Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಆವ ಬೀಜ

ಆವ ಬೀಜ

ವಾರ್ತಾಭಾರತಿವಾರ್ತಾಭಾರತಿ9 Oct 2018 12:09 AM IST
share
ಆವ ಬೀಜ

 ಆವ ಬೀಜವು ಬೀಳುವಲ್ಲಿ ಮೊಳೆ ಮುಖ ಹಿಂಚುಮುಂಚುಂಟೆ?

ನೀ ಮರೆದಲ್ಲಿ ನಾನರಿದಲ್ಲಿ ಬೇರೊಂದೊಡಲುಂಟೆ?
ಮೂಲ ನಷ್ಟವಾದಲ್ಲಿ ಅಂಕುರ ನಿಂದಿತ್ತು.
ಕೂಟಕ್ಕೆ ಸತಿಪತಿ ಎಂಬ ನಾಮವಲ್ಲದೆ
ಅರಿವಿಂಗೆ ಬೇರೊಂದೊಡಲುಂಟೆ?
ಬೇರೊಂದಡಿ ಇಡದಿರು ಮಾರಯ್ಯಪ್ರಿಯ ಅಮಲೇಶ್ವರ ಲಿಂಗವನರಿಯಬಲ್ಲಡೆ.

                                                                                   -ಆಯ್ದಕ್ಕಿ ಲಕ್ಕಮ್ಮ
 ಅರಿವು ಎಂಬುದು ಅಚ್ಚ ಕನ್ನಡ ಪದವಾಗಿದೆ. ಲಿಂಗವಂತ ಧರ್ಮದ ಅತ್ಯುನ್ನತ ಪದ. ಅಷ್ಟಾವರಣ, ಷಟ್‌ಸ್ಥಲ, ಪಂಚಾಚಾರ, ಲಿಂಗಾಂಗಸಾಮರಸ್ಯ, ಅನುಭಾವ ಹೀಗೆ ಇವೆಲ್ಲ ಸಾಧನೆಗಳ ನಂತರ ಸಿಗುವಂಥದ್ದೇ ಅರಿವು. ಈ ಅರಿವೆ ಗುರು. ಆ ಗುರುಪಥವೇ ದೇವಪಥಕ್ಕೆ ಒಯ್ಯುವಂಥದ್ದು. ಆದ್ದರಿಂದ ಅರಿವು ಎಂಬುದು ಒಳಗಿನ ಪ್ರಜ್ಞೆ. ಅನುಭವದ ಮೂಲಕ ಬರುವ ಅನುಭಾವದಿಂದ ಪಡೆಯುವಂಥದ್ದು. ಸತಿಯ ಒಡಲಲ್ಲಿ ಮತ್ತು ಪತಿಯ ಒಡಲಲ್ಲಿ ಸೃಷ್ಟಿಯಾಗುವ ಅರಿವು ಬೇರೆ ಅಲ್ಲ. ಆದ್ದರಿಂದ ಕೂಟಕ್ಕೆ ಸತಿಪತಿ ಎಂಬ ನಾಮವಲ್ಲದೆ ‘‘ಅರಿವಿಂಗೆ ಬೇರೊಂದು ಒಡಲುಂಟೆ’’ ಎಂದು ಆಯ್ದಕ್ಕಿ ಲಕ್ಕಮ್ಮ ಕೇಳುತ್ತಾಳೆ. ಸೃಷ್ಟಿಕ್ರಿಯೆಗಾಗಿ ಸತಿ ಪತಿ ಎಂಬ ಭೇದ ಇದ್ದರೂ ಆ ಸತಿ ಪತಿ ಒಳಗಿರುವ ಆತ್ಮ ಒಂದೇ.
 ಬೀಜವೊಂದು ಭೂಮಿಗೆ ಬಿದ್ದಾಗ ಅದಕ್ಕೆ ಮೊಳಕೆ ಮುಖ ಎಂಬ ಹಿಂದೆ ಮುಂದೆ ಉಂಟೆ ಎಂದು ಲಕ್ಕಮ್ಮ ಪ್ರಶ್ನಿಸಿದ್ದಾಳೆ. ಬೀಜ ಹೇಗೆ ಬಿದ್ದರೂ ಮೊಳಕೆಯೊಡೆಯುತ್ತದೆ. ಹೆಣ್ಣು ಗಂಡು ಯಾರೇ ಇದ್ದರೂ ಅರಿವು ಮೂಡೇ ಮೂಡುತ್ತದೆ. ಏಕೆಂದರೆ ಅರಿವಿಗೆ ಹೆಣ್ಣು ಗಂಡೆಂಬ ಭೇದಭಾವವಿಲ್ಲ. ನೀನು ಮರೆತಲ್ಲಿ, ನಾನು ಅರಿತಲ್ಲಿ ಬೇರೊಂದು ದೇಹವುಂಟೆ? ಎನ್ನುವ ಲಕ್ಕಮ್ಮ, ಹೆಣ್ಣು ಗಂಡು ಎಂಬ ಭೇದವಿಲ್ಲದ ಮೂಲ ಅರಿವು ಆಗದೆ ಇದ್ದಾಗ ಅಂದರೆ ಒಳಗಿನ ಪ್ರಜ್ಞೆಯು ಮೂಡದೆ ಇದ್ದಾಗ ವ್ಯಕ್ತಿತ್ವ ವಿಕಸನವಾಗುವುದು ನಿಲ್ಲುತ್ತದೆ. ಅರಿವನ್ನು ಒಬ್ಬರು ಮರೆತು ಇನ್ನೊಬ್ಬರು ಮರೆಯದೆ ಇದ್ದಾಗ, ಆ ಮರೆಯದವರು ಬೇರೊಂದು ಪ್ರಕಾರದ ಅರಿವನ್ನು ಹೊತ್ತ ದೇಹ ಹೊಂದಿದ್ದಾರೆ ಎಂಬುದು ಸುಳ್ಳು.
 ‘‘ಬೇರೊಂದು ಅಡಿಯನಿಡದಿರು ಮಾರಯ್ಯಪ್ರಿಯ ಅಮಲೇಶ್ವರ ಲಿಂಗವನರಿಯಬಲ್ಲಡೆ’’ ಎಂದು ಲಕ್ಕಮ್ಮ ತಿಳಿಹೇಳುತ್ತಾಳೆ. ಲಿಂಗದ ಅರಿವು ಉಂಟಾಗಬೇಕಾದರೆ ಲಿಂಗಭೇದವೆಂಬ ಅನಾಗರಿಕ ಪದ್ಧತಿಯನ್ನು ಬಿಡಬೇಕು ಎಂದು ಆಕೆ ಸೂಚಿಸಿದ್ದಾಳೆ.
ಹೆಣ್ಣು ಮೋಕ್ಷಹೊಂದಬೇಕೆಂದರೆ ಮುಂದಿನ ಜನ್ಮದಲ್ಲಿ ಗಂಡಾಗಿ ಹುಟ್ಟಬೇಕೆಂದು ಕೆಲ ಧರ್ಮಗಳು ಹೇಳುತ್ತವೆ. ಆದರೆ ಲಿಂಗವಂತಧರ್ಮದಲ್ಲಿ ಹೆಣ್ಣು ಗಂಡು ಎಂಬ ಭೇದಭಾವವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X