Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ರಾಯಭಾರ ಕಚೇರಿಯಲ್ಲೇ ಪತ್ರಕರ್ತ...

ಸೌದಿ ರಾಯಭಾರ ಕಚೇರಿಯಲ್ಲೇ ಪತ್ರಕರ್ತ ಜಮಾಲ್ ಹತ್ಯೆ: ಟರ್ಕಿ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Oct 2018 8:33 PM IST
share
ಸೌದಿ ರಾಯಭಾರ ಕಚೇರಿಯಲ್ಲೇ ಪತ್ರಕರ್ತ ಜಮಾಲ್ ಹತ್ಯೆ: ಟರ್ಕಿ  ಆರೋಪ

ಇಸ್ತಾನ್ಬುಬುಲ್, ಅ.7: ಸೌದಿ ಅರೇಬಿಯ ಮೂಲದ ಪತ್ರಕರ್ತ ಜಮಾಲ್ ಖಶೋಗಿಯನ್ನು ಕಳೆದ ವಾರ ಇಸ್ತಾನ್ಬುಲ್‌ನಲ್ಲಿರುವ ಸೌದಿ ರಾಯಭಾರ ಕಚೇರಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಟರ್ಕಿ ಆರೋಪಿಸಿದೆ. ಸೌದಿ ಕಳುಹಿಸಿದ ತಂಡದಿಂದ ಪತ್ರಕರ್ತನನ್ನು ಹತ್ಯೆ ಮಾಡಲಾಗಿದೆ ಎಂದು ಟರ್ಕಿ ಆರೋಪಿಸಿದೆ.

 ಖಶೋಗಿಯನ್ನು ಹತ್ಯೆ ಮಾಡಲು ಸೌದಿಯಿಂದ 15 ಸದಸ್ಯರ ತಂಡ ಆಗಮಿಸಿತ್ತು. ಇದೊಂದು ಪೂರ್ವಯೋಜಿತ ಹತ್ಯೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಖಶೋಗಿ ನಾಪತ್ತೆಯಾಗಿರುವ ಕುರಿತು ತನಿಖೆ ನಡೆಸಲು ಇಸ್ತಾನ್ಬುಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆದೇಶಿಸಿದ್ದಾರೆ ಎಂದು ಟರ್ಕಿಯ ಸುದ್ದಿ ಸಂಸ್ಥೆ ಅನಡೊಲು ವರದಿ ಮಾಡಿದೆ. ಮತ್ತೊಂದೆಡೆ ಖಶೋಗಿ ಸೌದಿ ರಾಯಬಾರ ಕಚೇರಿಯಿಂದ ಹೊರಗೆ ಬಂದೇ ಇಲ್ಲ ಎಂದು ಟರ್ಕಿ ಹೇಳಿಕೊಂಡಿದೆ.

ಟರ್ಕಿ ಆರೋಪವನ್ನು ಸ್ಪಷ್ಟವಾಗಿ ನಿರಾಕರಿಸಿರುವ ಸೌದಿ ಅರೇಬಿಯ ವಾಶಿಂಗ್ಟನ್ ಪೋಸ್ಟ್‌ನ ಜಾಗತಿಕ ಅಭಿಪ್ರಾಯ ವಿಭಾಗಕ್ಕೆ ಕೆಲಸ ಮಾಡುತ್ತಿದ್ದ ಖಶೋಗಿಯನ್ನು ಬಂಧನದಲ್ಲಿಡಲಾಗಿದೆ ಎಂಬುದನ್ನು ಅಲ್ಲಗಳೆದಿದೆ. ಒಂದು ವೇಳೆ ಸೌದಿ, ಖಶೋಗಿಯನ್ನು ಹತ್ಯೆ ಮಾಡಿದ್ದರೆ ಅದೊಂದು ರಾಕ್ಷಸೀಯ ಮತ್ತು ಕ್ಷಮಾರ್ಹವಲ್ಲದ ಅಪರಾಧ ಎಂದು ವಾಶಿಂಗ್ಟನ್ ಪೋಸ್ಟ್ ತಿಳಿಸಿದೆ. ಸೌದಿ ಅರೇಬಿಯದ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಅವರ ಕಟು ಟೀಕಾಕಾರರಾಗಿರುವ ಜಮಾಲ್ ಖಶೋಗಿ ಟ್ವಿಟರ್‌ನಲ್ಲಿ 1.6 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಟರ್ಕಿ ಮೂಲದ ಹಟಿಸ್ ಸೆಂಗಿಝ್ ಎಂಬಾಕೆಯನ್ನು ವಿವಾಹವಾಗುವ ಸಲುವಾಗಿ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದ ಪ್ರಮಾಣ ಪತ್ರದ ದಾಖಲೆಗಳನ್ನು ಪಡೆಯಲು ಅವರು ಮಂಗಳವಾರ ಸೌದಿ ರಾಯಭಾರ ಕಚೇರಿಗೆ ತೆರಳಿದ್ದರು. ಕಚೇರಿಯ ಹೊರಗೆ ನಾನು ಹನ್ನೊಂದು ಗಂಟೆಗಳ ಕಾಲ ಕಶೋಗಿಗಾಗಿ ಕಾದು ಕುಳಿತಿದ್ದೆ. ಆದರೆ ಅವರು ಬರಲೇ ಇಲ್ಲ ಎಂದು ಸಿಂಗಿಝ್ ತಿಳಿಸಿದ್ದಾರೆ.

ಸೌದಿ ಹೇಳಿಕೆ:

ನಮ್ಮಲ್ಲಿ ಮುಚ್ಚಿಡಲು ಏನೂ ಇಲ್ಲ, ಹಾಗಾಗಿ ಟರ್ಕಿಯ ಅಧಿಕಾರಿಗಳು ಇಲ್ಲಿಗಾಗಮಿಸಿ ನಮ್ಮ ಕಟ್ಟಡದಲ್ಲಿ ಹುಡುಕಾಟ ನಡೆಸಬಹುದು ಎಂದು ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಬುಧವಾರ ತಿಳಿಸಿದ್ದಾರೆ.

ಖಶೋಗಿಗೆ ಏನಾಯಿತು ಎಂಬುದನ್ನು ತಿಳಿಯಲು ಸೌದಿ ಕೂಡಾ ಉತ್ಸುಕವಾಗಿದೆ ಎಂದು ತಿಳಿಸಿರುವ ರಾಜಕುಮಾರ, ಖಶೋಗಿ ನಮ್ಮ ರಾಯಭಾರ ಕಚೇರಿಗೆ ಆಗಮಿಸಿದ ಐದು ನಿಮಿಷದಿಂದ ಒಂದು ಗಂಟೆಯ ಒಳಗೆ ಹೊರಗೆ ಹೋಗಿದ್ದರು ಎಂದು ನನಗೆ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X