Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಕಾಶ್ ರೈಯವರ ‘ಅವರವರ ಭಾವಕ್ಕೆ’ ಕೃತಿ...

ಪ್ರಕಾಶ್ ರೈಯವರ ‘ಅವರವರ ಭಾವಕ್ಕೆ’ ಕೃತಿ ಬಿಡುಗಡೆ

ಬರವಣಿಗೆ ಕೆಲಸ ನನ್ನ ಮರುಹುಟ್ಟು: ಪ್ರಕಾಶ್ ರೈ ಅಭಿಮತ

ವಾರ್ತಾಭಾರತಿವಾರ್ತಾಭಾರತಿ9 Oct 2018 1:34 PM IST
share
ಪ್ರಕಾಶ್ ರೈಯವರ ‘ಅವರವರ ಭಾವಕ್ಕೆ’ ಕೃತಿ ಬಿಡುಗಡೆ

ಮೈಸೂರು, ಅ.9: ನಟ ಪ್ರಕಾಶ್ ರೈ ರಚನೆಯ ‘ಅವರವರ ಭಾವಕ್ಕೆ’ ಕೃತಿ ರವಿವಾರ ಲೋಕಾರ್ಪಣೆಗೊಂಡಿತು.

ಜನಮನ ಮತ್ತು ನೆಲೆ ಹಿನ್ನೆಲೆ ಸಂಸ್ಥೆಯು ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿಮರ್ಶಕ ಒ.ಎಲ್.ನಾಗಭೂಷಣಸ್ವಾಮಿ ಅವರು ಕೃತಿಯ ಮೊದಲ ಪ್ರತಿಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ದೇವನೂರ ಮಹಾದೇವ, ಪ್ರಕಾಶ್ ರೈಯವರ ಪುಸ್ತಕವನ್ನು ಓದಿ ಟಿಪ್ಪಣಿ ಬರೆಯಬೇಕೆಂದುಕೊಂಡಿದ್ದೇನೆ. ರೈ ಆಲೋಚನೆಯಿಂದ ಬದುಕನ್ನು ನೋಡುವವನ್ನಲ್ಲ, ಹೃದಯ ಮಿಡಿತದಿಂದ ನೋಡುವವನು. ಬರವಣಿಗೆಯಲ್ಲಿ ಸ್ಪಂದನ, ಸ್ಪರ್ಶ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಒ.ಎಲ್.ನಾಗಭೂಷಣಸ್ವಾಮಿ ಮಾತನಾಡಿ, ಜೀವನ ಪ್ರವಾಸವಾಗಿರದೆ ಪ್ರಯಾಣವಾಗಿರಬೇಕೆಂಬ ಜ್ಞಾನಿಯ ಮಾತಿನಂತೆ ಪ್ರಕಾಶ್ ರೈ ನಡೆದುಕೊಳ್ಳುತ್ತಿದ್ದಾರೆ. ಇಮೇಜ್ ಇರುವ ವ್ಯಕ್ತಿಗಳು ಬದುಕನ್ನು ಹೇಗೆ ನೋಡಿದ್ದಾರೆ ಎಂಬುದನ್ನು ಈ ಪುಸ್ತಕದಲ್ಲಿ ತಿಳಿಯಬಹುದು. ಅಂಕಣಗಳು ವಾರದಿಂದ ವಾರಕ್ಕೆ ಬದಲಾಗುವುದರಿಂದ ನಿರಂತರತೆ ಇರುವ ಕಾದಂಬರಿ ಬರೆಯಲಿ ಎಂಬುದು ನನ್ನ ಆಶಯ ಎಂದರು.

ಕೃತಿಕರ್ತೃ ಪ್ರಕಾಶ್ ರೈ ಮಾತನಾಡಿ, ಬರವಣಿಗೆ ಕೆಲಸ ನನ್ನ ಮರುಹುಟ್ಟಾಯಿತು. ಸಂಕೋಲೆಗಳಿಂದ ಬಿಡಿಸಿಕೊಂಡು ಹೊರಬಂದು ಸ್ವಾತಂತ್ರ ಗಳಿಸಿಕೊಂಡ ಘಳಿಗೆ ಇದು ಎಂದು ಅಭಿಪ್ರಾಯಪಟ್ಟರು.

ಗೆಳೆಯರಾದ ಕಟ್ಟೆ ಗುರುರಾಜ್, ಜೋಗಿ ಅಂಥವರು ಬರೆಯಲು ನನ್ನ ಪ್ರೋತ್ಸಾಹಿಸಿದರು. ಎತ್ತರದಲ್ಲಿದ್ದವರು ಬರೆದಾಗ ನೆನಪು, ಅನುಭವ ಬರವಣಿಗೆಯಲ್ಲಿ ಮೂಡುತ್ತದೆ ಎನ್ನುವುದಕ್ಕಿಂತ ನಾನು ಜಾತ್ರೆಯನ್ನು ಅಪ್ಪನ ಹೆಗಲ ಮೇಲೆ ಕುಳಿತು ನೋಡುವ ಮಗುವಿನ ರೀತಿ ಬರೆಯುತ್ತಿದ್ದೇನೆ. ಆಗಲೇ ಲಂಕೇಶ್, ತೇಜಸ್ವಿ, ಚಿತ್ತಾಲರ ಒಡನಾಟ, ನೆನಪುಗಳು ಬರವಣಿಗೆಗೆ ಇಳಿದವು. ನನ್ನೊಂದಿಗೆ ಶ್ರೀಮಂತಿಕೆ ಕನ್ನಡ ಸಾಹಿತ್ಯ, ರಂಗಭೂಮಿ ಅನುಭವ, ಸಿನೆಮಾ ಹೀಗೆ ಇನೇಕ ಗ್ರಹಿಕೆ, ಅಂತಃಕರಣ ಸುತ್ತಲ ವಾತಾವರಣ ನಿರ್ಮಿಸಿಕೊಟ್ಟಿತು ಎಂದರು.

ನನ್ನ ಒಡನಾಟದಲ್ಲಿರುವ ಅನೇಕ ಮಂದಿಯ ಮುಂದೆ ನಾನು ಸಣ್ಣನವನಾಗಿರಬಾರದು ಎಂಬ ಶ್ರೀರಕ್ಷೆ ಗಟ್ಟಿ ಬರವಣಿಗೆಯನ್ನು ಸೃಷ್ಟಿಸಿದೆ. ನಾನು ಬರೆಯಬಲ್ಲನೆ, ಜನರು ಓದಬಲ್ಲರೆ ಎಂಬ ಯಾವ ಭ್ರಮೆಯೂ ಇಲ್ಲದೆ, ನಾನು ಸರಿದಾರಿಯಲ್ಲಿ ಸಾಗುತ್ತಿದ್ದೇನೆಯೇ ಎನ್ನುವುದನ್ನು ಮಾತ್ರ ಅರಿಯಲು ಬರೆಯುತ್ತಿದ್ದೇನೆ ಎಂದು ಪ್ರಕಾಶ್ ರೈ ತಿಳಿಸಿದರು.

ಸಮಾರಂಭದಲ್ಲಿ ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ನಟ ಮಂಡ್ಯ ರಮೇಶ್, ಸಾಹಿತಿ ಡಾ.ಸಿ.ನಾಗಣ್ಣ, ರಂಗಕರ್ಮಿ ಕೆ.ಆರ್. ಸುಮತಿ ಅಂಕಣಗಳನ್ನು ವಾಚಿಸಿದರು. ಸಿನೆಮಾ ಪತ್ರಕರ್ತ ಜೋಗಿ ಕಾರ್ಯಕ್ರಮ ನಿರೂಪಿಸಿದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X