Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಸಾಲುಸಾಲು ಚುನಾವಣೆಯಿಂದ...

ಶಿವಮೊಗ್ಗ: ಸಾಲುಸಾಲು ಚುನಾವಣೆಯಿಂದ ಅಭಿವೃದ್ದಿಗೆ ಅಡ್ಡಗಾಲು

ಮಾದರಿ ನೀತಿ-ಸಂಹಿತೆಗಳ ಭಾರಕ್ಕೆ ಆಡಳಿತ ಯಂತ್ರ ತತ್ತರ

ವರದಿ : ಬಿ. ರೇಣುಕೇಶ್ವರದಿ : ಬಿ. ರೇಣುಕೇಶ್8 Oct 2018 10:58 PM IST
share
ಶಿವಮೊಗ್ಗ: ಸಾಲುಸಾಲು ಚುನಾವಣೆಯಿಂದ ಅಭಿವೃದ್ದಿಗೆ ಅಡ್ಡಗಾಲು

ಶಿವಮೊಗ್ಗ, ಅ. 8: ಒಂದರ ಹಿಂದೊಂದರಂತೆ ಎದುರಾಗುತ್ತಿರುವ ಸಾಲುಸಾಲು ಚುನಾವಣೆಗಳು, ಮಾದರಿ ನೀತಿ-ಸಂಹಿತೆ ಪರಿಣಾಮದಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಡೆತಡೆಯಾಗುತ್ತಿದೆ. ಚುನಾವಣೆ ನಡೆಸುವುದರಲ್ಲಿಯೇ ಆಡಳಿತ ಯಂತ್ರ ಕಾರ್ಯನಿರತವಾಗಿದ್ದು, ಚುನಾವಣಾ ವೆಚ್ಚ, ಅಧಿಕಾರ ಚಲಾಯಿಸಲು ಉಂಟಾಗುತ್ತಿರುವ ಅಡ್ಡಿಯಿಂದ ಜನಪ್ರತಿನಿಧಿಗಳು ಹೈರಾಣಾಗಿದ್ದಾರೆ. ಎಲೆಕ್ಷನ್‍ಗಳಿಂದ ಜಿಲ್ಲೆಯ ಅಭಿವೃದ್ದಿ ಯೋಜನೆಗಳಿಗೆ ಗ್ರಹಣ ಹಿಡಿಯುವಂತಾಗಿದೆ. ಅಕ್ಷರಶಃ ಆಡಳಿತ ಯಂತ್ರ ಸ್ತಬ್ದಗೊಳ್ಳುವಂತಾಗಿದೆ. 

ಎಲ್ಲದಕ್ಕಿಂತ ಮುಖ್ಯವಾಗಿ ನೀತಿ-ಸಂಹಿತೆಗಳ ನೇರ ಪರಿಣಾಮ ಜನಸಾಮಾನ್ಯರ ಮೇಲೆ ಬೀರುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸಕಾರ್ಯ ಮಾಡಿಕೊಳ್ಳಲಾಗದೆ ಪರಿತಪಿಸುವಂತಾಗಿದೆ. ಅಲೆದಾಡುವಂತಾಗಿದೆ. ಇನ್ನಿಲ್ಲದ ಸಂಕಷ್ಟ ಅನುಭವಿಸುವಂತಾಗಿದೆ. ಆದರೆ ಕೆಲವರಿಗೆ ಸಾಲುಸಾಲು ಚುನಾವಣೆಗಳು ಅಕ್ಷರಶಃ ವರವಾಗಿ ಪರಿಣಮಿಸಿವೆ. ಸುಲಭವಾಗಿ ಹಣ ಸಂಪಾದಿಸುವ ಉದ್ಯೋಗದಂತಾಗಿವೆ.

ಚುನಾವಣಾ ಪರ್ವ: ಕಳೆದ ಏಪ್ರಿಲ್ - ಮೇ ತಿಂಗಳಲ್ಲಿ ಘೋಷಣೆಯಾದ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಿಂದ, ಸರಿಸುಮಾರು 2 ತಿಂಗಳ ಕಾಲ ಈ ಚುನಾವಣೆಯಲ್ಲಿಯೇ ಜಿಲ್ಲೆಯ ಆಡಳಿತ ಯಂತ್ರ ಮುಳುಗಿತ್ತು. ಇನ್ನೇನೂ ಈ ಚುನಾವಣೆ ಪೂರ್ಣಗೊಂಡು ಎಲ್ಲವೂ ಸಹಜ ಸ್ಥಿತಿಗೆ ಮರಳಲಿದೆ ಎಂಬ ಸ್ಥಿತಿಯಲ್ಲಿರುವಾಗಲೇ, ವಿಧಾನಪರಿಷತ್ ಚುನಾವಣೆ ಬಂದಿತ್ತು. 

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸುಮಾರು ಒಂದು ತಿಂಗಳ ಕಾಲ ಜಿಲ್ಲೆಯಾದ್ಯಂತ ನೀತಿ-ಸಂಹಿತೆ ಜಾರಿಗೊಳಿಸಲಾಗಿತ್ತು. ಈ ಚುನಾವಣೆಯಲ್ಲಿ ನಿರ್ದಿಷ್ಟ ವರ್ಗದ ಮತದಾರರು ಮಾತ್ರ ಮತದಾನದ ಹಕ್ಕು ಹೊಂದಿದ್ದರೂ, ನೀತಿ-ಸಂಹಿತೆಯ ಬಿಸಿ ಎಲ್ಲರಿಗೂ ತಟ್ಟಿತ್ತು. ಸರ್ಕಾರಿ, ಸ್ಥಳೀಯ ಸಂಸ್ಥೆಗಳ ಸಭೆಗಳು ನಡೆಸಲು ಸಾಧ್ಯವಾಗದಂತಾಗಿತ್ತು.

ಆಗಸ್ಟ್ ತಿಂಗಳಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಯಿತು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮತ್ತೆ ನೀತಿ-ಸಂಹಿತೆಯ ಬಿಸಿ ತಟ್ಟಿತ್ತು. ಈ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡು ಒಂದು ತಿಂಗಳಾಗಿದೆ. ಅಷ್ಟರಲ್ಲಿಯೇ ಲೋಕಸಭೆಯ ಉಪ ಚುನಾವಣೆ ಎದುರಾಗಿದೆ. ಇದರಿಂದ ಜಿಲ್ಲೆಯು ಸುಮಾರು ಒಂದು ತಿಂಗಳ ಕಾಲ ಮತ್ತೆ ನೀತಿ-ಸಂಹಿತೆಯ ಬಿಸಿ ಎದುರಿಸುವಂತಾಗಿದೆ. 

ಮುಗಿದಿಲ್ಲ ಚುನಾವಣೆ: ಈ ಚುನಾವಣೆ ಪೂರ್ಣಗೊಂಡ ಬೆನ್ನಲ್ಲೆ, ಈ ವರ್ಷಾಂತ್ಯಕ್ಕೆ ಅಥವಾ 2019 ನೇ ಜನವರಿಯಲ್ಲಿ ಜಿಲ್ಲೆಯ 8 ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಆರಂಭವಾಗುವ ಸಾಧ್ಯತೆಯಿದೆ. ಭದ್ರಾವತಿ, ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ, ಹೊಸನಗರ, ತೀರ್ಥಹಳ್ಳಿ, ಸೊರಬ, ಜೋಗ-ಕಾರ್ಗಲ್ ಪಟ್ಟಣ ಪಂ.ಗಳ ವಾರ್ಡ್‍ವಾರು ಮೀಸಲಾತಿಯ ಅಂತಿಮ ಪಟ್ಟಿ ಕೂಡ ಪ್ರಕಟಿಸಲಾಗಿದೆ. ಚುನಾವಣಾ ದಿನಾಂಕ ಪ್ರಕಟಣೆಯಷ್ಟೆ ಬಾಕಿಯಿದೆ. 

ನೆಪ: ಕೆಲ ಸರ್ಕಾರಿ ಅಧಿಕಾರಿ-ನೌಕರರು ಚುನಾವಣಾ ನೀತಿ-ಸಂಹಿತೆ ಮುಂದಿಟ್ಟುಕೊಂಡು ನಾಗರಿಕರಿಗೆ ಸರ್ಕಾರಿ ಕೆಲಸ ಕಾರ್ಯ ಮಾಡಿಕೊಡದೆ ಸತಾಯಿಸುತ್ತಿರುವ ಆರೋಪಗಳು ಕೂಡ ಕೇಳಿಬರುತ್ತಿವೆ. ಕಡತ ವಿಲೇವಾರಿ ಸೇರಿದಂತೆ ಪ್ರತಿಯೊಂದಕ್ಕೂ ನೀತಿ-ಸಂಹಿತೆಯ ಕುಂಟು ನೆಪ ಮುಂದಿಟ್ಟು, ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಕೆಲ ನಾಗರಿಕರು ದೂರುತ್ತಾರೆ.

ಒಟ್ಟಾರೆ ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಎದುರಾಗುತ್ತಿರುವ ಸಾಲುಸಾಲು ಚುನಾವಣೆಗಳು ಜಿಲ್ಲೆಯ ಅಭಿವೃದ್ದಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಾಗಿದೆ. ಕೆಲ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳು, ಬರೀ ಚುನಾವಣೆ ಕಾರ್ಯದಲ್ಲಿಯೇ ಮಗ್ನರಾಗುವಂತಾಗಿದೆ. ಇದರಿಂದ ಆಡಳಿತ ಯಂತ್ರ ಕೂಡ ಅಸ್ತವ್ಯಸ್ತಗೊಳ್ಳುವಂತಾಗಿದ್ದು, ಇದರ ನೇರ ಪರಿಣಾಮ ಜನಸಾಮಾನ್ಯರ ಮೇಲಾಗುತ್ತಿರುವುದಂತೂ ಸತ್ಯವಾಗಿದೆ.  

ಚುನಾವಣಾ ಪರ್ವದ ಹೈಲೈಟ್ಸ್..!
-ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ.
-ಜೂನ್ ನಲ್ಲಿ ವಿಧಾನಪರಿಷತ್‍ನ ನೈರುತ್ಯ ಪದವೀಧರ-ಶಿಕ್ಷಕರ ಕ್ಷೇತ್ರಗಳ ಚುನಾವಣೆ.
-ಆಗಸ್ಟ್‍ನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ.
-ಅಕ್ಟೋಬರ್ ನಲ್ಲಿ ಆವಿನಹಳ್ಳಿ ಜಿ.ಪಂ. ಕ್ಷೇತ್ರದ ಚುನಾವಣೆ.
-ಅಕ್ಟೋಬರ್-ನವೆಂಬರ್ ನಲ್ಲಿ ಲೋಕಸಭೆ ಉಪ ಚುನಾವಣೆ.
ಡಿಸೆಂಬರ್ ಅಥವಾ ಜನವರಿಯಲ್ಲಿ 8 ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ.

share
ವರದಿ : ಬಿ. ರೇಣುಕೇಶ್
ವರದಿ : ಬಿ. ರೇಣುಕೇಶ್
Next Story
X