Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಕಿರುಕುಳ ಕಾನೂನುಗಳ ಜಾರಿಗೆ...

ಲೈಂಗಿಕ ಕಿರುಕುಳ ಕಾನೂನುಗಳ ಜಾರಿಗೆ ಉದಾಸೀನ: ಟಿ.ವಿ.ಮೋಹನದಾಸ ಪೈ

ವಾರ್ತಾಭಾರತಿವಾರ್ತಾಭಾರತಿ11 Oct 2018 6:29 PM IST
share
ಲೈಂಗಿಕ ಕಿರುಕುಳ ಕಾನೂನುಗಳ ಜಾರಿಗೆ ಉದಾಸೀನ: ಟಿ.ವಿ.ಮೋಹನದಾಸ ಪೈ

ಹೈದರಾಬಾದ್,ಅ.11: ‘ಮೀ ಟೂ’ ಅಭಿಯಾನವು ಭಾರತದಲ್ಲಿ ಪ್ರಬಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಇನ್ಫೋಸಿಸ್ ನಿರ್ದೇಶಕ ಟಿ.ವಿ.ಮೋಹನದಾಸ ಪೈ ಅವರು,ಉದ್ಯೋಗದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನುಗಳನ್ನು ಅನುಷ್ಠಾನಿಸುವಲ್ಲಿ ಸರಕಾರ ಮತ್ತು ಇತರ ಸಂಸ್ಥೆಗಳು ಉದಾಸೀನದ ಧೋರಣೆಯನ್ನು ಹೊಂದಿವೆ ಎಂದು ಗುರುವಾರ ಇಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಲೈಂಗಿಕ ಕಿರುಕುಳವನ್ನು ತಡೆಯಲು ಈಗಿರುವ ಕಾನೂನು ಧಾರಾಳವಾಗಿ ಸಾಕು,ಆದರೆ ಮಾಮೂಲಿನಂತೆ ಅದರ ಅನುಷ್ಠಾನವು ದುರ್ಬಲವಾಗಿದೆ ಎಂದು ಹೇಳಿದ ಅವರು,ಇದ್ದುದರಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮವು ಈ ಕಾನೂನನ್ನು ಉತ್ತಮವಾಗಿ ಅನುಷ್ಠಾನಿಸುತ್ತಿದೆ ಮತ್ತು ಇತರರಿಗಿಂತ ಮುಂದಿದೆ ಎಂದರು.

ಎಲ್ಲ ಸಂಸ್ಥೆಗಳು ತಮ್ಮ ಕಚೇರಿಗಳಲ್ಲಿ ಲೈಂಗಿಕ ಕಿರುಕುಳ ಕಾನೂನುಗಳನ್ನು ಜಾರಿಗೊಳಿಸುವುದು ಅಗತ್ಯವಾಗಿದೆ,ಆದರೆ ಹೆಚ್ಚಿನವು,ವಿಶೇಷವಾಗಿ ಮಾಧ್ಯಮ ಮತ್ತು ಮನೋರಂಜನಾ ಕ್ಷೇತ್ರಗಳು ಈ ಬಗ್ಗೆ ಉದಾಸೀನತೆಯನ್ನು ಹೊಂದಿವೆ ಎಂದ ಅವರು,‘ಮೀ ಟೂ’ ಅಭಿಯಾನವು ಜಾಗತಿಕ ಆಂದೋಲನವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಕಾನೂನನ್ನು ಪಾಲಿಸದಿರುವ ಕಂಪನಿಗಳ ವಿರುದ್ಧ ಸರಕಾರವು ಕ್ರಿಮಿನಲ್ ಕಾನೂನು ಕ್ರಮಗಳನ್ನು ಜರುಗಿಸಬೇಕು. ಆದರೆ ಇದಕ್ಕಾಗಿ ಸೂಕ್ತ ವಿಧಿವಿಧಾನವನ್ನು ಸರಕಾರವು ಮೊದಲು ಖಚಿತಪಡಿಸಿಕೊಳ್ಳಬೇಕು. ತನಗೆ ತಿಳಿದುಬಂದಿರುವಂತೆ ಸರಕಾರವೇ ಬಹುಶಃ ದೊಡ್ಡ ಅಪರಾಧಿಯಾಗಿದೆ ಎಂದರು.

ಮುರಿದು ಬಿದ್ದಿರುವ ನ್ಯಾಯಾಂಗ ವ್ಯವಸ್ಥೆಯು ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಆಗಿದೆ. ನಮ್ಮ ಸಮಾಜದಲ್ಲಿ ಕಾನೂನಿನ ಆಡಳಿತಕ್ಕೆ ಗೌರವದ ಕೊರತೆಯಿದೆ. ಹಲವಾರು ಪೊಲೀಸರು ಮತ್ತು ಕಾನೂನು ಅಧಿಕಾರಿಗಳು ಭ್ರಷ್ಟರಾಗಿದ್ದಾರೆ ಮತ್ತು ಸಕಾಲದಲ್ಲಿ ನ್ಯಾಯದಾನದ ತಮ್ಮ ಕರ್ತವ್ಯದಲ್ಲಿ ನ್ಯಾಯಾಲಯಗಳು ವಿಫಲಗೊಳ್ಳುತ್ತಿವೆ. ಇದು ಬದಲಾಗುವ ಅಗತ್ಯವಿದೆ ಮತ್ತು ಆಗ ಮಾತ್ರ ಸುಧಾರಣೆಯನ್ನು ಕಾಣಬಹುದು ಎಂದು ಪೈ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X