಡೆಗೆ ಸಜ್ಜುಗೊಳಿಸಲು ತರಬೇತಿ ನೀಡಲಾಗುತ್ತಿದೆ. ದೇಶ ಸೇವೆಗೆ ಭಾರತೀಯ ಸೇನೆ ಉತ್ತಮ ವೇದಿಕೆಯಾಗಿದ್ದು ಆ ಮೂಲಕ ಸಂತ್ರಸ್ತ ಕುಟುಂಬಗಳ ಯುವಕರಿಗೆ ಉದ್ಯೋಗ ದೊರೆದಂತಾಗುತ್ತದೆ. ಭೂ ಸೇನೆಯೊಂದಿಗೆ ನೌಕಾದಳ ಮತ್ತು ವಾಯುಪಡೆ ಭರ್ತಿಗೂ ತರಬೇತಿ ನೀಡುವ ಚಿಂತನೆಯಿದ್ದು, ಮುಂದಿನ ದಿನಗಳಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
 ಈ ಸಂದರ್ಭ ಮಡಿಕೇರಿ ಕೊಡವ ಸಮಾಜದ ನಿರ್ದೇಶಕರುಗಳಾದ ಮಾದೇಟಿರ ಬೆಳ್ಯಪ್ಪ, ಡಾನ್ ಮತ್ತಿತ್ತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X