Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಲಿವುಡ್‌ನಲ್ಲೂ ನಿರ್ಮಾಣವಾಗಲಿದೆ...

ಬಾಲಿವುಡ್‌ನಲ್ಲೂ ನಿರ್ಮಾಣವಾಗಲಿದೆ ಅಂಗಮಾಲಿ ಡೈರೀಸ್

ವಾರ್ತಾಭಾರತಿವಾರ್ತಾಭಾರತಿ13 Oct 2018 6:29 PM IST
share
ಬಾಲಿವುಡ್‌ನಲ್ಲೂ ನಿರ್ಮಾಣವಾಗಲಿದೆ ಅಂಗಮಾಲಿ ಡೈರೀಸ್

ದಕ್ಷಿಣದ ಸಿನೆಮಾಗಳೆಂದರೆ ಬಾಲಿವುಡ್ ಮಂದಿಗೆ ಎಲ್ಲಿಲ್ಲದ ಸೆಳೆತ. ಬಾಲಿವುಡ್‌ನಲ್ಲಿ ಯಶಸ್ವಿಯಾಗುವ ಸಿನೆಮಾಗಳಲ್ಲಿ ಬಹಳಷ್ಟು ಚಿತ್ರಗಳು ದಕ್ಷಿಣದ ಚಿತ್ರಗಳ ರಿಮೇಕ್‌ಗಳಾಗಿರುತ್ತವೆ. ಈ ಪಟ್ಟಿಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ಸಿನೆಮಾಗಳು ಸೇರುತ್ತಲೇ ಹೋಗುತ್ತಿವೆ.

ಮಲಯಾಳಂ ಪ್ರೇಕ್ಷಕರನ್ನು ಕುರ್ಚಿಯ ತುದಿಯಲ್ಲಿ ಕೂರುವಂತೆ ಮಾಡಿದ್ದ ಕ್ರೈಂ-ಡ್ರಾಮಾ ಅಂಗಮಾಲಿ ಡೈರೀಸ್ ಚಿತ್ರ ಸದ್ಯ ಬಾಲಿವುಡ್‌ನಲ್ಲಿ ರಿಮೇಕ್ ಆಗುತ್ತಿದೆ. ಏರ್‌ಲಿಫ್ಟ್ ಮತ್ತು ಟಾಯ್ಲೆಟ್-ಏಕ್ ಪ್ರೇಮ್ ಕಥಾ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ವಿಕ್ರಂ ಮಲ್ಹೋತ್ರಾ ಅಂಗಮಾಲಿ ಡೈರಿಯನ್ನು ಹಿಂದಿಯಲ್ಲಿ ತಯಾರಿಸುವ ಹಕ್ಕನ್ನು ಪಡೆದುಕೊಂಡಿದ್ದಾರೆ. ಚಿತ್ರವನ್ನು ಹಿಂದಿಯಲ್ಲಿ ನಿರ್ಮಿಸುತ್ತಿರುವ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿರುವ ವಿಕ್ರಂ, ಅಂಗಮಾಲಿ ಚಿತ್ರ ನಿಜವಾದ ಅರ್ಥದಲ್ಲಿ ಒಂದು ಮಾಸ್ಟರ್ ಕ್ಲಾಸ್ ಸಿನೆಮಾ ಆಗಿದೆ. ಈ ಚಿತ್ರದಲ್ಲಿ 86 ಮಂದಿ ಪಾದಾರ್ಪಣೆ ಮಾಡಿದ್ದಾರೆ, ಅಸಹಜ ನಿರೂಪಣೆಯನ್ನು ಹೊಂದಿದೆ ಮತ್ತು ಒಂದೇ ಶಾಟ್‌ನಲ್ಲಿ ತೆಗೆದ ಹನ್ನೊಂದು ನಿಮಿಷಗಳ ಕ್ಲೈಮ್ಯಾಕ್ಸ್ ಇದೆ. ಈ ಚಿತ್ರವು ಮಲಯಾಳಿಯೇತರ ಚಿತ್ರ ಪ್ರೇಕ್ಷಕನನ್ನೂ ಚಿತ್ರರಂಗದತ್ತ ಸೆಳೆದಿತ್ತು. ಇಂಥ ಒಂದು ಅಮೂಲ್ಯ ರತ್ನವನ್ನು ಬಾಲಿವುಡ್‌ನಲ್ಲಿ ತಯಾರಿಸಲು ನಾನು ಉತ್ಸುಕನಾಗಿದ್ದೇನೆ ಎಂದು ತಿಳಿಸಿದ್ದಾರೆ. ಅಂಗಮಾಲಿ ಡೈರಿಸ್ ಚಿತ್ರದ ನಿರ್ದೇಶಕ ಲಿಜೊ ಜೋಸ್ ಪೆಲ್ಲಿಸೆರಿ ಹಿಂದಿ ಅವತರಣಿಕೆಯಲ್ಲಿ ಕ್ರಿಯೇಟಿವ್ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಉಳಿದಂತೆ ಇತರ ತಾಂತ್ರಿಕ ವರ್ಗ ಮತ್ತು ನಟ-ನಟಿಯರಿಗಾಗಿ ಶೋಧ ನಡೆಯುತ್ತಿದೆ. ಸಣ್ಣ ಪಟ್ಟಣವೊಂದರಲ್ಲಿ ನಡೆಯುವ ಗ್ಯಾಂಗ್ ವಾರ್‌ಗಳು ಮತ್ತು ಬದುಕುಳಿಯಲು ಗುಂಪಿನ ಜನರು ತಮಗೆ ಸಾಧ್ಯವಿರುವ ಎಲ್ಲ ರೀತಿಯ ವಿಧಾನಗಳನ್ನು ಮತ್ತು ಹುಚ್ಚುತನವನ್ನು ಅನುಸರಿಸುವ ಕತೆಯನ್ನು ಅಂಗಮಾಲಿ ಡೈರೀಸ್ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X