Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸುಲ್ತಾನ್ ಜೊಹೊರ್ ಕಪ್: ಭಾರತದ ಜೂ. ಹಾಕಿ...

ಸುಲ್ತಾನ್ ಜೊಹೊರ್ ಕಪ್: ಭಾರತದ ಜೂ. ಹಾಕಿ ತಂಡಕ್ಕೆ ಸತತ ಎರಡನೇ ಜಯ

ವಾರ್ತಾಭಾರತಿವಾರ್ತಾಭಾರತಿ7 Oct 2018 11:52 PM IST
share
ಸುಲ್ತಾನ್ ಜೊಹೊರ್ ಕಪ್: ಭಾರತದ ಜೂ. ಹಾಕಿ ತಂಡಕ್ಕೆ ಸತತ ಎರಡನೇ ಜಯ

ಜೊಹೊರ್ ಬಹ್ರು, ಅ.7: ಭಾರತದ ಜೂನಿಯರ್ ಪುರುಷರ ಹಾಕಿ ತಂಡ 8ನೇ ಆವೃತ್ತಿಯ ಸುಲ್ತಾನ್ ಆಫ್ ಜೊಹೊರ್ ಕಪ್‌ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ.

ರವಿವಾರ ನಡೆದ ತನ್ನ 2ನೇ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲೆಂಡ್ ತಂಡವನ್ನು 7-1 ಅಂತರದಿಂದ ಹೀನಾಯವಾಗಿ ಸೋಲಿಸಿತು. ಟೂರ್ನಮೆಂಟ್‌ನ ಮೊದಲ ದಿನವಾದ ಶನಿವಾರ ಭಾರತ ತಂಡ ಆತಿಥೇಯ ಮಲೇಷ್ಯಾ ವಿರುದ್ಧ 2-1 ಅಂತರದಿಂದ ರೋಚಕ ಜಯ ಸಾಧಿಸಿ ಶುಭಾರಂಭ ಮಾಡಿತ್ತು.

 ಪ್ರಭ್ಜೋತ್ ಸಿಂಗ್(6ನೇ ನಿಮಿಷ), ಶೀಲಾನಂದ ಲಾಕ್ರಾ(15ನೇ, 43ನೇ ನಿಮಿಷ), ಹರ್ಮನ್‌ಜಿತ್ ಸಿಂಗ್(21ನೇ ನಿಮಿಷ), ಮುಹಮ್ಮದ್ ಫರಾಝ್(23ನೇ ನಿಮಿಷ), ಅಭಿಷೇಕ್ (50ನೇ ನಿಮಿಷ) ಹಾಗೂ ನಾಯಕ ಮನ್‌ದೀಪ್ ಮೊರ್(60ನೇ ನಿಮಿಷ) ಭಾರತದ ಗೆಲುವಿಗೆ ನೆರವಾದರು.

ನ್ಯೂಝಿಲೆಂಡ್ ಪರ 53ನೇ ನಿಮಿಷದಲ್ಲಿ ಸ್ಯಾಮ್ ಹಿಹಾ ಸಮಾಧಾನಕರ ಗೋಲು ಬಾರಿಸಿದರು.

ಕಳೆದ ವರ್ಷ ಕಂಚಿನ ಪದಕ ಜಯಿಸಿದ್ದ ಭಾರತ ಆರನೇ ನಿಮಿಷದಲ್ಲಿ ಮೊದಲ ಗೋಲು ಬಾರಿಸುವುದರೊಂದಿಗೆ ಉತ್ತಮ ಆರಂಭ ಪಡೆದಿತ್ತು. ಈ ವರ್ಷಾರಂಭದಲ್ಲಿ ಮಲೇಶ್ಯಾದಲ್ಲಿ ನಡೆದ ಸುಲ್ತಾನ್ ಅಝ್ಲಾನ್ ಶಾ ಹಾಕಿಯಲ್ಲಿ ಹಿರಿಯರ ತಂಡದಲ್ಲಿ ಚೊಚ್ಚಲ ಪಂದ್ಯವನ್ನಾಡಿದ್ದ ಶೀಲಾನಂದ ಲಾಕ್ರಾ ಅವಳಿ ಗೋಲು ಬಾರಿಸಿ ಗಮನ ಸೆಳೆದರು.

ನ್ಯೂಝಿಲೆಂಡ್ ಆರಂಭಿಕ ಹಿನ್ನಡೆಯಿಂದ ಚೇತರಿ ಸಿಕೊಳ್ಳಲು ಯತ್ನಿಸಿತು. ಆದರೆ, ಭಾರತದ ರಕ್ಷಣಾ ವಿಭಾಗಇದಕ್ಕೆ ಅವಕಾಶ ನೀಡಲಿಲ್ಲ. ಭಾರತದ ಗೋಲ್‌ಕೀಪರ್‌ಪಂಕಜ್ ರಜಕ್ ನ್ಯೂಝಿಲೆಂಡ್‌ಗೆ ಹಲವು ಗೋಲು ಗಳನ್ನು ನಿರಾಕರಿಸಿ ಉತ್ತಮ ಪ್ರದರ್ಶನ ನೀಡಿದರು.

ಭಾರತದ ಫಾರ್ವರ್ಡ್‌ಗಳು 21ನೇ ಹಾಗೂ 23ನೇ ನಿಮಿಷದಲ್ಲಿ ಬೆನ್ನುಬೆನ್ನಿಗೆ ಗೋಲು ದಾಖಲಿಸಿ ನ್ಯೂಝಿಲೆಂಡ್‌ಗೆ ಒತ್ತಡ ಹೇರಿದರು. 21ನೇ ನಿಮಿಷದಲ್ಲಿ ಹರ್ಮನ್‌ಜಿತ್ ಫೀಲ್ಡ್ ಸ್ಟ್ರೈಕ್‌ನಿಂದ ಗೋಲು ಬಾರಿಸಿದರು. ಮುಹಮ್ಮದ್ ಫರಾಝ್ ಪೆನಾಲ್ಟಿ ಕಾರ್ನರ್‌ನ್ನು ಗೋಲಾಗಿ ಪರಿವರ್ತಿಸಿದರು. ಮೂರನೇ ಕ್ವಾರ್ಟರ್‌ನಲ್ಲಿ ಎರಡೂ ತಂಡಗಳ ಆಟದ ವೇಗ ಸ್ವಲ್ಪ ಕಡಿಮೆಯಾಗಿತ್ತು. 43ನೇ ನಿಮಿಷದಲ್ಲಿ ಲಾಕ್ರಾ ಮತ್ತೊಂದು ಗೋಲು ಬಾರಿಸಿದರು. 50ನೇ ನಿಮಿಷದಲ್ಲಿ ಗೋಲು ಬಾರಿಸಿದ ಅಭಿಷೇಕ್ ಭಾರತಕ್ಕೆ 6-0 ಮುನ್ನಡೆ ಒದಗಿಸಿಕೊಟ್ಟರು. 3 ನಿಮಿಷದ ಬಳಿಕ ನ್ಯೂಝಿಲೆಂಡ್‌ನ ಸ್ಯಾಮ್ ಸಮಾಧಾನಕರ ಗೋಲು ಬಾರಿಸಿದರು.

ನಾಯಕ ಮನ್‌ದೀಪ್ ಪೆನಾಲ್ಟಿ ಕಾರ್ನರ್‌ರನ್ನು ಗೋಲಾಗಿ ಪರಿವರ್ತಿಸಿ ಸ್ಕೋರ್ ಶೀಟ್‌ನಲ್ಲಿ ತನ್ನ ಹೆಸರನ್ನು ಸೇರಿಸಿದರು. ಈ ಮೂಲಕ ತನ್ನ ತಂಡಕ್ಕೆ ಭಾರೀ ಅಂತರದ ಗೆಲುವಿಗೆ ನೆರವಾದರು.

ಭಾರತ ಅ.9 ರಂದು ಆಡಲಿರುವ ತನ್ನ ಮೂರನೇ ಪಂದ್ಯದಲ್ಲಿ ಜಪಾನ್ ತಂಡವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X