Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿ.ವಿ. ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿ.ವಿ. ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 Oct 2018 11:03 PM IST
share
ಮಂಗಳೂರು ವಿ.ವಿ. ಕ್ರೀಡಾಕೂಟಕ್ಕೆ ಚಾಲನೆ

ಮೂಡುಬಿದಿರೆ, ಅ.9: ಮಂಗಳೂರು ವಿ.ವಿ. ಮತ್ತು ಆಳ್ವಾಸ್ ಕಾಲೇಜು ಇವುಗಳ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ  ಮಂಗಳವಾರ ಪ್ರಾರಂಭವಾದ ಮಂಗಳೂರು ವಿ.ವಿ. 38ನೇ ಅಂತರ್ ಕಾಲೇಜು  ಮತ್ತು ವಿಶೇಷ ಸಾಮಥ್ರ್ಯವುಳ್ಳ ಮಕ್ಕಳ ಆಥ್ಲೆಟಿಕ್ಸ್ ಕೂಟಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ರ  ಜೈನ್, ಮಂಗಳೂರು ವಿ.ವಿ. ವೈಸ್ ಛಾನ್ಸೆಲರ್ (ಆ್ಯಕ್ಟಿಂಗ್) ಡಾ.ಕಿಶೋರ್ ಕುಮಾರ್ ಸಿ.ಕೆ. ಧ್ವಜಾರೋಣಗೈದರು ಹಾಗೂ ಕ್ರೀಡಾಪಟುಗಳ ಆಕರ್ಷಕ ಪಥಸಂಚಲನದ ಗೌರವರಕ್ಷೆ ಸ್ವೀಕರಿಸಿದರು. 

ಮಂ.ವಿ.ವಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ  ವೇಣುಗೋಪಾಲ ನೋಂಡ, ಜಿಲ್ಲಾ  ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟದ ಸಂಯೋಜಕ, ಮಂಗಳೂರು ಸೈಂಟ್ ಆಗ್ನೆಸ್ ಸ್ಪೆಶಲ್ ಸ್ಕೂಲ್‍ನ ದೈಹಿಕ ಶಿಕ್ಷಣ ನಿರ್ದೇಶಕ ನಾರಾಯಣ ಉಪಸ್ಥಿತರಿದ್ದರು.

ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಳು, ಆಳ್ವಾಸ್‍ನ ವಿದ್ಯಾರ್ಥಿನಿ ಅಭಿನಯ ಶೆಟ್ಟಿ  ಪ್ರತಿಜ್ಞಾವಿಧಿ ಸ್ವೀಕರಿಸಿದರು. ಆಳ್ವಾಸ್‍ನ ರಾಷ್ಟ್ರೀಯ,ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಳುಗಳಾದ ಸುಪ್ರಿಯಾ, ಚೈತ್ರಾ, ಅನಿಲ್, ಪ್ರಜ್ವಲ್ ಮಂದಣ್ಣ  ಕ್ರೀಡಾಜ್ಯೋತಿಯನ್ನು ಬೆಳಗಿದರು. 

ವಿ.ವಿ. ಕೂಟಗಳಲ್ಲಿ ಹೊಸ ದಾಖಲೆ ಮಾಡುವ ಕ್ರೀಡಾಳುಗಳಿಗೆ ರೂ. 2,000 ನಗದು ನೀಡುವ ಆಳ್ವಾಸ್ ಪರಂಪರೆಯಂತೆ ಕೂಟದ ಪ್ರಾರಂಭದಲ್ಲೇ ಹೊಸ ದಾಖಲೆ ಮಾಡಿರುವ ಆಳ್ವಾಸ್‍ನ ಮನೋಜ್ (20 ಕಿ.ಮೀ. ನಡಿಗೆ) ಮತ್ತು ಭಗತ್ ಶೀತಲ್ (3000 ಮೀ. ಸ್ಟೀಪಲ್ ಚೇಸ್) ಅವರಿಗೆ ತಲಾ ರೂ. 2,000 ನೀಡಲಾಯಿತು. ಅಜ್ಜರಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು.

ಕೂಟ ದಾಖಲೆಗಳು

ಮಂಗಳೂರು ವಿಶ್ವವಿದ್ಯಾನಿಲಯ ಅಥ್ಲೆಟಿಕ್‍ನ ಮೊದಲ ದಿನದಲ್ಲಿ ಆಳ್ವಾಸ್ ಆರು ಕೂಟ ದಾಖಲೆಗಳೊಂದಿಗೆ ಮುನ್ನಡೆ ಸಾಧಿಸಿದೆ. ಮಹಿಳೆಯರ ಸ್ಟೀಪಲ್ ಚೇಸ್‍ನಲ್ಲಿ ಆಳ್ವಾಸ್‍ನ ಭಗತ್ ಶೀತಲ್ ಝಮಾಜಿ 10:50.31 ಸೆಕೆಂಡ್ಸ್‍ನಲ್ಲಿ ಕ್ರಮಿಸಿ ಆಳ್ವಾಸ್‍ನ ಸಫೀಜ ಎಂ.ಪಿ ಹೆಸರಿನ ಹಳೆ ದಾಖಲೆ(11:34.7)ಯನ್ನು ಮುರಿದಿದ್ದಾರೆ. 

100ಮೀಟರ್ ಹರ್ಡಲ್ಸ್‍ನಲ್ಲಿ ಆಳ್ವಾಸ್‍ನ ಪ್ರಿಯಾಂಕ ಸಂಬಾಜಿ ರಾವ್ 14.1 ಸೆಕೆಂಡ್ಸ್‍ನಲ್ಲಿ ಗುರಿಮುಟ್ಟಿ ಆಳ್ವಾಸ್‍ನ ಪುಷ್ಪಾಂಜಲಿ (14.5) ದಾಖಲೆ ಯನ್ನು ಹಿಂದಿಕ್ಕಿದ್ದಾರೆ. ತ್ರಿಪಲ್ ಜಂಪ್‍ನಲ್ಲಿ ಅಳ್ವಾಸ್‍ನ ಸಿವ ಅನ್ಯರಾಸಿ ಎಂ.ಎ 13.22 ಮೀಟರ್ ದೂರ ಜಿಗಿದು  ಅದೇ ಸಂಸ್ಥೆಯ ಶೀನಾ ಎನ್.ವಿ ಹೆಸರಿನ(13.08)ಲ್ಲಿದ್ದ ದಾಖಲೆ ಮುರಿದರು.

ಪುರುಷರ ವಿಭಾಗದ 20 ಕಿಮೀ ನಡಿಗೆಯಲ್ಲಿ ಆಳ್ವಾಸ್‍ನ ಮನೋಜ್ 1:36:27.7 ಸೆಕೆಂಡ್ಸ್‍ನಲ್ಲಿ ಕ್ರಮಿಸಿ ಎಸ್‍ಡಿಎಂ ಉಜಿರೆಯ ವಿನೋದ್ ಹುಗೂರ್ಸ್ ಹೆಸರಿನ(1:39:29.8) ದಾಖಲೆಯನ್ನು ಅಳಿಸಿದ್ದಾರೆ.

ಶಾಟ್‍ಪುಟ್‍ನಲ್ಲಿ ಆಳ್ವಾಸ್‍ನ ಆಶಿಶ್ ಭಲೋಟಿಯಾ 16:45 ಮೀಟರ್ ದೂರಕ್ಕೆ ಎಸೆದು ಆಳ್ವಾಸ್‍ನ ಅಲ್ಫಿನ್(16:45)ದಾಖಲೆಯನ್ನು ಸರಿಗಟ್ಟಿದರು. 400 ಮೀಟರ್ ಓಟದಲ್ಲಿ ಆಳ್ವಾಸ್‍ನ ಮಿಜೊ ಚಾಕೊ ಕುರಿಯನ್ 47.6 ಸೆಕೆಂಡ್ಸ್‍ನಲ್ಲಿ ಕ್ರಮಿಸಿ ಆಳ್ವಾಸ್‍ನ ಕೆ.ಜಿ ಸಂಪ್ರತಿ ಅವರ (48.4) ದಾಖಲೆಯನ್ನು ಅಳಿಸಿ ಹೊಸ ದಾಖಲೆ ಬರೆದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X