Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಗನವಾಡಿ ಕಾರ್ಯಕರ್ತೆಯರು ಯಾವುದೇ...

ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ನರ್ಸ್, ಡಾಕ್ಟರ್ ಗಳಿಗೆ ಕಡಿಮೆಯಿಲ್ಲ: ಸಚಿವೆ ಜಯಮಾಲ

ವಾರ್ತಾಭಾರತಿವಾರ್ತಾಭಾರತಿ11 Oct 2018 9:24 PM IST
share
ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ನರ್ಸ್, ಡಾಕ್ಟರ್ ಗಳಿಗೆ ಕಡಿಮೆಯಿಲ್ಲ: ಸಚಿವೆ ಜಯಮಾಲ

ಮೈಸೂರು,ಅ.11: ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ನರ್ಸ್ ಮತ್ತು ಎಂಬಿಬಿಎಸ್ ಡಾಕ್ಟರ್ ಗಳಿಗಿಂತ ಕಡಿಮೆಯಿಲ್ಲ. ಅವರ ಸೇವೆ ಅಷ್ಟು ಮಹತ್ವದ್ದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಡಾ.ಜಯಮಾಲ ಬಣ್ಣಿಸಿದರು.

ಮಹಿಳಾ ಮತ್ತು ಮಕ್ಕಳ ಉಪದಸರಾ ಸಮಿತಿ ವತಿಯಿಂದ ಗುರುವಾರ ಜೆ.ಕ.ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಮತ್ತು ಮಕ್ಕಳ ದಸರಾವನ್ನು ಉದ್ಘಾಟಿಸಿ ಮಾತನಾಡಿದರು. ಯಾವ ಜನ್ಮದ ಪುಣ್ಯನೋ ಗೊತ್ತಿಲ್ಲ. ನಿಮ್ಮ ಸೇವೆ ಮಾಡುವ ಭಾಗ್ಯ ನನಗೆ ಒದಗಿ ಬಂದಿದೆ. ನಾನು ಸದಾ ಹೆಣ್ಣು ಮಕ್ಕಳ ಬಗ್ಗೆಯೇ ಯೋಚಿಸುತ್ತೇನೆ ಎಂದು ಹೇಳಿದರು.

ಒಟ್ಟು 65,911 ಅಂಗನವಾಡಿಗಳಿದ್ದು, ಅಂಗನವಾಡಿ ಶಿಕ್ಷಕರ, ಸಹಾಯಕಿಯರ ಕೆಲಸ ಎಷ್ಟು ಮಹತ್ವದ್ದು ಎಂದು ಗಮನಿಸಿದ್ದೇನೆ. ಅವರು ಮಾಡುವ ಕೆಲಸ ದೇವರ ಕೆಲಸ. ಅವರು ಮಾಡುವ ಕೆಲಸವನ್ನು ಡಾಕ್ಟರ್ ಕಲಿತವರು ಮಾಡಲ್ಲ. ಹಳ್ಳಿಗೆ ಹೋಗಿ ಕೆಲಸ ಮಾಡಲ್ಲ ಎನ್ನುತ್ತಾರೆ. ಅಂಗನವಾಡಿ ನೌಕರರು ಯಾವ ನರ್ಸ್, ಎಂಬಿಬಿಎಸ್ ಡಾಕ್ಟರ್ಸ್ ಗಳಿಗಿಂತ ಕಡಿಮೆಯಿಲ್ಲ. ನೀವು ನಿಜವಾದ ಸಮಾಜ ಸೇವಕಿಯರು. ನಿಮ್ಮ ಸೇವೆಯನ್ನು ಈ ಸಮಾಜ ತೆಗೆದುಕೊಂಡಿದೆ. ನೀವು ಪ್ರಶಸ್ತಿಯನ್ನೂ ಮೀರಿ ಬೆಳೆದವರು ನಿಮಗೆ ಹೃತ್ಪೂರ್ವಕ ಅಭಿನಂದನೆ ಎಂದರು.

ಸರ್ಕಾರ 25 ಸಾವಿರ ತುರ್ತು ನಿಧಿಯನ್ನು ಕೊಡುವ ಜೊತೆಯಲ್ಲಿ ಉದ್ಯೋಗಿನಿ ಯೋಜನೆಯನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡಲಿದೆ. ಒಂದು ಲಕ್ಷ ರೂ. ಇರೋದನ್ನು ಇತ್ತೀಚೆಗೆ ಮೂರು ಲಕ್ಷದವರೆಗೆ ಮಾಡಲಾಗಿದೆ. ಸರ್ಕಾರ ಜಾರಿಗೆ ತಂದಿರುವ ಎಲ್ಲ ಯೋಜನೆಯ ಫಲವನ್ನು ಬೇರೆಯವರಿಗೂ ಹೇಳಬೇಕು. ನೀವೂ ಅದನ್ನು ಬಳಸಿಕೊಳ್ಳಬೇಕು ಎಂದರು.

ಇದಕ್ಕೂ ಮೊದಲು ಅರಮನೆ ಮುಂಭಾಗ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯನ್ನು ರಂಗೋಲಿ ಬಿಡಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಯುವತಿಯರು ಮಹಿಳೆಯರು ವಿವಿಧ ವಿನ್ಯಾಸದ, ವರ್ಣರಂಜಿತ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು. 

ಕಾರ್ಯಕ್ರಮದಲ್ಲಿ ಶಾಸಕ ಹರ್ಷವರ್ಧನ್, ಜಿಲ್ಲಾ ಪಂಚಾಯತ್ ಸಿಇಓ ಕೆ.ಜ್ಯೋತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೆ.ರಾಧ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಪ್ರೇಮಕುಮಾರಿ, ಶಿವಲಿಂಗಪ್ಪ, ಬಸವರಾಜು ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X