Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಲ್ವರು ಅಂತರಾಜ್ಯ ಗಾಂಜಾ ಮಾರಾಟಗಾರರ...

ನಾಲ್ವರು ಅಂತರಾಜ್ಯ ಗಾಂಜಾ ಮಾರಾಟಗಾರರ ಬಂಧನ: 7.15 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಾರ್ತಾಭಾರತಿವಾರ್ತಾಭಾರತಿ12 Oct 2018 8:10 PM IST
share
ನಾಲ್ವರು ಅಂತರಾಜ್ಯ ಗಾಂಜಾ ಮಾರಾಟಗಾರರ ಬಂಧನ: 7.15 ಲಕ್ಷ ರೂ. ಮೌಲ್ಯದ ಸೊತ್ತು ವಶ

ದಾವಣಗೆರೆ,ಅ.12: ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಅಂತರಾಜ್ಯ ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 7.15 ಲಕ್ಷ ರೂ. ಮೌಲ್ಯದ 28 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಆರ್. ಚೇತನ್, ಬಂಧಿತ ಆರೋಪಿಗಳಾದ ಸುಧಾಕರ್, ರಾಜೇಶ್, ಮುನ್ನಯ್ಯ, ಶೇಖ್ ಬಾಬಾ ಇವರೆಲ್ಲರೂ ಆಂದ್ರಪ್ರದೇಶದ ಕಡಪ ಜಿಲ್ಲೆಯವರು. ಇವರ ಜೊತೆ ತರಪನಾಥ್ ಎಂಬ ವ್ಯಕ್ತಿ ಇದ್ದು, ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಿದರು. 

ಘಟನೆ ವಿವರ: ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ನಗರದ ಅಜ್ಜಿಹಳ್ಳಿ ಸರ್ಕಲ್ ಬಳಿಯ ಬಸ್ ನಿಲ್ದಾಣದಲ್ಲಿ ನಾಲ್ಕು ಬಟ್ಟೆ ಬ್ಯಾಗ್‍ಗಳಲ್ಲಿ ವಸ್ತುಗಳನ್ನಿಟ್ಟುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿ, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪಿಎಸ್‍ಐ ಶಿವರುದ್ರಪ್ಪ ಎಸ್ ಮೇಟಿ ನೇತೃತ್ವದಲ್ಲಿ ದಾಳಿ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಈ ವ್ಯಕ್ತಿಗಳು ಕಳೆದ ಸುಮಾರು ದಿನಗಳಿಂದ ಈ ದಂಧೆ ನಡೆಸುತ್ತಿದ್ದು, ದಾವಣಗೆರೆ, ಭದ್ರಾವತಿ, ಶಿವಮೊಗ್ಗ, ಹೊಳಲ್ಕೆರೆ, ಚನ್ನಗಿರಿ ಮುಂತಾದ ಕಡೆಗಳಲ್ಲಿ ಈ ದಂಧೆ ನಡೆಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಅಂತಾರಾಜ್ಯ ಗಾಂಜಾ ಮಾರಾಟ ಪ್ರಕರಣ ದಾಖಲಾಗಿದೆ ಎಂದು ಅವರು ವಿವರಿಸಿದರು.

ಮಾದಕ ವಸ್ತುಗಳಾದ ಗಾಂಜಾ, ಅಫೀಮುಗಳ ಬಗ್ಗೆ ಎಲ್ಲಾ ಶಾಲಾ ಕಾಲೇಜು ಸೇರಿದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಕುರಿತು ಸಾರ್ವಜನಿಕರೂ ಮಾಹಿತಿ ನೀಡುವ ಮೂಲಕ ಸಹಕರಿಸುತ್ತಿದ್ದಾರೆ ಎಂದರು.

ಇತ್ತೀಚೆಗೆ ದಾವಣಗೆರೆ ಹದಡಿ ರಸ್ತೆಯಲ್ಲಿ ನಡೆದ ಸಂಚಾರಿ ಪೊಲೀಸರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ವೈದ್ಯರ ವರದಿ ಬಂದ ನಂತರ ಮುಂದಿನಕ್ರಮ ಕೈಗೊಳ್ಳಲಾಗುವುದೆಂದು ಎಸ್ಪಿ ಚೇತನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಮಾಂತರ ಡಿವೈಎಸ್‍ಪಿ ಎಂ.ಕೆ. ಗಂಗಲ್, ಸಿಪಿಐಗಳಾದ ಗಜೇಂದ್ರಪ್ಪ ಗುರುಬಸವರಾಜ್ ಹಾಗೂ ಸಿಬ್ಬಂದಿಗಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X