Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವಕರ, ಪದವೀಧರರ ಭವಿಷ್ಯದ ಜೊತೆ...

ಯುವಕರ, ಪದವೀಧರರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಕೇಂದ್ರ ಸರಕಾರ: ರಾಹುಲ್‌ ಗಾಂಧಿ

ಎಚ್‌ಎಎಲ್ ಜೊತೆಗಿನ ರಫೆಲ್ ಒಪ್ಪಂದ ರದ್ದು

ವಾರ್ತಾಭಾರತಿವಾರ್ತಾಭಾರತಿ13 Oct 2018 7:59 PM IST
share
ಯುವಕರ, ಪದವೀಧರರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಕೇಂದ್ರ ಸರಕಾರ: ರಾಹುಲ್‌ ಗಾಂಧಿ

ಬೆಂಗಳೂರು, ಅ.13: ಎಚ್‌ಎಎಲ್ ಜೊತೆಗಿನ ರಫೆಲ್ ಯುದ್ಧ ವಿಮಾನ ತಯಾರಿಸುವ ಒಪ್ಪಂದವನ್ನು ರದ್ದುಪಡಿಸುವುದರ ಜೊತೆಗೆ ಕೇಂದ್ರ ಸರಕಾರವು ಸಾವಿರಾರು ಮಂದಿ ಉತ್ಸಾಹಿ, ಯುವ ಪದವೀಧರರ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ನಗರದ ಎಚ್‌ಎಎಲ್ ಕೇಂದ್ರ ಕಚೇರಿಯ ಎದುರು ಇರುವ ಮಿನ್ಕ್ಸ್ ಸ್ಕ್ವೇರ್(ಕಬ್ಬನ್‌ಪಾರ್ಕ್)ನಲ್ಲಿ ಎಚ್‌ಎಎಲ್ ನಿವೃತ್ತ ನೌಕರರೊಂದಿಗೆ ಹಮ್ಮಿಕೊಂಡಿದ್ದ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೇಂದ್ರ ಸರಕಾರವು ಎಚ್‌ಎಎಲ್ ಜೊತೆಗಿನ ಒಪ್ಪಂದವನ್ನು ರದ್ದುಪಡಿಸುವ ಮುನ್ನ ಆಲೋಚನೆ ಮಾಡಬೇಕಿತ್ತು. ಇಂದಿನ ಸಂವಾದದಲ್ಲಿ ನಾನು ಎಚ್‌ಎಎಲ್‌ನ ನಿವೃತ್ತ ಸಿಬ್ಬಂದಿಗಳ ಜೊತೆ ಚರ್ಚೆ ಮಾಡಿದ್ದೇನೆ. ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆ ಎಚ್‌ಎಎಲ್ 70 ವರ್ಷಗಳ ಸುದೀರ್ಘ ಅನುಭವ ಹೊಂದಿದೆ ಎಂದು ಅವರು ಹೇಳಿದರು.

ಸುಖೋಯ್, ತೇಜಸ್ ಸೇರಿದಂತೆ ಅನೇಕ ಯುದ್ಧ ವಿಮಾನಗಳನ್ನು ಎಚ್‌ಎಎಲ್ ಸಿದ್ಧಪಡಿಸಿದೆ. ಅವರ ಪರಿಶ್ರಮಕ್ಕೆ ಕೇಂದ್ರ ಸರಕಾರ ಅವಮಾನ ಮಾಡಿದೆ. ಎಚ್‌ಎಎಲ್‌ಗೆ ಸಾಮರ್ಥ್ಯ ಇಲ್ಲ ಎನ್ನುವ ಕೇಂದ್ರ ರಕ್ಷಣಾ ಸಚಿವೆ, ಯಾವುದೇ ಅನುಭವವಿಲ್ಲದ ಅನಿಲ್ ಅಂಬಾನಿ ಜೊತೆ 30 ಸಾವಿರ ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಯಾಕೆ ಮೌನವಹಿಸಿದ್ದಾರೆ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದರು.

ಎಚ್‌ಎಎಲ್‌ನ ಅನುಭವ, ಸಾಮರ್ಥ್ಯ ಹಾಗೂ ಅನಿಲ್ ಅಂಬಾನಿಯ ನಡುವೆ ಯಾವ ಹೋಲಿಕೆಯೂ ಇಲ್ಲ. ಪ್ರಧಾನಿ ನರೇಂದ್ರಮೋದಿ, ಅನಿಲ್ ಅಂಬಾನಿಗೆ ಸಹಾಯ ಮಾಡಲು ಈ ಒಪ್ಪಂದವನ್ನು ಬಳಸಿಕೊಂಡಿದ್ದಾರೆ. ದೇಶದ ಪ್ರತಿಯೊಬ್ಬ ನಾಗರಿಕರೂ ಇದನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಎಚ್‌ಎಎಲ್ ಸಂಸ್ಥೆ ನಷ್ಟದಲ್ಲಿಲ್ಲ. ಆದರೆ, ಅನಿಲ್ ಅಂಬಾನಿ ನಷ್ಟದಲ್ಲಿದ್ದಾರೆ. ಎಚ್‌ಎಎಲ್ ಜೊತೆಗಿನ ಒಪ್ಪಂದವನ್ನು ರದ್ದುಪಡಿಸುವ ಮೂಲಕ ದೇಶದ ಯುವಕರ ಭವಿಷ್ಯವನ್ನೆ ಕಸಿಯಲಾಗಿದೆ. ಎಚ್‌ಎಎಲ್‌ನ ಸಿಬ್ಬಂದಿಗಳು ತಮ್ಮ ಜೀವನವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟಿದ್ದಾರೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

ರಫೆಲ್ ಯುದ್ಧ ವಿಮಾನದ ಒಪ್ಪಂದ ಕುರಿತು ರಕ್ಷಣಾ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಫ್ರಾನ್ಸ್‌ನ ಮಾಜಿ ಅಧ್ಯಕ್ಷರೇ ಈ ಒಪ್ಪಂದ ಕುರಿತು ಹೇಳಿದ್ದಾರೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X