ಸಚಿವ ಯು.ಟಿ ಖಾದರ್ ಆರೋಗ್ಯಕ್ಕೆ ಉಳ್ಳಾಲ ದರ್ಗಾದಲ್ಲಿ ಪ್ರಾರ್ಥನೆ
ಮಂಗಳೂರು, ಅ. 11: ವಸತಿ ಮತ್ತು ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ ಕಾಲು ನೋವಿನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಲು ಉಳ್ಳಾಲ ಸಯ್ಯಿದ್ ಮದನಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಖತೀಬರಾದ ಅಬ್ದುಲ್ ಅಝೀಝ್ ಬಾಖವಿ, ಮುದರ್ರಿಸ್ ಸ್ವಾದಿಕ್ ಸಖಾಫಿ, ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಪ್ರಧಾನ ಕಾರ್ಯದರ್ಶಿ ಹಾಜಿ ತ್ವಾಹ ಮುಹಮ್ಮದ್, ಉಪಾಧ್ಯಕ್ಷರುಗಳಾದ ಯು.ಕೆ ಮೋನು ಇಸ್ಮಾಯೀಲ್, ಬಾವ ಮುಹಮ್ಮದ್, ಸದಸ್ಯರಾದ ಪಾರೂಕ್ ಉಳ್ಳಾಲ್, ಹಮೀದ್ ಕೋಡಿ, ಮಹ್ಮೂದ್ ಅಳೇಕಲ, ಅಬೂಬಕರ್ ಅಲಿನಗರ, ಅರಬಿಕ್ ಟಸ್ಟ್ ಪ್ರಧಾನ ಕಾರ್ಯದರ್ಶಿ, ಅಮೀರ್ ಹಾಜಿ, ಜತೆ ಕಾರ್ಯದರ್ಶಿ ಆಸಿಫ್ ಅಬ್ದುಲ್ಲಾ ಮತ್ತು ಶರೀಅತ್, ದರ್ಸ್, ದಅವಾ ಹಿಫ್ಲ್ ವಿದ್ಯಾರ್ಥಿಗಳು ಹಾಜರಿದ್ದರು.
Next Story