Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಗೈಯಲ್ಲಿ ಬೆಳೆ ಸಮೀಕ್ಷೆ ಮಾಹಿತಿ ‘ಬೆಳೆ...

ಅಂಗೈಯಲ್ಲಿ ಬೆಳೆ ಸಮೀಕ್ಷೆ ಮಾಹಿತಿ ‘ಬೆಳೆ ದರ್ಶಕ್’

ವಾರ್ತಾಭಾರತಿವಾರ್ತಾಭಾರತಿ13 Oct 2018 10:30 PM IST
share

ಉಡುಪಿ, ಅ.13: ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸಮೀಕ್ಷೆ ನಡೆಸುವವರ ವಿವರ ಈಗ ರೈತರ ಅಂಗೈನಲ್ಲೇ ಲಭ್ಯವಾಗಲಿದೆ. ರಾಜ್ಯ ಸರಕಾರದ ಇ-ಆಡಳಿತ ಇಲಾಖೆ ಪರಿಚಯಿಸಿರುವ ‘ಬೆಳೆ ದರ್ಶಕ್’ ಆ್ಯಪ್ ಮೂಲಕ ರೈತರು ತಮ್ಮ ಮೊಬೈಲ್‌ನಲ್ಲೇ ತಮ್ಮ ಹೊಲದ ಸಮೀಕ್ಷೆ ನಡೆದ ಸಚಿತ್ರ ವರದಿ, ನಡೆದಿಲ್ಲವಾದರೆ ಸಮೀಕ್ಷೆ ನಡೆಸುವವರ ಹೆಸರು, ಮೊಬೈಲ್ ಸಂಖ್ಯೆ ಇತ್ಯಾದಿ ವಿವರಗಳನ್ನು ಪಡೆಯಬಹುದಾಗಿದೆ.

ಪ್ಲೇಸ್ಟೋರ್‌ನಲ್ಲಿ ಲಭ್ಯವಿರುವ ಬೆಳೆ ದರ್ಶಕ್ ಆ್ಯಂಡ್ರಾಯ್ಡಾ ಫೋನ್ ಅಪ್ಲಿಕೇಷನ್ ಉಚಿತವಾಗಿದೆ.ಇದನ್ನು ಬಳಸುವ ವಿಧಾನವೂ ಅತ್ಯಂತ ಸರಳ ವಾಗಿದೆ. ಬೆಳೆ ಸಮೀಕ್ಷೆ ಕಾರ್ಯ ಈವರೆಗೂ ನಿಮ್ಮಲ್ಲಿ ಆರಂಭವಾಗದಿದ್ದರೆ ಕರೆ ಮಾಡಿ ಸಮೀಕ್ಷೆ ನಡೆಸುವವರನ್ನು ಸಂಪರ್ಕಿಸಬಹುದು. ದಾಖಲಿಸಿರುವ ಮಾಹಿತಿ ಸರಿಯಾಗಿಲ್ಲದಿದ್ದರೆ ತಾಲೂಕು ಕಚೇರಿಗೂ ದೂರು ನೀಡಬಹುದು.

ಬಳಕೆಗೆ ಅತ್ಯಂತ ಸರಳವಾದ ಎರಡು ಪರದೆಯುಳ್ಳ ಆ್ಯಪ್ ಇದಾಗಿದೆ. ಮೊದಲ ಪರದೆಯಲ್ಲಿ ಬೆಳೆ ಸಮೀಕ್ಷೆ ವರ್ಷ, ಋತುಮಾನ, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಮತ್ತು ಸರ್ವೇ ನಂಬರ್ ಹಾಕಿ ವಿವರ ಪಡೆಯಬಹುದು. ಇದಾದ ನಂತರ ಸರ್ವೇ ನಂಬರ್/ಹಿಸ್ಸಾ ವಿವರ ಸಿಗಲಿದೆ. ಇಲ್ಲಿ ಒಂದೇ ಸರ್ವೇ ನಂಬರ್‌ನಲ್ಲಿ ಒಂದಕ್ಕಿಂತ ಹೆಚ್ಚು ಹಿಸ್ಸೆಗಳು ಇದ್ದಲ್ಲಿ ಅದನ್ನು ಆಯ್ಕೆ ಮಾಡಬೇಕು. ಕೊನೆಯದಾಗಿ ಮಾಲಕರ ವಿವರ ಪಡೆದು ಇದನ್ನು ಖಚಿತ ಪಡಿಸಿಕೊಳ್ಳಬಹುದು.

ಇದಾದ ನಂತರ ಗ್ರಾಮದ ಬೆಳೆ ಸಮೀಕ್ಷೆ ನಡೆಸುವವರ ವಿವರ ಹಾಗೂ ದಾಖಲಿಸಿದ ಬೆಳೆ ವಿವರಕ್ಕೆ ಪ್ರತ್ಯೇಕ ಎರಡು ಗುಂಡಿಗಳಿವೆ. ಸಮೀಕ್ಷೆದಾರರ ವಿವರ ಕ್ಲಿಕ್ಕಿಸಿದರೆ ಅವರ ಹೆಸರು ಹಾಗೂ ಮೊಬೈಲ್ ಸಂಖ್ಯೆ ಪರದೆ ಮೇಲೆ ಮೂಡಲಿದೆ. ದಾಖಲಿಸಿದ ಬೆಳೆ ವಿವರ ಕ್ಲಿಕ್ಕಿಸಿದರೆ ಬೆಳೆ ಹೆಸರು, ವಿಸ್ತೀರ್ಣ, ವರ್ಗ ಹಾಗೂ ಚಿತ್ರ ಸಿಗಲಿದೆ. ಒಂದೊಮ್ಮೆ ಇಲ್ಲಿ ದಾಖಲಾದ ವಿವರ ಸರಿ ಇಲ್ಲ ಎಂದಾದಲ್ಲಿ ಆಯಾ ವ್ಯಾಪ್ತಿಯ ತಾಲೂಕು ಕಚೇರಿಯನ್ನು ಸಂಪರ್ಕಿಸಬಹುದು ಎಂಬ ಒಕ್ಕಣೆಯೂ ಈ ಪರದೆಯಲ್ಲಿ ಮೂಡುತ್ತದೆ.

ಪ್ಲೇಸ್ಟೋರ್‌ನಲ್ಲಿ ಬೆಳೆ ದರ್ಶಕ್ ಆ್ಯಪ್ ಲಭ್ಯ. ಕೇವಲ 3.8 ಎಂಬಿ ಗಾತ್ರದ ಈ ಆ್ಯಪ್ ಈಗಾಗಲೇ ಸಾವಿರಕ್ಕೂ ಅಧಿಕ ಡೌನ್‌ಲೋಡ್ ಆಗಿದೆ. ಇದರ ರೇಟಿಂಗ್ 4.1 ಇದೆ. ಈಗಾಗಲೇ ಇದರ ಬಳಕೆದಾರರು ಆ್ಯಪ್ ಕುರಿತ ರಿವ್ಯೆ ನಲ್ಲಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X