Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕವಿತೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರೆ...

ಕವಿತೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರೆ ಆರೋಗ್ಯಪೂರ್ಣ ಮನಸ್ಥಿತಿ ಕಾಪಾಡಲು ಸಾಧ್ಯ: ಸಾಹಿತಿ ಶೂದ್ರ ಶ್ರೀನಿವಾಸ

ವಾರ್ತಾಭಾರತಿವಾರ್ತಾಭಾರತಿ13 Oct 2018 10:50 PM IST
share
ಕವಿತೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರೆ ಆರೋಗ್ಯಪೂರ್ಣ ಮನಸ್ಥಿತಿ ಕಾಪಾಡಲು ಸಾಧ್ಯ: ಸಾಹಿತಿ ಶೂದ್ರ ಶ್ರೀನಿವಾಸ

ಮೈಸೂರು,ಅ.13: ಯಾರು ಕಾವ್ಯದ ಬಗ್ಗೆ, ಕವಿತೆಯ ಬಗ್ಗೆ ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಾರೋ, ಅವರೆಲ್ಲರೂ ಕೂಡ ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಆರೋಗ್ಯಪೂರ್ಣ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಸಾಹಿತಿ ಶೂದ್ರ ಶ್ರೀನಿವಾಸ ತಿಳಿಸಿದರು.

ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ವಿಶ್ವವಿದ್ಯಾನಿಲಯದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶನಿವಾರ ನಡೆದ ಯುವ ಕವಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು. ರಸಋಷಿ ಕುವೆಂಪು ಅವರು ಪಾಠ ಮಾಡಿದ ಜಾಗಕ್ಕೆ ಬಂದಿರುವುದು ನನ್ನ ಬದುಕಿನ ಪುಣ್ಯ. ಕುವೆಂಪು ಅವರಿಂದ ಪಾಠ ಕೇಳಿದ ಡಾ.ಜಿ.ಎಸ್.ಶಿವರುದ್ರಪ್ಪ, ಲಕ್ಷ್ಮಿನಾರಾಯಣ ಭಟ್ ಅವರ ಕಾವ್ಯದ ಅಮೋಘತೆಯಿಂದ ಆಕರ್ಷಿತನಾದವನು ನಾನು. ಕಾವ್ಯ ನಮ್ಮನ್ನು ಕಾಪಾಡಬೇಕು. ನಮ್ಮ ಮನಸ್ಥಿತಿಯನ್ನು ರಕ್ಷಿಸಬೇಕು. ಬೇರೆ ಬೇರೆ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರೂ ಕೂಡ ಇಂದು ಕಾವ್ಯದ ಬಗ್ಗೆ ಗಾಢವಾದ ವ್ಯಾಮೋಹ ಬೆಳೆಸಿಕೊಂಡು ಕಾವ್ಯ ಬರೆಯತೊಡಗಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದರು. 

ಡಾ.ಜಿ.ಎಸ್.ಶಿವರುದ್ರಪ್ಪ, ಸಿದ್ದಲಿಂಗಯ್ಯ ಅವರು ಕುವೆಂಪು ಮಾಡಿದ ಪಾಠದ ಕುರಿತು ಗಾಢವಾದ ವ್ಯಾಮೋಹ ಬೆಳೆಸಿದ್ದರು. ಎರಡು ಸಾವಿರ ವರ್ಷಗಳ ಹಿಂದಿನ ರಾಮಾಯಣ, ಮಹಾಭಾರತ ಕಾವ್ಯಗಳು ಇಂದಿಗೂ ಆರೋಗ್ಯಪೂರ್ಣ ಜೀವನವನ್ನು ನಿರ್ಧರಿಸುತ್ತವೆ, ಕಾಪಾಡುತ್ತದೆ. ಭಾರತ ಮಾತ್ರವಲ್ಲ ಜಗತ್ತಿನ ಬೇರೆ, ಬೇರೆ ಭಾಷೆಗಳಲ್ಲಿಯೂ ರಾಮಾಯಣ, ಮಹಾಭಾರತ ಕುರಿತು ಕೃತಿ ಹುಟ್ಟಿಕೊಳ್ಳುತ್ತಿವೆ ಎಂದರು.

ಕರ್ನಾಟಕದ ಉದ್ದಗಲಕ್ಕೂ ದಲಿತರು ಆರೋಗ್ಯಪೂರ್ಣ ಕವಿತೆ ಬರೆಯಬೇಕು ಎಂಬ ಉದ್ದೇಶದಿಂದ ಹಲವಾರು ಕವಿತೆಗಳನ್ನು ಶೂದ್ರದಲ್ಲಿ ಪ್ರಕಟಿಸಿದೆ. ಲೋಹಿಯಾ ಹೇಳುವಂತೆ ಸಾಹಿತ್ಯ, ಸಂಸ್ಕೃತಿ, ರಾಜಕಾರಣ ಯಾವುದೂ ಬೇರೆಯಲ್ಲ. ಅವುಗಳನ್ನು ಸಮಾಜದ ಮುಖ್ಯ ಅಂಗವಾಗಿ ಸ್ವೀಕರಿಸಬೇಕು. ಗಾಂಧೀಜಿ, ಲೋಹಿಯಾ, ನೆಹರೂ ಅವರಿಗೆ ಅರಿವಿನ ಬಗ್ಗೆ ಅಗಾಧ ಪ್ರೀತಿಯಿತ್ತು. ಇಲ್ಲದಿದ್ದರೆ ಜಗತ್ತನ್ನು ಅರಿತುಕೊಳ್ಳಲು ಸಾಧ್ಯವಿರಲಿಲ್ಲ ಎಂದು ತಿಳಿಸಿದರು.

ಮನಸ್ಸಿನಲ್ಲಿ ಕಾವ್ಯದ ಸಾಲುಗಳು ಹುಟ್ಟಿಕೊಳ್ಳಬೇಕು. ಕವಿತೆಯ ಸಾಲುಗಳು ಪಕ್ವವಾಗುತ್ತಾ ಹೋಗಬೇಕು. ಗದ್ದಲಕ್ಕೆ ಒಳಗಾಗಬಾರದು. ಸಂತರ ರೀತಿಯಲ್ಲಿ ವಾಕ್ಯಗಳು ರೂಪುಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ರಾಜಣ್ಣ, ಖ್ಯಾತ ಕವಯಿತ್ರಿ ಕೆ.ಷರೀಫಾ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X