Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಯೂತ್ ಒಲಿಂಪಿಕ್ ಗೇಮ್ಸ್ ಗೆ ಅದ್ದೂರಿ...

ಯೂತ್ ಒಲಿಂಪಿಕ್ ಗೇಮ್ಸ್ ಗೆ ಅದ್ದೂರಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Oct 2018 11:57 PM IST
share
ಯೂತ್ ಒಲಿಂಪಿಕ್ ಗೇಮ್ಸ್ ಗೆ ಅದ್ದೂರಿ ಚಾಲನೆ

ಬ್ಯುನಸ್ ಐರಿಸ್, ಅ.7: ಮುಂದಿನ 12 ದಿನಗಳ ಕಾಲ ನಡೆಯುವ ಯೂತ್ ಒಲಿಂಪಿಕ್ ಗೇಮ್ಸ್‌ಗೆ ರವಿವಾರ ಚಾಲನೆ ನೀಡಲಾಗಿದ್ದು 32 ಕ್ರೀಡೆಗಳ 240ಕ್ಕೂ ಅಧಿಕ ಸ್ಪರ್ಧೆಗಳಲ್ಲಿ 4,000 ಅಥ್ಲೀಟ್‌ಗಳು ಭಾಗವಹಿಸಲಿದ್ದಾರೆ. ಆಧುನಿಕ ಯೂತ್ ಒಲಿಂಪಿಕ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿ ಉದ್ಘಾಟನಾ ಸಮಾರಂಭವು ಸ್ಟೇಡಿಯಂನೊಳಗೆ ನಡೆಯದೇ ನಗರದ ಬೀದಿಯಲ್ಲಿ ವರ್ಣರಂಜಿತವಾಗಿ ನಡೆಯಿತು. ಈ ಸಮಾರಂಭಕ್ಕೆ 2 ಲಕ್ಷಕ್ಕೂ ಅಧಿಕ ಪ್ರೇಕ್ಷಕರು ಸಾಕ್ಷಿಯಾಗಿದ್ದಾರೆ. ಶೂಟರ್ ಮನು ಭಾಕರ್ ಧ್ವಜಧಾರಿಯಾಗಿ ಭಾರತದ ಅಥ್ಲೀಟ್‌ಗಳ ತಂಡವನ್ನು ಮುನ್ನಡೆಸಿದರು.

ಉದ್ಘಾಟನೆಯ ಸಂಕೇತವಾಗಿ ಬ್ಯುನಸ್ ಐರಿಸ್‌ನ ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ ಮೂಡಿತು. ಜೂನ್‌ನಲ್ಲಿ ಥಾಯ್ಲೆಂಡ್‌ನ ನೆರೆಪೀಡಿತ ಗುಹೆಯೊಳಗೆ ಎರಡು ವಾರಗಳ ಕಾಲ ಸಿಲುಕಿಕೊಂಡು ಜೀವಂತವಾಗಿ ಹೊರಬಂದು ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದ ‘ವೈರ್ಲ್ಡ್ ಬೋರ್ಸ್’ ಫುಟ್ಬಾಲ್ ತಂಡದ ಸದಸ್ಯರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದ್ದು, ಅಂತರ್‌ರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಕ್, ‘ವೈರ್ಲ್ಡ್ ಬೋರ್ಸ್’ ತಂಡದ ಶಕ್ತಿ ಹಾಗೂ ಸಂಕಷ್ಟದಿಂದ ಬೇಗನೇ ಚೇತರಿಸಿಕೊಂಡ ಸಾಮರ್ಥ್ಯವನ್ನು ಶ್ಲಾಘಿಸಿದರು.

‘‘1978ರ ವಿಶ್ವಕಪ್‌ನ ಬಳಿಕ ಇದು ಅರ್ಜೆಂಟೀನದ ಪಾಲಿಗೆ ಅತ್ಯಂತ ಪ್ರಮುಖ ಕ್ರೀಡಾಕೂಟವಾಗಿದೆ’’ ಎಂದು ಅರ್ಜೆಂಟೀನ ಒಲಿಂಪಿಕ್ಸ್ ಸಮಿತಿಯ ಅಧ್ಯಕ್ಷ ಗೆರಾರ್ಡೊ ವರ್ಥೆನ್ ಹೇಳಿದ್ದಾರೆ.

15 ರಿಂದ 18ರ ವಯೋಮಾನದವರಿಗೆ ಬ್ಯುನಸ್‌ಐರಿಸ್‌ನಲ್ಲಿ ನಡೆಯುವ ಯೂತ್ ಗೇಮ್ಸ್‌ನಲ್ಲಿ ಭಾಗವಹಿಸುವ ಅವಕಾಶವಿದ್ದು 206 ತಂಡಗಳು ಭಾಗವಹಿಸಲಿವೆ.

ಭಾರತದ 46 ಅಥ್ಲೀಟ್‌ಗಳ ಸಹಿತ 68 ಸದಸ್ಯರುಗಳನ್ನೊಳಗೊಂಡ ನಿಯೋಗ ಗೇಮ್ಸ್‌ನಲ್ಲಿ ಭಾಗವಹಿಸಲು ಆಗಮಿಸಿದೆ. ಭಾರತ ಪ್ರತಿಷ್ಠಿತ ಟೂರ್ನಿಯಲ್ಲಿ 13 ಕ್ರೀಡೆಗಳಲ್ಲಿ ಸ್ಪರ್ಧಿಸಲಿದೆ.

ಈ ಬಾರಿ ಯೂತ್ ಒಲಿಂಪಿಕ್ಸ್‌ಗೆ ಭಾರತ ಗರಿಷ್ಠ ಸಂಖ್ಯೆಯ ಅಥ್ಲೀಟ್‌ಗಳನ್ನು ಕಳುಹಿಸಿಕೊಟ್ಟಿದೆ. ಹಾಕಿಯಲ್ಲಿ 18 ಮಂದಿ(ಪುರುಷರ ಹಾಗೂ ಮಹಿಳಾ ತಂಡದಲ್ಲಿ ತಲಾ 9)ಭಾಗವಹಿಸುತ್ತಿದ್ದಾರೆ. ಟ್ರಾಕ್ ಆ್ಯಂಡ್ ಫೀಲ್ಡ್‌ನಲ್ಲಿ 7 ಅಥ್ಲೀಟ್‌ಗಳು ಸ್ಪರ್ಧಿಸುತ್ತಿದ್ದಾರೆ.

►ಗೇಮ್ಸ್‌ನಲ್ಲಿ ಭಾಗವಹಿಸುವ ಭಾರತದ ಇತರ ಸ್ಪರ್ಧಿಗಳು: ಶೂಟಿಂಗ್(4), ರಿಕರ್ವ್ ಆರ್ಚರಿ(2), ಬ್ಯಾಡ್ಮಿಂಟನ್(2), ಸ್ವಿಮ್ಮಿಂಗ್(2), ಟೇಬಲ್ ಟೆನಿಸ್(2), ವೇಟ್‌ಲಿಫ್ಟಿಂಗ್(2),ಕುಸ್ತಿ(2), ರೋವಿಂಗ್(2), ಬಾಕ್ಸಿಂಗ್(1), ಜುಡೋ(1), ಸ್ಪೋರ್ಟ್ ಕ್ಲೈಬಿಂಗ್(1).

ಕಾಮನ್‌ವೆಲ್ತ್ ಗೇಮ್ಸ್ ಹಾಗೂ ವಿಶ್ವಕಪ್‌ನಲ್ಲಿ 10 ಮೀ. ಏರ್ ಪಿಸ್ತೂಲ್‌ನಲ್ಲಿ ಚಿನ್ನದ ಪದಕ ಜಯಿಸಿರುವ 16ರ ಹರೆಯದ ಭಾಕರ್ ಯೂತ್ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಗೆಲ್ಲುವ ನೆಚ್ಚಿನ ಅಥ್ಲೀಟ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X