Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಜನತೆ ನೀಡುವ ಉಪತೆರಿಗೆಯನ್ನು...

ದೇಶದ ಜನತೆ ನೀಡುವ ಉಪತೆರಿಗೆಯನ್ನು ಅಸಮರ್ಪಕವಾಗಿ ಬಳಸಿದ ಸರಕಾರ: ವಿತ್ತ ಸಚಿವಾಲಯದ ವರದಿಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ7 Oct 2018 10:02 PM IST
share
ದೇಶದ ಜನತೆ ನೀಡುವ ಉಪತೆರಿಗೆಯನ್ನು ಅಸಮರ್ಪಕವಾಗಿ ಬಳಸಿದ ಸರಕಾರ: ವಿತ್ತ ಸಚಿವಾಲಯದ ವರದಿಯಿಂದ ಬಹಿರಂಗ

ಹೊಸದಿಲ್ಲಿ, ಅ.7: ಶಿಕ್ಷಣ ಉಪತೆರಿಗೆ , ಕೃಷಿ ಕಲ್ಯಾಣ ಉಪತೆರಿಗೆ, ಸ್ವಚ್ಛ ಭಾರತ ಉಪತೆರಿಗೆ ಇತ್ಯಾದಿಗಳ ರೂಪದಲ್ಲಿ ಜನತೆ ನೀಡುವ ಸಣ್ಣಮೊತ್ತದ ಶುಲ್ಕ ಕಳೆದ ಹಲವು ವರ್ಷಗಳಿಂದ ಬೃಹತ್ ಮೊತ್ತವಾಗಿ ಬೆಳೆದಿದೆ. ಆದರೆ ಈ ಮೊತ್ತದಲ್ಲಿ ಗಣನೀಯ ಪ್ರಮಾಣದ ಹಣವನ್ನು ಸರಕಾರ ಸಂಪೂರ್ಣ ಬಳಸಿಕೊಂಡಿಲ್ಲ ಎಂಬುದು ವಿತ್ತ ಸಚಿವಾಲಯದ ಮಾಹಿತಿಯಲ್ಲಿ ತಿಳಿದುಬಂದಿದೆ.

2016-17ರಲ್ಲಿ ಉಪಕರ(ಉಪತೆರಿಗೆ) ರೂಪದಲ್ಲಿ 1,78,594 ಕೋಟಿ ರೂ. ಹಣ ಸಂಗ್ರಹವಾಗಿದೆ. ಆದರೆ ಇದರಲ್ಲಿ ಕೇವಲ 1,00,871 ಕೋಟಿ ರೂ. ಮೊತ್ತ ಮಾತ್ರ ಬಳಕೆಯಾಗಿದೆ. ಸಂಗ್ರಹಿಸಲಾದ ಉಪಕರವನ್ನು ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣಕ್ಕೆ ಬಳಸಿಕೊಳ್ಳದ ಬಗ್ಗೆ ಸಿಎಜಿ(ನಿಯಂತ್ರಕ ಮತ್ತು ಮಹಾಲೆಕ್ಕ ಪರಿಶೋಧಕರ) ವರದಿಯಲ್ಲೂ ಉಲ್ಲೇಖಿಸಲಾಗಿದೆ. ಜನತೆಯಿಂದ ಹೆಚ್ಚುವರಿ ಹಣ ಸಂಗ್ರಹಿಸುವ ಮಾಧ್ಯಮವಾಗಿರುವ ಉಪಕರದ ಮೂಲಕ ಸಂಗ್ರಹಿಸಲಾಗುವ ಮೊತ್ತ ಸಮರ್ಪಕವಾಗಿ ಬಳಕೆಯಾಗಬೇಕು. ಇಲ್ಲದಿದ್ದರೆ ಇದು ಜನತೆಯ ಮೇಲೆ ಹೊರಿಸಲಾದ ಅನವಶ್ಯಕ ಹೊರೆಯಾಗಿರುತ್ತದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಉಪತೆರಿಗೆಯು ಆದಾಯವನ್ನು ಹೆಚ್ಚಿಸುವ ಕ್ರಮವಾಗಿದೆ. ಕಾರ್ಪೊರೇಟ್ ಕ್ಷೇತ್ರಕ್ಕೆ ಸರಕಾರ ಲಕ್ಷಾಂತರ ಕೋಟಿ ರೂ.ಗಳಷ್ಟು ವಿನಾಯಿತಿ ನೀಡುತ್ತದೆ. ಇನ್ನೊಂದೆಡೆ ಜನಸಾಮಾನ್ಯರ ಮೇಲೆ ಹೆಚ್ಚುವರಿ ಉಪತೆರಿಗೆ ವಿಧಿಸುತ್ತದೆ. ಸಮಾಜದ ತಳಹಂತದಿಂದ ಹಣವನ್ನು ಎಳೆದು ತೆಗೆದು ಎತ್ತರದ ಹಂತಕ್ಕೆ ವರ್ಗಾಯಿಸಿದಂತಾಗುತ್ತದೆ. ಜನಸಾಮಾನ್ಯರಿಂದ ಉಪಕರದ ರೂಪದಲ್ಲಿ ಹಣವನ್ನು ಹೀರಿ ತೆಗೆಯಲಾಗುತ್ತದೆ ಎಂದು ಕೃಷಿ ನೀತಿ ತಜ್ಞ ದೇವಿಂದರ್ ಶರ್ಮ ಹೇಳುತ್ತಾರೆ.

ಉಪಕರದ ಅಸಮರ್ಪಕ ಬಳಕೆಯ ಬಗ್ಗೆ ಸಂಸದೀಯ ಸ್ಥಾಯಿ ಸಮಿತಿಯ ವರದಿಯಲ್ಲೂ ಉಲ್ಲೇಖಿಸಲಾಗಿದೆ. ಗೊತ್ತುಪಡಿಸಿದ ಉದ್ದೇಶಕ್ಕಾಗಿ ಸಂಗ್ರಹಿಸುವ ಉಪಕರವನ್ನು ಆ ಉದ್ದೇಶಕ್ಕಾಗಿ ಬಳಸಿಕೊಳ್ಳದಿದ್ದರೆ ಅರ್ಥವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X