ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆಗೆ ಪ್ರಶಸ್ತಿ
ಮಂಗಳೂರು, ಅ.11: ಮಂಗಳೂರು ವ್ಯವಹಾರ ಆಡಳಿತ ಸಂಘ (ಎಂಎಂಎ)ದ ವಾರ್ಷಿಕ ಪ್ರಶಸ್ತಿಗೆ ಮಾಜಿ ಲೋಕಾಯುಕ್ತ, ನ್ಯಾ. ಸಂತೋಷ್ ಹೆಗ್ಡೆ ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಮಾರ್ಸೆಲ್ ಮೊಂತೆರೋ ತಿಳಿಸಿದ್ದಾರೆ.
ಗುರುವಾರ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು 1979ರಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯು 1997ರಿಂದ ಪ್ರತೀ ವರ್ಷವೂ ಸಾರ್ವಜನಿಕ ಮತ್ತು ಖಾಸಗಿ ರಂಗದಲ್ಲಿ ಅತ್ಯುತ್ತಮ ಸೇವೆಗೈದ ಪ್ರಬಂಧಕರು ಹಾಗೂ ವೃತ್ತಿಪರರನ್ನು ಆಯ್ಕೆ ಮಾಡಿಕೊಂಡು ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಬಾರಿಯ ಪ್ರಶಸ್ತಿಗೆ ನ್ಯಾ. ಸಂತೋಷ್ ಹೆಗ್ಡೆ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೆ ಹಲವು ಪ್ರಶಸ್ತಿಗೆ ಭಾಜನರಾಗಿರುವ ನ್ಯಾ. ಸಂತೋಷ್ ಹೆಗ್ಡೆಗೆ ಅ.14ರಂದು ಸಂಜೆ 6 ಗಂಟೆಗೆ ನಗರದ ಓಶಿಯನ್ ಪರ್ಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ಜಯರಾಜ್ ಬಿ. ರೈ, ಕಾರ್ಯದಶಿ ಡಾನ್ ಪ್ರಕಾಶ್, ಮಾಜಿ ಅಧ್ಯಕ್ಷ ಡಾ. ದೇವರಾಜ್ ಉಪಸ್ಥಿತರಿದ್ದರು.