Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನೆಯಲ್ಲಿ ಪುರುಷ ನರ್ಸ್‌ಗಳ ನೇಮಕ...

ಸೇನೆಯಲ್ಲಿ ಪುರುಷ ನರ್ಸ್‌ಗಳ ನೇಮಕ ಯಾಕಿಲ್ಲ: ಕೇಂದ್ರಕ್ಕೆ ದಿಲ್ಲಿ ಹೈಕೋರ್ಟ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ9 Oct 2018 8:46 PM IST
share
ಸೇನೆಯಲ್ಲಿ ಪುರುಷ ನರ್ಸ್‌ಗಳ ನೇಮಕ ಯಾಕಿಲ್ಲ: ಕೇಂದ್ರಕ್ಕೆ ದಿಲ್ಲಿ ಹೈಕೋರ್ಟ್ ಪ್ರಶ್ನೆ

ಹೊಸದಿಲ್ಲಿ, ಅ.9: ಸೇನೆಯಲ್ಲಿ ನರ್ಸ್ ಹುದ್ದೆಗೆ ಕೇವಲ ಮಹಿಳೆಯರನ್ನು ಮಾತ್ರ ನೇಮಿಸುವ ಮೂಲಕ ಒಂದು ರೀತಿಯಲ್ಲಿ ಭಾರತೀಯ ಸೇನೆ ಲಿಂಗ ತಾರತಮ್ಯದ ಧೋರಣೆ ಅನುಸರಿಸುತ್ತಿದೆ ಎಂದು ದಿಲ್ಲಿ ಹೈಕೋರ್ಟ್ ಹೇಳಿದ್ದು, ಈ ವಿಷಯದ ಬಗ್ಗೆ ಗಮನ ಹರಿಸಲು ಕೇಂದ್ರ ಸರಕಾರಕ್ಕೆ ಎರಡು ತಿಂಗಳ ಕಾಲಾವಕಾಶ ಒದಗಿಸಿದೆ.

 ಇದನ್ನೂ ಲಿಂಗ ತಾರತಮ್ಯ ಎಂದು ಪರಿಗಣಿಸಬಹುದು. ಆದರೆ ವಿರುದ್ಧ ದಿಕ್ಕಿನಲ್ಲಿ ನಡೆದ (ಪುರುಷರ ಕಡೆಗಣನೆ) ಲಿಂಗ ತಾರತಮ್ಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಮೆನನ್ ಹಾಗೂ ನ್ಯಾಯಾಧೀಶ ವಿ.ಕೆ.ರಾವ್ ಅವರಿದ್ದ ನ್ಯಾಯಪೀಠ ತಿಳಿಸಿದೆ. ಭಾರತೀಯ ಸೇನಾಪಡೆಯ ನರ್ಸಿಂಗ್ ಸೇವಾ ವಿಭಾಗಕ್ಕೆ ನೇಮಕಾತಿ ಮಾಡಿಕೊಳ್ಳುತ್ತಿರುವುದು ಲಿಂಗ ತಾರತಮ್ಯದ ಸ್ಪಷ್ಟ ಉದಾಹರಣೆಯಾಗಿದೆ ಎಂದು ದೂರಿ ಭಾರತೀಯ ವೃತ್ತಿನಿರತ ನರ್ಸ್‌ಗಳ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಾಲಯ ಈ ಮೇಲಿನಂತೆ ಪ್ರತಿಕ್ರಿಯಿಸಿದೆ. ನರ್ಸ್ ಹುದ್ದೆಗೆ ಮಹಿಳೆಯರನ್ನು ಮಾತ್ರ ನೇಮಿಸಲು ಅವಕಾಶ ನೀಡುವ 1943ರ ಸೇನಾ ನರ್ಸಿಂಗ್ ಸೇವಾ ಆಧ್ಯಾದೇಶ ಹಾಗೂ 1944ರ ಸೇನಾ ನರ್ಸಿಂಗ್ ಸೇವೆ ಕಾಯ್ದೆ (ಭಾರತ)ಯ ನಿಯಮಗಳನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

 ದೇಶದಲ್ಲಿರುವ ತರಬೇತಿ ಪಡೆದ ಮತ್ತು ಅರ್ಹ ಸಾವಿರಾರು ಪುರುಷ ನರ್ಸ್‌ಗಳನ್ನು ಸೇನಾಪಡೆಯ ನರ್ಸಿಂಗ್ ಸೇವೆಗೆ ಪರಿಗಣಿಸದಿರುವುದು ಅಸಮರ್ಥನೀಯ ಮತ್ತು ಅಸಾಂವಿಧಾನಿಕ ಕ್ರಮವಾಗಿದ್ದು, ಇದರಿಂದ ಅವರು ಉದ್ಯೋಗಾವಕಾಶದಿಂದ ವಂಚಿತರಾಗುತ್ತಾರೆ. ಅಲ್ಲದೆ ದೇಶ ಮತ್ತು ಸೇನಾಪಡೆಗಳೂ ಅರ್ಹ ವೃತ್ತಿಪರರ ಸೇವೆಯಿಂದ ವಂಚಿತವಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೇನಾಪಡೆಗಳಲ್ಲಿ ಪುರುಷ ನರ್ಸ್‌ಗಳ ನೇಮಕಾತಿ ಕುರಿತು ನಿರ್ಧರಿಸಲು ಆರು ತಿಂಗಳ ಕಾಲಾವಕಾಶವನ್ನು ಕೇಂದ್ರ ಸರಕಾರ ಕೇಳಿದ್ದ ಕಾರಣ ಎಲ್ಲಾ ಸೇನಾ ನೆಲೆಗಳ ಅಧಿಕಾರಿಗಳ ಜೊತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ ನಿರ್ಧಾರವೊಂದಕ್ಕೆ ಬರುವಂತೆ ನ್ಯಾಯಾಲಯ ಸೂಚಿಸಿ ಮುಂದಿನ ವಿಚಾರಣೆಯನ್ನು 2019ರ ಜನವರಿ 21ಕ್ಕೆ ನಿಗದಿಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X