Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅ.24 ರಿಂದ ಬಿಆರ್‌ಟಿಎಸ್ ಬಸ್ ಸೇವೆ...

ಅ.24 ರಿಂದ ಬಿಆರ್‌ಟಿಎಸ್ ಬಸ್ ಸೇವೆ ಧಾರವಾಡದ ವರೆಗೆ ವಿಸ್ತರಣೆ: ದರ್ಪಣ್ ಜೈನ್

ವಾರ್ತಾಭಾರತಿವಾರ್ತಾಭಾರತಿ8 Oct 2018 6:52 PM IST
share
ಅ.24 ರಿಂದ ಬಿಆರ್‌ಟಿಎಸ್ ಬಸ್ ಸೇವೆ ಧಾರವಾಡದ ವರೆಗೆ ವಿಸ್ತರಣೆ: ದರ್ಪಣ್ ಜೈನ್

ಧಾರವಾಡ, ಅ.6: ಅಕ್ಟೊಬರ್ 2 ರಂದು ಹುಬ್ಬಳ್ಳಿಯಲ್ಲಿ ಪ್ರಾಯೋಗಿಕವಾಗಿ ಆರಂಭವಾಗಿರುವ ಬಿಆರ್‌ಟಿಎಸ್ ಬಸ್ ಸಂಚಾರವನ್ನು ಬರುವ 24 ರಿಂದ ಧಾರವಾಡದವರೆಗೆ ವಿಸ್ತರಿಸಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದರ್ಪಣ್ ಜೈನ್ ತಿಳಿಸಿದ್ದಾರೆ.

ಧಾರವಾಡ ನಗರದ ಮಿತ್ರ ಸಮಾಜ ಆವರಣದಲ್ಲಿರುವ ಬಿಆರ್‌ಟಿಎಸ್ ಬಸ್ ನಿಲ್ದಾಣದಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಆರ್‌ಟಿಎಸ್ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಹುಬ್ಬಳ್ಳಿಯ ಬಿಎಸ್ಸೆನ್ನೆಲ್ ಬಸ್ ನಿಲ್ದಾಣದಿಂದ ಈಗ ನಿತ್ಯ ಐದು ಬಿಆರ್‌ಟಿಎಸ್ ಬಸ್‌ಗಳು ಉಣಕಲ್‌ವರೆಗೆ ಸಂಚರಿಸುತ್ತಿವೆ. ಅ.10 ರಿಂದ ರಾಯಪೂರ ವರೆಗೆ ಮತ್ತು ನಂತರದ ದಿನಗಳಲ್ಲಿ ಧಾರವಾಡದ ಟೊಲ್‌ನಾಕಾವರೆಗೆ ಬಸ್ ಸಂಚಾರವನ್ನು ಆರಂಭಿಸಲಾಗುವುದು. ಅ.24 ರಿಂದ ಪ್ರಾಯೋಗಿಕವಾಗಿ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಆರ್‌ಟಿಎಸ್ ಬಸ್‌ಗಳು ಸಂಚರಿಸಲಿವೆ ಎಂದು ಅವರು ಹೇಳಿದರು.

ಪ್ರಯಾಣಿಕರ ಅನುಕೂಲಕ್ಕಾಗಿ ಬಿಆರ್‌ಟಿಎಸ್ ಬಸ್ ನಿಲ್ದಾಣಗಳ ಹತ್ತಿರ ಅಗತ್ಯವಿರುವಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮತ್ತೆ ಸಮಿಕ್ಷೆ ಮಾಡಿದ್ದು, ಇನ್ನು ಬೇಕಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ದರ್ಪಣ್ ಜೈನ್ ತಿಳಿಸಿದರು.

ಅವಳಿ ನಗರದಲ್ಲಿ ಸಂಚರಿಸುತ್ತಿರುವ ಬೇಂದ್ರೆ ಖಾಸಗಿ ಬಸ್ ಸೇವೆಯ ಪರವಾನಿಗೆ ಅವಧಿ ಜೂನ್ 2019ಕ್ಕೆ ಮುಗಿಯಲಿದೆ. ಅವಳಿ ನಗರದ ನಾಗರಿಕರೂ ಸೇರಿದಂತೆ ನಗರಕ್ಕೆ ಆಗಮಿಸುವ ಬೇರೆ ಊರುಗಳ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ನೀಡಲು ಬಿಆರ್‌ಟಿಎಸ್ ಬದ್ಧವಾಗಿರುವುದರಿಂದ ಖಾಸಗಿ ಬಸ್ ಸೇವೆಯ ಪರವಾನಿಗೆ ಅವಧಿ ಮುಗಿದ ನಂತರ ನವೀಕರಣ ಮಾಡದಂತೆ ಸರಕಾರಕ್ಕೆ ಕೋರಲಾಗಿದೆ ಎಂದು ಅವರು ತಿಳಿಸಿದರು. ಬಿಆರ್‌ಟಿಎಸ್ ಬಸ್ ಸೇವೆಯೊಂದಿಗೆ ನಗರ ಸಾರಿಗೆಯನ್ನು ಸಮನ್ವಯಗೊಳಿಸಿ ನಗರದ ತುಂಬಾ ಸಂಚರಿಸಲು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಒಂದೇ ಟಿಕೆಟ್ ಅನ್ವಯವಾಗುವಂತೆ ಸ್ಮಾರ್ಟ್‌ಕಾರ್ಡ್ ನೀಡಲು ಯೋಚಿಸಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮ ಪ್ರಯೋಗವಾಗಲಿದೆ. ಪ್ರಾಯೋಗಿಕ ಬಿಆರ್‌ಟಿಎಸ್ ಸಂಚಾರ ಸೇವೆಗೆ ಅವಳಿನಗರದ ನಾಗರಿಕರಿಂದ ಉತ್ತಮ ಸ್ಪಂದನೆ ದೊರಕಿದೆ. ಸ್ವಚ್ಛತೆ, ಶಿಸ್ತು ಮತ್ತು ಸಂಯಮದಿಂದ ಸಾರ್ವಜನಿಕರು ಬಿಆರ್‌ಟಿಎಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಅವರು ಹೇಳಿದರು.

ಅವಳಿನಗರದ ನಾಗರಿಕರ ಮತ್ತು ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಹಕಾರದಿಂದ ಬಿಆರ್‌ಟಿಎಸ್ ಬಸ್ ಸೇವೆ ರಾಷ್ಟ್ರಕ್ಕೆ ಮಾದರಿಯಾಗಲಿದೆ. ಈ ಉತ್ತಮ ಸಂಚಾರ ವ್ಯವಸ್ಥೆಯಿಂದ ಅಭಿವೃದ್ಧಿಗೆ ಇನ್ನಷ್ಟು ಅವಕಾಶವಾಗಲಿದೆ ಎಂದು ದರ್ಪಣ್ ಜೈನ್ ತಿಳಿಸಿದರು.

ಈ ಸಂದರ್ಭದಲ್ಲಿ ಎನ್.ಡಬ್ಲು.ಕೆ.ಆರ್.ಟಿ.ಸಿ ಹಾಗೂ ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಮತ್ತು ಬಿಆರ್‌ಟಿಎಸ್ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X