Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರಾಚೀನ ಮಯನ್ನರೂ ಉಪ್ಪು...

ಪ್ರಾಚೀನ ಮಯನ್ನರೂ ಉಪ್ಪು ಉತ್ಪಾದಿಸುತ್ತಿದ್ದರು!

ಪ್ರಪಂಚೋದ್ಯ

*ವಿಸ್ಮಯ*ವಿಸ್ಮಯ11 Oct 2018 12:08 AM IST
share
ಪ್ರಾಚೀನ ಮಯನ್ನರೂ ಉಪ್ಪು ಉತ್ಪಾದಿಸುತ್ತಿದ್ದರು!

ಮಯನ್ ನಾಗರಿಕತೆಯಲ್ಲಿ ಉಪ್ಪು ವೌಲ್ಯಯುತ ವಸ್ತು ಆಗಿರಬೇಕು. ಮಯನ್ ನಾಗರಿಕತೆಯಲ್ಲಿ 1000 ವರ್ಷಗಳ ಹಿಂದೆ ಉಪ್ಪಿನ ಉತ್ಪಾದನೆ ಹಾಗೂ ದಾಸ್ತಾನು ಮಾಡಲಾಗುತ್ತಿತ್ತು ಎಂದು ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಬೆಲಿಝೆಯಲ್ಲಿರುವ ಪಾಯ್ನಸ್ ಕ್ರೀಕ್ ಸಾಲ್ಟ್ ವರ್ಕ್ಸ್ ನಿವೇಶನದಲ್ಲಿ ಉಪ್ಪು ತಯಾರು ಮಾಡುವ ಕಬ್ಬಿಣದ ಸಾಧನಗಳು ಕಂಡು ಬಂದಿವೆ. ಇದು ಮಯನ್ ನಾಗರಿಕತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಉಪ್ಪು ತಯಾರಿಸಲಾಗುತ್ತಿತ್ತು, ಮಾತ್ರವಲ್ಲದೆ ಮೀನು ಹಾಗೂ ಮಾಂಸವನ್ನು ಸಂರಕ್ಷಿಸಲು ಉಪ್ಪನ್ನು ಬಳಸಲಾಗುತ್ತಿತ್ತು, ಉಪ್ಪನ್ನು ದಾಸ್ತಾನು ಕೂಡಾ ಮಾಡಲಾಗುತ್ತಿತ್ತು ಹಾಗೂ ಉಪ್ಪಿನ ವ್ಯಾಪಾರ ಮಾಡಲಾಗುತ್ತಿತ್ತು ಎಂಬುದನ್ನು ಸಾಬೀತುಪಡಿಸಿದೆ. ಪ್ರಾಚೀನ ನಾಗರಿಕತೆ ಬೇಟೆಯಿಂದ ಕೃಷಿ ಸಮಾಜದತ್ತ ಹೊರಳಿಕೊಂಡಿತು. ಆದರೆ, ಜೈವಿಕ ಅಗತ್ಯ ಎಂದು ಜನರು ಉಪ್ಪನ್ನು ಹೇಗೆ ಕಂಡುಕೊಂಡರು ಎಂಬುದು ಸ್ಪಷ್ಟವಾಗಿಲ್ಲ. ಅಮೆರಿಕದ ಲೂಸಿಯಾನ ಸ್ಟೇಟ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು 4000 ಮರದ ಕಂಬಗಳ ಚೌಕಟ್ಟು ಹೊಂದಿರುವ ಸರಣಿ ಕಟ್ಟಡಗಳನ್ನು ಪತ್ತೆ ಹಚ್ಚಿದ್ದಾರೆ. ಈ ಕಟ್ಟಡದಲ್ಲಿ ಉಪ್ಪು ತಯಾರು ಮಾಡುವ ಒಲೆಗಳು ಕಂಡು ಬಂದಿವೆ. ಈ ಒಲೆಗಳಲ್ಲಿ ಮಡಕೆ ಇರಿಸಿ ಉಪ್ಪು ನೀರನ್ನು ಇಂಗಿಸಿ ಉಪ್ಪು ತಯಾರಿಸಲಾಗುತ್ತಿತ್ತು. ಪ್ರಾಚೀನ ಕಾಲದಲ್ಲೂ ಆಧುನಿಕ ಯುಗದಲ್ಲೂ ಉಪ್ಪು ತಯಾರಿಸಲು ಮಡಕೆಗಳನ್ನು ಉಪಯೋಗಿಸಲಾಗುತ್ತಿತ್ತು. ಮಡಕೆಯಲ್ಲಿ ಉಪ್ಪು ನೀರು ಗಟ್ಟಿಯಾಗಿಸಿ ಉಪ್ಪು ತಯಾರಿಸಲಾಗುತ್ತಿತ್ತು. ಇದನ್ನು ಮೀನು ಹಾಗೂ ಮಾಂಸ ಕೆಡದಂತೆ ರಕ್ಷಿಸಲು ಬಳಸಲಾಗುತ್ತಿತ್ತು. ಮಯನ್ ನಾಗರಿಕತೆ (ಕ್ರಿ.ಪೂ. 300-900) ಜನರು ಕರಾವಳಿಯಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು ಹಾಗೂ ನದಿ ದಂಡೆಯಲ್ಲಿರುವ ನಗರಗಳಲ್ಲಿ ವ್ಯಾಪಾರ ನಡೆಸುತ್ತಿದ್ದರು ಹಾಗೂ ಬಾರ್ಟರ್ ಪದ್ಧತಿ ಮೂಲಕ ವಸ್ತುಗಳನ್ನು ಬದಲಾಯಿಸಿಕೊಳ್ಳುತ್ತಿದ್ದರು. ಮಯನ್ ನಾಗರಿಕತೆಯ ಜೈವಿಕ ಅಗತ್ಯಗಳನ್ನು ಪೂರೈಸಲು ಉಪ್ಪನ್ನು ಪ್ರಾದೇಶಿಕವಾಗಿ ಉತ್ಪಾದಿಸಲಾಗುತ್ತಿತ್ತು ಹಾಗೂ ವಿತರಣೆ ಮಾಡಲಾಗುತ್ತಿತ್ತು ಎಂಬುದನ್ನು ಈ ಸಂಶೋಧನೆ ಪತ್ತೆ ಹಚ್ಚಿದೆ.

share
*ವಿಸ್ಮಯ
*ವಿಸ್ಮಯ
Next Story
X