ಕೆ.ಆರ್.ಪೇಟೆ: ಬಸ್ ಢಿಕ್ಕಿಯಾಗಿ ಮೊಪೆಡ್ ಸವಾರ ಮೃತ್ಯು
ಕೆ.ಆರ್.ಪೇಟೆ,ಅ.10: ಖಾಸಗಿ ಬಸ್ ಢಿಕ್ಕಿಯಾಗಿ ಮೊಪೆಡ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಗ್ಗೆ ಪಟ್ಟಣದಲ್ಲಿ ನಡೆದಿದೆ.
ತಾಲೂಕಿನ ಕೊಮ್ಮೇನಹಳ್ಳಿ ಗ್ರಾಮದ ನಿವೃತ್ತ ಎಚ್ಎಎಲ್ ನೌಕರ ಹನುಮಂತೇಗೌಡ(77) ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ.
ಬೆಳಗ್ಗೆ ಪಟ್ಟಣದ ಮಾರುಕಟ್ಟೆಯಲ್ಲಿ ಸಾಮಾನು ತೆಗೆದುಕೊಂಡು ಮೊಪೆಡ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಪಟ್ಟಣದ ಟಿ.ಬಿ.ವೃತ್ತದ ಬಳಿ ಈ ಘಟನೆ ಸಂಭವಿಸಿದೆ.
ಪಟ್ಟಣ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ಎಚ್.ಎಸ್.ವೆಂಕಟೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story