Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಳಮಟ್ಟದಿಂದ ಪಕ್ಷದ ಬಲವರ್ಧನೆಗೆ ಕ್ರಮ:...

ತಳಮಟ್ಟದಿಂದ ಪಕ್ಷದ ಬಲವರ್ಧನೆಗೆ ಕ್ರಮ: ಗಂಗಣ್ಣ

ವಾರ್ತಾಭಾರತಿವಾರ್ತಾಭಾರತಿ9 Oct 2018 9:24 PM IST
share
ತಳಮಟ್ಟದಿಂದ ಪಕ್ಷದ ಬಲವರ್ಧನೆಗೆ ಕ್ರಮ: ಗಂಗಣ್ಣ

ಉಡುಪಿ, ಅ.9: ಉಡುಪಿ ಜಿಲ್ಲಾ ಜೆಡಿಎಸ್‌ನಲ್ಲಿ ಹೇಳಿಕೊಳ್ಳುವಂಥ ಸಮಸ್ಯೆ ಗಳು ಯಾವುದೂ ಇಲ್ಲ. ಹೀಗಾಗಿ ಎಲ್ಲಾ ಕಾರ್ಯಕರ್ತರನ್ನು ಒಟ್ಟು ಸೇರಿಸಿ ತಳಮಟ್ಟದಿಂದ ಪಕ್ಷದ ಬಲವರ್ಧನೆಗೆ ಪ್ರಯತ್ನ ನಡೆಸಲಾಗುವುದು ಎಂದು ಜಾತ್ಯತೀತ ಜನತಾ ದಳ (ಜೆಡಿಎಸ್)ದ ರಾಜ್ಯ ಹಿರಿಯ ಉಪಾಧ್ಯಕ್ಷ ಎಂ. ಗಂಗಣ್ಣ ಹೇಳಿದ್ದಾರೆ.

ಪಕ್ಷ ಸಂಘಟನೆಗಾಗಿ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗಂಗಣ್ಣ ಅವರು ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದರು. ಕಳೆದ ಒಂದು ವಾರದಿಂದ ತಾನು ಕರಾವಳಿಯ ಪ್ರವಾಸದಲ್ಲಿದ್ದೇನೆ. ಉತ್ತರ ಕನ್ನಡ ಪ್ರವಾಸದ ಬಳಿಕ ಕಳೆದೆರಡು ದಿನಗಳಿಂದ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗುತಿದ್ದೇನೆ ಎಂದರು.

ಪಕ್ಷ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದರಿಂದ ಪಕ್ಷದ ಬಲವರ್ಧನೆಗೆ ಉತ್ತಮ ಅವಕಾಶಗಳಿವೆ. ಕರಾವಳಿಯೂ ಸೇರಿದಂತೆ ವಿವಿದೆಡೆಗಳಲ್ಲಿ ನಾವು ಬಲಿಷ್ಠಗೊಳ್ಳುತಿದ್ದೇವೆ. ಹಣಕಾಸಿನ ಕೊರತೆ ಇದ್ದರೂ, ಉತ್ಸಾಹಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಸ್ವಶಕ್ತಿಯಿಂದ ಪಕ್ಷ ಸಂಘಟನೆ ನಡೆಸುತಿ ದ್ದಾರೆ ಎಂದವರು ಹೇಳಿದರು.

ರಾಜ್ಯದ ಸಮ್ಮಿಶ್ರ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.ವಿಪಕ್ಷದ ಅಪಪ್ರಚಾರದ ನಡುವೆಯೂ ರಾಜ್ಯ ಅಭಿವೃದ್ಧಿ ಕುಂಠಿತಗೊಳ್ಳದಂತೆ ನೋಡಿ ಕೊಳ್ಳಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸ್ಪಂದನೆ ಹಾಗೂ ಹೊಂದಾಣಿಕೆ ಚೆನ್ನಾಗಿದೆ ಎಂದರು.

ಉಡುಪಿ ಜಿಲ್ಲೆಯ ಹಲವು ಸಮಸ್ಯೆಗಳ ಕುರಿತು ಕಾರ್ಯಕರ್ತರು ನಮ್ಮ ಗಮನ ಸೆಳೆದಿದ್ದಾರೆ. ಅವುಗಳ ಕುರಿತು ಸಂಬಂಧಿತರೊಂದಿಗೆ ಮಾತನಾಡಲಾ ಗುವುದು. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳ ರೈತರನ್ನು ತೀವ್ರವಾಗಿ ಬಾಧಿಸಿರುವ ಅಡಿಕೆ ಬೆಳೆಯ ಕೊಳೆರೋಗಕ್ಕೆ 15 ದಿನಗಳೊಳಗೆ ಪರಿಹಾರ ಘೋಷಿಸುವುದಾಗಿ ಮುಖ್ಯಮಂತ್ರಿಗಳು ಈಗಾಗಲೇ ತಿಳಿಸಿದ್ದಾರೆ ಎಂದು ಗಂಗಣ್ಣ ನುಡಿದರು.

ಕುಮಾರಸ್ವಾಮಿ ಘೋಷಿಸಿದ ಸಾಲಮನ್ನಾ ಘೋಷಣೆಯ ಫಲ ಎಲ್ಲಾ ರೈತರಿಗೂ ದೊರೆಯುತಿದ್ದು, ಈ ತಿಂಗಳ ಕೊನೆಯೊಳಗೆ ಎಲ್ಲರೂ ಬ್ಯಾಂಕ್‌ಗಳಿಗೆ ತೆರಳಿ ಅಲ್ಲಿ ನೀಡುವ ಸರಳವಾದ ಅರ್ಜಿಯನ್ನು ಭರ್ತಿ ಮಾಡಿ ದಾಖಲೆಗಳೊಂದಿಗೆ ನೀಡಿದರೆ ನ.10ರೊಳಗೆ ಸರಕಾರದಿಂದ ಋಣಮುಕ್ತ ಪತ್ರ ರೈತರ ಕೈಸೇರಲಿದೆ ಎಂದರು.

ಜಿಲ್ಲೆಯ ಮರಳು ಸಮಸ್ಯೆ, ಟೋಲ್ ಸಂಗ್ರಹ ಪ್ರಕರಣ ಶೀಘ್ರ ಬಗೆಹರಿಯುವ ವಿಶ್ವಾಸವಿದೆ. ಕಾಪುವಿನಲ್ಲಿ ಸೂಕ್ತ ಜಾಗವನ್ನು ತೋರಿಸಿದರೆ, 15 ದಿನದೊಳಗೆ ಸಾರಿಗೆ ಸಚಿವರನ್ನು ಕರೆತಂದು ಸುಸಜ್ಜಿತ ಬಸ್‌ನಿಲ್ದಾಣಕ್ಕೆ ಶಂಕು ಸ್ಥಾಪನೆ ನೆರವೇರಿಸುವ ಭರವಸೆಯನ್ನು ಗಂಗಣ್ಣ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X