Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಟ್ರೋ ಎರಡನೇ ಹಂತದ ಕಾಮಗಾರಿ: ಗುತ್ತಿಗೆ...

ಮೆಟ್ರೋ ಎರಡನೇ ಹಂತದ ಕಾಮಗಾರಿ: ಗುತ್ತಿಗೆ ನೀಡಲು ಗೊಂದಲದಲ್ಲಿರುವ ಬಿಎಂಆರ್‌ಸಿಎಲ್

ವಾರ್ತಾಭಾರತಿವಾರ್ತಾಭಾರತಿ9 Oct 2018 9:37 PM IST
share

ಬೆಂಗಳೂರು, ಅ.9 : ನಮ್ಮ ಮೆಟ್ರೊ ಎರಡನೇ ಹಂತದ ಸಿಲ್ಕ್ ಬೋರ್ಡ್ ನಿಂದ ಕೆ.ಆರ್.ಪುರ ಯೋಜನೆಯ ಕಾಮಗಾರಿಗೆ ಹೊಸ ಅಡ್ಡಿ ಎದುರಾಗಿದ್ದು, ಈ ಮಾರ್ಗದ ನಿರ್ಮಾಣಕ್ಕೆ ಅತಿ ಕಡಿಮೆ ಮೊತ್ತದ ಬಿಡ್ ಸಲ್ಲಿಸಿರುವ ಐಎಲ್ ಅಂಡ್ ಎಫ್‌ಎಸ್ ಕಂಪನಿಯನ್ನು ಆರಿಸಬೇಕೇ ಅಥವಾ ಬೇಡವೇ ಎಂದು ಬಿಎಂಆರ್‌ಸಿಎಲ್ ಗೊಂದಲದಲ್ಲಿ ಮುಳುಗಿದೆ.

ಈಗಾಗಲೇ ಮೈಸೂರು ರಸ್ತೆಯ ನಾಯಂಡಹಳ್ಳಿಯಿಂದ ಕೆಂಗೇರಿವರೆಗೆ ನಿರ್ಮಾಣವಾಗುತ್ತಿರುವ 6 ಕಿ.ಮೀ. ಉದ್ದದ ಮಾರ್ಗದ ಪೈಕಿ 3 ಕಿ.ಮೀ. ಮಾರ್ಗವನ್ನು ಐಎಲ್ ಅಂಡ್ ಎಫ್‌ಎಸ್ ಕಂಪನಿ ನಿರ್ಮಾಣ ಮಾಡುತ್ತಿದೆ. ಇತ್ತೀಚಿಗೆ ಗಡುವು ಮೀರಿದ್ದರಿಂದ 1.5 ಕೋಟಿ ದಂಡವನ್ನೂ ವಿಧಿಸಲಾಗಿತ್ತು. ಈ ಕಂಪನಿಯ ಮೂಲ ಕಂಪನಿಯು ನಷ್ಟದಲ್ಲಿರುವುದರಿಂದ ಕೇಂದ್ರ ಸರಕಾರವು ವಶಕ್ಕೆ ಪಡೆದು ಹೊಸ ಆಡಳಿತ ಮಂಡಳಿ ರಚಿಸಿದೆ. ಇಂತಹ ಕಂಪನಿಗೆ ಗುತ್ತಿಗೆ ಕೊಡುವುದು ಸರಿಯೇ ಎಂದು ಅಧಿಕಾರಿಗಳು ಚಿಂತಿಸುತ್ತಿದ್ದಾರೆ. ಹೀಗಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದರೂ ಕಾರ್ಯಾದೇಶ ನೀಡಿಲ್ಲ. ನಗರದ ಸಿಲ್ಕ್‌ಬೋರ್ಡ್‌ನಿಂದ ಕೆ.ಆರ್.ಪುರಕ್ಕೆ ಸುಮಾರು 17 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಮೂರು ಪ್ಯಾಕೇಜ್‌ಗಳಲ್ಲಿ ಟೆಂಡರ್ ಕರೆಯಲಾಗಿದೆ. ಸಿಲ್ಕ್ ಬೋರ್ಡ್-ಬೆಳ್ಳಂದೂರು, ಬೆಳ್ಳಂದೂರು-ದೊಡ್ಡನೆಕ್ಕುಂದಿ, ದೊಡ್ಡನೆಕ್ಕುಂದಿ- ಕೆ.ಆರ್.ಪುರ ಎಂದು ಮೂರು ಭಾಗಗಳಾಗಿ ವಿಂಗಡನೆ ಮಾಡಿ ಟೆಂಡರ್ ಕರೆಯಲಾಗಿದೆ.

ಇದರಲ್ಲಿ ಸಿಲ್ಕ್ ಬೋರ್ಡ್-ಬೆಳ್ಳಂದೂರು 7 ಕಿ.ಮೀ. ಉದ್ದದ ಮಾರ್ಗ ನಿರ್ಮಿಸಲು ಐಎಲ್ ಅಂಡ್ ಎಫ್‌ಎಸ್ ಕಂಪನಿ ಅರ್ಜಿ ಸಲ್ಲಿಸಿದೆ. ಈ ಮಾರ್ಗದ ನಿರ್ಮಾಣ ವೆಚ್ಚ 427.29 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಈ ಕಂಪನಿ 433.26 ಕೋಟಿ ರೂ. ಮೊತ್ತವನ್ನು ಉಲ್ಲೇಖಿಸಿದೆ. ಉಳಿದ ಕಂಪನಿಗಳು ಇದಕ್ಕಿಂತ ಹೆಚ್ಚು ಮೊತ್ತವನ್ನು ಉಲ್ಲೆಖಿಸಿವೆ. ಹೀಗಾಗಿ, ನಿಯಮಗಳ ಪ್ರಕಾರ, ಈ ಕಂಪನಿಗೇ ಅವಕಾಶ ನೀಡಬೇಕಾಗುತ್ತದೆ. ಬೇರೆ ಕಂಪನಿಗೆ ಅವಕಾಶ ನೀಡಬೇಕೆಂದರೂ ನಿಯಮಬಾಹಿರವಾಗುತ್ತದೆ. ಮರು ಟೆಂಡರ್ ಕರೆಯುವ ತೀರ್ಮಾನ ಕೈಗೊಂಡರೆ ಯೋಜನೆಯ ಕಾಮಗಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಸಿಲ್ಕ್ ಬೋರ್ಡ್-ಕೆ.ಆರ್.ಪುರ ಮಾರ್ಗದ ಗುತ್ತಿಗೆ ವಿಚಾರದಲ್ಲಿ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಐಎಲ್ ಅಂಡ್ ಎಫ್‌ಎಸ್ ಕಂಪನಿಯನ್ನೂ ಅಂತಿಮಗೊಳಿಸಿಲ್ಲ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X