Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ

ಉಡುಪಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ

ವಾರ್ತಾಭಾರತಿವಾರ್ತಾಭಾರತಿ11 Oct 2018 8:27 PM IST
share

ಉಡುಪಿ, ಅ.11: ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಮಂತ್ರಾಲಯ ದೇಶದ ಎಲ್ಲಾ ನಾಗರಿಕರಿಗೂ ಸೂರು ಒದಗಿಸುವ ಧ್ಯೇಯೋ ದ್ದೇಶದೊಂದಿಗೆ ‘ಹೌಸಿಂಗ್ ಫೋರ್ ಆಲ್-2022’ ಎಂಬ ನೂತನ ಆಭಿಯಾನವನ್ನು ಜಾರಿಗೊಳಿಸಿದೆ.

ನಗರ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತ ಕುಟುಂಬಗಳಿಗೆ 2022ರೊಳಗೆ ವಸತಿ ಸೌಲಭ್ಯ ಒದಗಿಸಲು, ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಯು ಕ್ರೆಡಿಟ್ ಲಿಂಕ್ ಸಬ್ಸಿಡಿ ಸ್ಕೀಂ ಎಂಬ ಉಪ ಘಟಕವನ್ನು ಜಾರಿಗೊಳಿಸಿದೆ. ಈ ಯೋಜನೆ ಉದ್ದೇಶ ಗರಿಷ್ಠ 18 ಲಕ್ಷ ರೂ. ಆದಾಯ ಹೊಂದಿರುವವರು ಹೊಸ ಮನೆಯನ್ನು ನಿರ್ಮಿಸಿಕೊಳ್ಳಲು, ಖರೀದಿಸಲು, ರಿಪೇರಿ ಇರುವ ಮನೆಗೆ ಹೆಚ್ಚುವರಿ ಕೊಠಡಿಗಳನ್ನು (ಕೊಠಡಿ, ಅಡುಗೆ ಮನೆ, ಶೌಚಾಲಯ, ಸ್ನಾನದ ಮನೆ) ನಿರ್ಮಿಸಿಕೊಳ್ಳಲು ಅನುಕೂಲವಾಗುವಂತೆ ಬ್ಯಾಂಕ್ ಸಾಲದ ಸೌಲ್ಯವಿದ್ದು, ಸಾಲದ ಮೊತ್ತಕ್ಕೆ ವಿಧಿಸಲಾಗುವ ಬಡ್ಡಿದರದಲ್ಲಿ ಸಹಾಯಧನ ಒದಗಿಸಲಾಗುತ್ತದೆ.

ವಾರ್ಷಿಕ ಆದಾಯ 3 ಲಕ್ಷದವರೆಗೆ ಕಟ್ಟಡ ವಿಸ್ತೀರ್ಣದ 30 ಚದರ ಮೀ.ವರೆಗೆ ಮನೆ ನಿರ್ಮಿಸಲು 6 ಲಕ್ಷದವರೆಗೆ ಶೇ.6.5 ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಬಡ್ಡಿ ದರದಲ್ಲಿ ರಿಯಾಯಿತಿಯನ್ನು 2.67 ಲಕ್ಷ ರೂ.ವನ್ನು ನೀಡಲಾಗುವುದು. ವಾರ್ಷಿಕ ಆದಾಯ 6 ಲಕ್ಷದವರೆಗೆ ಕಟ್ಟಡ ವಿಸ್ತೀರ್ಣ 60 ಚದರ ಮೀ.ವರೆಗೆ ಮನೆ ನಿರ್ಮಿಸಲು 6 ಲಕ್ಷದವರೆಗೆ ಶೇ.6.5 ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಬಡ್ಡಿ ದರದಲ್ಲಿ 2.67 ಲಕ್ಷ ರಿಯಾಯಿತಿ ನೀಡಲಾಗುವುದು.

ವಾರ್ಷಿಕ ಆದಾಯ 12 ಲಕ್ಷದವರೆಗೆ ಕಟ್ಟಡ ವಿಸ್ತೀರ್ಣ 160 ಚ.ಮೀ. ವರೆಗೆ ಮನೆ ನಿರ್ಮಿಸಲು 9 ಲಕ್ಷದವರೆಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಬಡ್ಡಿ ದರದಲ್ಲಿ 2.35 ಲಕ್ಷ ರಿಯಾಯಿತಿ ನೀಡಲಾಗುವುದು. ವಾರ್ಷಿಕ ಆದಾಯ 18 ಲಕ್ಷದವರೆಗೆ ಕಟ್ಟಡ ವಿಸ್ತೀರ್ಣ 200 ಚ.ಮೀ. ವರೆಗೆ ಮನೆ ನಿರ್ಮಿಸಲು 12 ಲಕ್ಷದವರೆಗೆ ಶೇ.3ರ ಬಡ್ಡಿದರದಲ್ಲಿ ಸಾಲ ನೀಡಲಾ ಗುವುದು. ಬಡ್ಡಿ ದರದಲ್ಲಿ 2.30 ಲಕ್ಷ ರೂ. ರಿಯಾಯಿತಿ ನೀಡಲಾಗುವುದು.

ನಗರ ಪ್ರದೇಶದ ಮಿತಿಯೊಳಗೆ ವಾಸಿಸುವ ಕುಟುಂಬಗಳಷ್ಟೇ ಅಲ್ಲದೇ, ಪ್ಲಾನಿಂಗ್ ಏರಿಯಾ/ಡೆವಲಪ್‌ಮೆಂಟ್ ಏರಿಯಾ/ಸ್ಪೆಷಲ್ ಏರಿಯಾ/ಇಂಡಸ್ಟ್ರೀಯಲ್ ಏರಿಯಾಗಳಲ್ಲಿ ವಾಸಿಸುವ ಕುಟುಂಬಗಳು ಕೂಡಾ ಈ ಯೋಜನೆಯ ಪ್ರಯೊೀಜನ ಪಡೆಯಲು ಅರ್ಹರಾಗಿರುತ್ತವೆ.

ಆದ್ದರಿಂದ ಕ್ರೆಡಿಟ್ ಲಿಂಕ್ ಸಬ್ಸಿಡಿ ಸ್ಕೀಂ ಯೋಜನೆಯಡಿ ಮನೆ ನಿರ್ಮಿಸಿ ಕೊಳ್ಳಲು ಆಸಕ್ತಿ ಹೊಂದಿರುವವರು ಸಂಬಂದಪಟ್ಟ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಉಡುಪಿ ನಗರಸಭೆ (ದೂರವಾಣಿ:9448723833, 9686125791), ಕಾರ್ಕಳ ಪುರಸಭೆ: 9741815079, ಕುಂದಾಪುರ ಪುರಸಭೆ: 9880164369, ಕಾಪು ಪುರಸಭೆ: 9449451584, ಸಾಲಿಗ್ರಾಮ ಪಟ್ಟಣ ಪಂಚಾಯತ್: 9449943882 ಹಾಗೂ -www.pmaymis.gov.in - ಮತ್ತು -https://ashraya.karnataka.gov.in-  ವೆಬ್‌ಸೈಟ್‌ನ್ನು ಸಂಪರ್ಕಿಸುವಂತೆ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X