Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂಜಾಬ್ ವಿರುದ್ಧ ಮುಗ್ಗರಿಸಿದ ಕರ್ನಾಟಕ

ಪಂಜಾಬ್ ವಿರುದ್ಧ ಮುಗ್ಗರಿಸಿದ ಕರ್ನಾಟಕ

► ಅನ್ಮೋಲ್‌ ಶತಕ ► ಸಿದ್ಧಾರ್ಥ್ ಗೆ 5 ವಿಕೆಟ್

ವಾರ್ತಾಭಾರತಿವಾರ್ತಾಭಾರತಿ8 Oct 2018 11:50 PM IST
share
ಪಂಜಾಬ್ ವಿರುದ್ಧ ಮುಗ್ಗರಿಸಿದ ಕರ್ನಾಟಕ

► ವಿಜಯ್ ಹಝಾರೆ ಟ್ರೋಫಿ

ಬೆಂಗಳೂರು, ಅ.8: ಆರಂಭಿಕ ಆಟಗಾರ ಅನ್ಮೋಲ್‌ಪ್ರೀತ್ ಸಿಂಗ್ ಭರ್ಜರಿ ಶತಕ ಹಾಗೂ ಸಿದ್ಧಾರ್ಥ್ ಕೌಲ್ ಐದು ವಿಕೆಟ್ ಗೊಂಚಲು ನೆರವಿನಿಂದ ಪಂಜಾಬ್ ತಂಡ ವಿಜಯ್ ಹಝಾರೆ ಟ್ರೋಫಿಯಲ್ಲಿ ಆತಿಥೇಯ ಕರ್ನಾಟಕ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ.

ಇಲ್ಲಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಎಲೈಟ್ ಗ್ರೂಪ್ ‘ಎ’ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 296 ರನ್‌ಗೆ ಆಲೌಟಾಯಿತು. ಇದಕ್ಕುತ್ತರವಾಗಿ ಪಂಜಾಬ್ ತಂಡ 48.5 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 297 ರನ್ ಗಳಿಸಿ ಗೆಲುವಿನ ದಡ ಸೇರಿತು. ವೇಗದ ಬೌಲರ್ ಸಿದ್ಧ್ದಾರ್ಥ್ ಕೌಲ್ 41 ರನ್‌ಗೆ 5 ವಿಕೆಟ್ ಗೊಂಚಲು ಪಡೆದು ಕರ್ನಾಟಕ ತಂಡವನ್ನು ನಿಯಂತ್ರಿಸಿದರು. ಕೌಲ್ ದಾಳಿಗೆ ನಿರುತ್ತರವಾದ ಕರುಣ್ ನಾಯರ್(28), ಕೆ.ಅಬ್ಬಾಸ್(3), ಶ್ರೇಯಸ್ ಗೋಪಾಲ್(37), ಅನಿರುದ್ಧ ಜೋಶಿ(3)ಹಾಗೂ ಟಿ. ಪ್ರದೀಪ್(1) ವಿಕೆಟ್ ಒಪ್ಪಿಸಿದರು.

ಕೌಲ್‌ಗೆ ಬರಿಂದರ್ ಸಿಂಗ್ ಸ್ರಾನ್(3-48) ಉತ್ತಮ ಸಾಥ್ ನೀಡಿದರು. ಹಿರಿಯ ಆಟಗಾರ ಯುವರಾಜ್ ಸಿಂಗ್ ಹಾಗೂ ಯುವ ಲೆಗ್ ಸ್ಪಿನ್ನರ್ ಮಯಾಂಕ್ ಮರ್ಕಂಡೆ ತಲಾ ಒಂದು ವಿಕೆಟ್ ಪಡೆದರು.

ಕರ್ನಾಟಕದ ಪರ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಬಿ.ಆರ್. ಶರತ್ 70 ರನ್ ಗಳಿಸಿದರು. ನಾಯಕ ಮನೀಶ್ ಪಾಂಡೆ(67), ಆರ್.ಸಮರ್ಥ್(54) ಹಾಗೂ ಶ್ರೇಯಸ್ ಗೋಪಾಲ್(37)ಉಪಯುಕ್ತ ಕಾಣಿಕೆ ನೀಡಿದರು.

ಗೆಲ್ಲಲು 297 ರನ್ ಗುರಿ ಪಡೆದಿದ್ದ ಪಂಜಾಬ್ ತಂಡ 20ರ ಹರೆಯದ ಅನ್ಮೋಲ್‌ಪ್ರೀತ್ ಮಿಂಚಿನ ಶತಕ(106 ಎಸೆತ, 138 ರನ್), ಶುಭ್‌ಮನ್ ಗಿಲ್(93 ಎಸೆತ,77) ಅರ್ಧಶತಕದ ಕೊಡುಗೆ ನೆರವಿನಿಂದ ಆರು ವಿಕೆಟ್‌ಗಳ ಅಂತರದ ಗೆಲುವು ಪಡೆಯಿತು.

 ಅನ್ಮೋಲ್‌ಪ್ರೀತ್ ಅವರು ಗಿಲ್‌ರೊಂದಿಗೆ ಎರಡನೇ ವಿಕೆಟ್‌ಗೆ 198 ರನ್ ಜೊತೆಯಾಟ ನಡೆಸಿ ಪಂಜಾಬ್ ರನ್ ಚೇಸಿಂಗ್‌ಗೆ ಭದ್ರಬುನಾದಿ ಹಾಕಿಕೊಟ್ಟರು.

ಬಲಗೈ ದಾಂಡಿಗ ಅನ್ಮೋಲ್‌ಪ್ರೀತ್ ಕೇವಲ 106 ಎಸೆತಗಳಲ್ಲಿ 12 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿದರು. ಮತ್ತೊಂದೆಡೆ, ಗಿಲ್ 93 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ಬಾರಿಸಿದರು. ಈ ಇಬ್ಬರು ಅಭಿಮನ್ಯು ಮಿಥುನ್ ನೇತೃತ್ವದ ಕರ್ನಾಟಕದ ಕಳಪೆ ಬೌಲಿಂಗ್ ದಾಳಿಯನ್ನು ನಿರ್ದಯವಾಗಿ ದಂಡಿಸಿದರು.

ಪಂಜಾಬ್‌ನ ಇಬ್ಬರು ಆರಂಭಿಕರು ಔಟಾದ ಬಳಿಕ ಯುವರಾಜ್ ಸಿಂಗ್(38) ಹಾಗೂ ನಾಯಕ ಮನ್‌ದೀಪ್ ಸಿಂಗ್(30)ತಂಡಕ್ಕೆ ಆಸರೆಯಾದರು. ಈ ಇಬ್ಬರು ತಂಡ ಗೆಲುವಿನ ಹೊಸ್ತಿಲಲ್ಲಿದ್ದಾಗ ಮುಗ್ಗರಿಸಿದರು. ಆದಾಗ್ಯೂ ಪಂಜಾಬ್ 7 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ನಗೆ ಬೀರಿತು.

ಇದೇ ವೇಳೆ, ನೆರೆಯ ಆಲೂರಿನಲ್ಲಿ ನಡೆದ ಇತರ ಎರಡು ಗ್ರೂಪ್ ‘ಎ’ ಎಲೈಟ್ ಪಂದ್ಯಗಳಲ್ಲಿ ವಿದರ್ಭ ತಂಡ ಗೋವಾ ವಿರುದ್ಧ 1 ರನ್‌ನಿಂದ ರೋಚಕ ಜಯ ಸಾಧಿಸಿದೆ. ಮತ್ತೊಂದು ಪಂದ್ಯದಲ್ಲಿ ಮಹಾರಾಷ್ಟ್ರ ತಂಡ ಬರೋಡಾವನ್ನು 5 ವಿಕೆಟ್‌ಗಳಿಂದ ಸೋಲಿಸಿದೆ.

ಟೂರ್ನಮೆಂಟ್‌ನ ಕ್ವಾರ್ಟರ್ ಫೈನಲ್ ಸುತ್ತಿನ ಪಂದ್ಯಗಳು ಅ.14ರಿಂದ ಆರಂಭವಾಗಲಿದೆ. ಅಕ್ಟೋಬರ್ 17 ಹಾಗೂ 18 ರಂದು ಸೆಮಿ ಫೈನಲ್ ಹಾಗೂ ಅ.20 ಶನಿವಾರ ಫೈನಲ್ ಪಂದ್ಯ ನಡೆಯಲಿದೆ. ಎಲ್ಲ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X