Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮೀ ಟೂ’ ಅಭಿಯಾನ: ಆರೋಪ...

‘ಮೀ ಟೂ’ ಅಭಿಯಾನ: ಆರೋಪ ಸಾಬೀತಾದವರೊಂದಿಗೆ ಕೆಲಸ ಮಾಡದಿರಲು 11 ನಿರ್ದೇಶಕಿಯರ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ14 Oct 2018 8:13 PM IST
share
‘ಮೀ ಟೂ’ ಅಭಿಯಾನ: ಆರೋಪ ಸಾಬೀತಾದವರೊಂದಿಗೆ ಕೆಲಸ ಮಾಡದಿರಲು 11 ನಿರ್ದೇಶಕಿಯರ ನಿರ್ಧಾರ

 ಮುಂಬೈ,ಅ.14: ಚಲನಚಿತ್ರೋದ್ಯಮದ ಹಲವರು ಲೈಂಗಿಕ ಕಿರುಕುಳ ಮತ್ತು ದುರ್ವರ್ತನೆಯ ಆರೋಪಗಳನ್ನು ಹೊತ್ತು ‘ಮೀ ಟೂ’ ಅಭಿಯಾನದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಈ ಅಭಿಯಾನಕ್ಕೆ ತಮ್ಮ ಬೆಂಬಲದ ದ್ಯೋತಕವಾಗಿ ಆರೋಪ ಸಾಬೀತಾದವರೊಂದಿಗೆ ತಾವು ಕೆಲಸ ನಿರ್ವಹಿಸುವುದಿಲ್ಲ ಎಂದು ಬಾಲಿವುಡ್‌ನ 11 ಚಿತ್ರನಿರ್ದೇಶಕಿಯರು ಹೇಳಿದ್ದಾರೆ.

ಅಲಂಕೃತಾ ಶ್ರೀವಾಸ್ತವ,ಕೊಂಕಣಾ ಸೇನ್ ಶರ್ಮಾ,ಗೌರಿ ಶಿಂಧೆ,ಮೇಘನಾ ಗುಲ್ಝಾರ್,ನಂದಿತಾ ದಾಸ್,ರೆಯಾ ಅಖ್ತರ್,ನಿತ್ಯಾ ಮೆಹ್ರಾ,ರೀಮಾ ಕಾಗ್ತಿ, ಸೋನಾಲಿ ಬೋಸ್,ರುಚಿ ನಾರಾಯಣ್ ಮತ್ತು ಕಿರಣ್ ರಾವ್ ಅವರು ಈ ನಿರ್ದೇಶಕಿಯರಲ್ಲಿ ಸೇರಿದ್ದಾರೆ.

“ಮಹಿಳೆಯರು ಮತ್ತು ಚಿತ್ರ ನಿರ್ದೇಶಕಿಯರಾಗಿ ‘ಮೀ ಟೂ’ ಇಂಡಿಯಾ ಚಳವಳಿಯನ್ನು ಬೆಂಬಲಿಸಲು ನಾವು ಒಗ್ಗಟ್ಟಾಗಿದ್ದೇವೆ. ತಾವು ಅನುಭವಿಸಿರುವ ಕಿರುಕುಳ ಮತ್ತು ಲೈಂಗಿಕ ಹಲ್ಲೆಗಳ ಬಗ್ಗೆ ಧೈರ್ಯದಿಂದ ಹೇಳಿಕೊಳ್ಳುತ್ತಿರುವ ಮಹಿಳೆಯರೊಂದಿಗೆ ನಾವಿದ್ದೇವೆ. ಅವರ ಧೈರ್ಯವು ಸ್ವಾಗತಾರ್ಹ ಬದಲಾವಣೆಯ ಕ್ರಾಂತಿಗೆ ನಾಂದಿ ಹಾಡಿರುವುದರಿಂದ ನಾವು ಅವರನ್ನು ಗೌರವಿಸುತ್ತೇವೆ ಮತ್ತು ಪ್ರಶಂಸಿಸುತ್ತೇವೆ” ಎಂದು ಹೇಳಿಕೆಯೊಂದರಲ್ಲಿ ಈ ನಿರ್ದೇಶಕಿಯರು ತಿಳಿಸಿದ್ದಾರೆ.

ಕೆಲಸದ ಸ್ಥಳಗಳಲ್ಲಿ ಪ್ರತಿಯೊಬ್ಬರಿಗೂ ಸುರಕ್ಷಿತವಾದ ಮತ್ತು ಸಮಾನವಾದ ವಾತಾವರಣ ಸೃಷ್ಟಿಗೆ ನೆರವಾಗಲು ನಾವು ಉದ್ದೇಶಿಸಿದ್ದೇವೆ. ಆರೋಪ ಸಾಬೀತಾದವರೊಂದಿಗೆ ಕೆಲಸ ನಿರ್ವಹಿಸದಿರಲು ನಾವು ನಿರ್ಧರಿಸಿದ್ದೇವೆ. ಚಿತ್ರರಂಗದಲ್ಲಿಯ ನಮ್ಮ ಎಲ್ಲ ಸ್ನೇಹಿತರೂ ಇದೇ ನಿಲುವನ್ನು ತಳೆಯುವಂತೆ ನಾವು ಆಗ್ರಹಿಸುತ್ತಿದ್ದೇವೆ ಎಂದೂ ಅವರು ಹೇಳಿದ್ದಾರೆ.

ಅ.5ರಿಂದ ಆರಂಭಗೊಂಡಿರುವ ಮೀ ಟೂ ಆಭಿಯಾನದಲ್ಲಿ ಬಾಲಿವುಡ್ ನಟರಾದ ನಾನಾ ಪಾಟೇಕರ ಮತ್ತು ಅಲೋಕನಾಥ್,ನಿರ್ದೇಶಕರಾದ ಸಾಜಿದ್ ಖಾನ್ ಮತ್ತು ವಿಕಾಸ್ ಬಹ್ಲ್,ನಟ-ನಿರ್ದೇಶಕ ರಜತ್ ಕಪೂರ್ ಮುಂತಾದವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X