Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಸ್ವತಂತ್ರ ಕಾರ್ಯನೀತಿ ಹೊಂದಿದೆ:...

ಭಾರತ ಸ್ವತಂತ್ರ ಕಾರ್ಯನೀತಿ ಹೊಂದಿದೆ: ಸೇನಾ ಮುಖ್ಯಸ್ಥ ರಾವತ್

ವಾರ್ತಾಭಾರತಿವಾರ್ತಾಭಾರತಿ7 Oct 2018 11:00 PM IST
share
ಭಾರತ ಸ್ವತಂತ್ರ ಕಾರ್ಯನೀತಿ ಹೊಂದಿದೆ: ಸೇನಾ ಮುಖ್ಯಸ್ಥ ರಾವತ್

ಹೊಸದಿಲ್ಲಿ, ಅ.7: ಭಾರತದ ಬಳಿ ಬಲಿಷ್ಠ ಸೇನಾಪಡೆಯಿದ್ದು ನಾವು ಸ್ವತಂತ್ರ ಕಾರ್ಯನೀತಿ ಹೊಂದಿದ್ದೇವೆ. ಈ ಕಾರಣದಿಂದಲೇ ರಶ್ಯವು ಭಾರತದ ಸೇನೆ ಮತ್ತು ರಕ್ಷಣಾ ಪಡೆಗಳೊಂದಿಗೆ ಸಹಯೋಗಿಯಾಗಲು ಬಯಸುತ್ತಿದೆ ಎಂದು ಸೇನಾಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಭಾರತ ಮತ್ತು ರಶ್ಯ ಶನಿವಾರ ಎಸ್-400 ಟ್ರಯಂಫ್ ಕ್ಷಿಪಣಿ ಖರೀದಿ ಸೇರಿದಂತೆ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದವು. ರಶ್ಯದೊಂದಿಗೆ ಶಸ್ತ್ರ ವ್ಯವಹಾರ ಮಾಡುವ ದೇಶಗಳಿಗೆ ನಿರ್ಬಂಧ ವಿಧಿಸಲಾಗುವುದು ಎಂಬ ಅಮೆರಿಕದ ಎಚ್ಚರಿಕೆಯ ನಡುವೆಯೇ ಭಾರತ ಈ ಒಪ್ಪಂದ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ರಾವತ್ ಈ ಹೇಳಿಕೆ ನೀಡಿದ್ದಾರೆ. ರಶ್ಯದಿಂದ ಕಮೊವ್ ಹೆಲಿಕಾಪ್ಟರ್‌ಗಳು ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಭಾರತ ಉತ್ಸುಕವಾಗಿದೆ . ನಮ್ಮ ಕಾರ್ಯತಂತ್ರಕ್ಕೆ ಹೊಂದಿಕೊಂಡು ನಮ್ಮ ಅವಶ್ಯಕತೆಗಳನ್ನು ಪಡೆದುಕೊಳ್ಳಲು ನಾವು ಸ್ವತಂತ್ರರಾಗಿದ್ದೇವೆ ಎಂದು ರಾವತ್ ಹೇಳಿದರು.

ಜ ಕೆ.ವಿ.ಕೃಷ್ಣರಾವ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಶ್ಯಕ್ಕೆ ಆರು ದಿನ ಭೇಟಿ ನೀಡಿ ಶನಿವಾರ ಅವರು ಸ್ವದೇಶಕ್ಕೆ ವಾಪಸಾಗಿದ್ದರು. ರಶ್ಯದ ಭೇಟಿಯನ್ನು ಉಲ್ಲೇಖಿಸಿದ ಅವರು, ರಶ್ಯದೊಂದಿಗೆ ಒಪ್ಪಂದ ಮಾಡಿಕೊಂಡರೆ ನಿರ್ಬಂಧ ವಿಧಿಸಲಾಗುವುದು ಎಂಬ ಅಮೆರಿಕದ ಎಚ್ಚರಿಕೆಯ ಬಗ್ಗೆ ಸಭೆಯೊಂದರಲ್ಲಿ ರಶ್ಯದ ಸೇನಾಧಿಕಾರಿ ತನ್ನ ಪ್ರತಿಕ್ರಿಯೆ ಬಯಸಿದರು. ಆಗ ತಾನು- ಹೌದು ಈ ಎಚ್ಚರಿಕೆಯನ್ನು ನಾವೂ ಗಮನಿಸಿದ್ದೇವೆ. ಆದರೆ ನಾವು ಸ್ವತಂತ್ರ ಕಾರ್ಯನೀತಿಯನ್ನು ಹೊಂದಿದ್ದೇವೆ ಎಂದು ಉತ್ತರಿಸಿದ್ದೆ ಎಂದು ತಿಳಿಸಿದರು. ನಾವು ನಿರ್ಬಂಧದ ಬಗ್ಗೆ ಮಾತಾಡುತ್ತಿರುವಾಗ ಮತ್ತು ನೀವು ಈ ಪ್ರಶ್ನೆ ಕೇಳುತ್ತಿರುವಾಗ ಅಲ್ಲಿ (ಭಾರತದಲ್ಲಿ) ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಎಸ್-400 ಟ್ರಯಂಫ್ ಖರೀದಿ ಕುರಿತ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ. ಭವಿಷ್ಯದಲ್ಲಿ ಅಮೆರಿಕ ಕ್ರಮ ಕೈಗೊಳ್ಳಬಹುದು ಎಂಬ ಸವಾಲಿನ ಮಧ್ಯೆಯೇ ನಾವು ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಇದು ನಮ್ಮ ಸ್ವತಂತ್ರ ಕಾರ್ಯನೀತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಉತ್ತರಿಸಿದ್ದೆ .

ಇದೇ ಸಭೆಯಲ್ಲಿ ಅಮೆರಿಕ-ಭಾರತ ನಡುವಿನ ಸಂಬಂಧ ವೃದ್ಧಿಸುತ್ತಿರುವ ಬಗ್ಗೆ ರಶ್ಯದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದರು. ಆದರೆ ಕೆಲವು ತಂತ್ರಜ್ಞಾನಗಳನ್ನು ಪಡೆದುಕೊಳ್ಳಲು ನಮಗೆ ಅಮೆರಿಕದ ಸಹಯೋಗ ಅಗತ್ಯವಾಗಿದೆ. ಆದರೆ ನಾವು ಸ್ವತಂತ್ರ ಕಾರ್ಯನೀತಿಯನ್ನು ಹೊಂದಿದ್ದೇವೆ ಎಂದವರಿಗೆ ಭರವಸೆ ನೀಡಿದೆ ಎಂದು ರಾವತ್ ಹೇಳಿದರು. ಕಾರ್ಯತಂತ್ರದ ದೃಷ್ಟಿಯಿಂದ ನಮಗೆ ಮಹತ್ವವೆನಿಸುವ ಕ್ಷೇತ್ರದಲ್ಲಿ ರಶ್ಯದೊಂದಿಗೆ ಸಹಯೋಗ ಮುಂದುವರಿಯಲಿದೆ . ಅಂತರಿಕ್ಷ ಕ್ಷೇತ್ರದ ತಂತ್ರಜ್ಞಾನವನ್ನು ರಶ್ಯದಿಂದ ಪಡೆಯಲು ಭಾರತ ಉತ್ಸುಕವಾಗಿದೆ ಎಂದು ರಾವತ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X