Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ಬಿಹಾರಿ ಕಾರ್ಮಿಕನ ಸಾವು ಕೊಲೆ...

ಗುಜರಾತ್: ಬಿಹಾರಿ ಕಾರ್ಮಿಕನ ಸಾವು ಕೊಲೆ ಎಂದ ಕುಟುಂಬಸ್ಥರು

ಅಪಘಾತವೆನ್ನುತ್ತಿರುವ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ14 Oct 2018 8:28 PM IST
share
ಗುಜರಾತ್: ಬಿಹಾರಿ ಕಾರ್ಮಿಕನ ಸಾವು ಕೊಲೆ ಎಂದ ಕುಟುಂಬಸ್ಥರು

ಸೂರತ್,ಅ.14: ಕಾರ್ಮಿಕ ಗುತ್ತಿಗೆದಾರನಾಗಿ ದುಡಿಯುತ್ತಿದ್ದ ಬಿಹಾರ ಮೂಲದ ಅಮರಜೀತ್ ಸಿಂಗ್(32) ಎಂಬಾತ ಶುಕ್ರವಾರ ಮಧ್ಯರಾತ್ರಿಯ ಸುಮಾರಿಗೆ ಇಲ್ಲಿಯ ಅಲ್ಥಾನ್ ಎಂಬಲ್ಲಿ ನಿಗೂಢ ಸಾವನ್ನಪ್ಪಿದ್ದು,ಇದೊಂದು ಕೊಲೆ ಎಂದು ಆತನ ಕುಟುಂಬವು ಆರೋಪಿಸಿದ್ದರೆ, ಆತನ ಬೈಕ್ ಮರಕ್ಕೆ ಢಿಕ್ಕಿ ಹೊಡೆದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

 ಸೆ.28ರಂದು ಸಬರಕಾಂತಾ ಜಿಲ್ಲೆಯಲ್ಲಿ 14 ತಿಂಗಳು ಪ್ರಾಯದ ಹೆಣ್ಣುಮಗುವಿನ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಬಿಹಾರಿ ಯುವಕನನ್ನು ಪೊಲೀಸರು ಬಂಧಿಸಿದ ಬಳಿಕ ಗುಜರಾತ್‌ನ ಆರು ಜಿಲ್ಲೆಗಳಲ್ಲಿ ವಲಸಿಗ ಕಾರ್ಮಿಕರ ವಿರುದ್ಧ ಹಿಂಸಾಚಾರ ಭುಗಿಲೆದ್ದಿದ್ದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಹಿಂಸಾಚಾರದಿಂದಾಗಿ 60,000ಕ್ಕೂ ಅಧಿಕ ಹಿಂದಿ ಭಾಷಿಕರು ಗುಜರಾತ್ ತೊರೆದಿದ್ದಾರೆ.

ಬಿಹಾರದ ಗಯಾ ಜಿಲ್ಲೆಯ ಸಿಂಗ್ ಕಳೆದ 15 ವರ್ಷಗಳಿಂದಲೂ ಸೂರತ್‌ನಲ್ಲಿ ವಾಸವಾಗಿದ್ದ. ನಗರದ ಮಿಲ್ಲೊಂದರಲ್ಲಿ ಆತ ಕೆಲಸ ಮಾಡುತ್ತಿದ್ದ. ಶುಕ್ರವಾರ ಮಧ್ಯರಾತ್ರಿಯ ವೇಳೆಗೆ ಭಗವಾನ್ ಮಹಾವೀರ ಕಾಲೇಜಿನ ಬಳಿ ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಸಿಂಗ್‌ನನ್ನು ದಾರಿಹೋಕರು ಆಸ್ಪತ್ರೆಗೆ ಸಾಗಿಸಿದ್ದರಾದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ. ಸಿಂಗ್ ತಲೆಯ ಹಿಂಭಾಗಕ್ಕೆ ಗಾಯವಾಗಿತ್ತು ಮತ್ತು ಆತನ ಬೈಕ್ ಹಾನಿಗೀಡಾದ ಸ್ಥಿತಿಯಲ್ಲಿ ಸ್ಥಳದಲ್ಲಿ ಬಿದ್ದಿತ್ತು ಎಂದು ಆತನ ಕುಟುಂಬಿಕರು ಹೇಳಿದ್ದಾರೆ.

ನನ್ನ ಸೋದರನಿಗೆ ರಾತ್ರಿ 10 ಗಂಟೆಯ ಸುಮಾರಿಗೆ ದೂರವಾಣಿ ಕರೆ ಬಂದಿದ್ದು,ಆತ ಯಾರನ್ನೋ ಭೇಟಿಯಾಗಲು ತೆರಳಿದ್ದ. ಕೆಲಹೊತ್ತಿನ ನಂತರ ಆತ ಸತ್ತಿದ್ದಾನೆಂಬ ಮಾಹಿತಿ ನಮಗೆ ಲಭಿಸಿತ್ತು. ದುಷ್ಕರ್ಮಿಗಳ ಗುಂಪು ಆತನ ಕೊಲೆ ಮಾಡಿದೆ ಎಂದು ಸಿಂಗ್ ಸೋದರ ರಾಕೇಶ ಸುದ್ದಿಗಾರರಿಗೆ ತಿಳಿಸಿದ.

ಈ ಆರೋಪವನ್ನು ತಳ್ಳಿಹಾಕಿರುವ ಪೊಲೀಸ್ ಆಯುಕ್ತ ಸತೀಶ ಶರ್ಮಾ ಅವರು,ಬೈಕ್‌ನ ಅತಿಯಾದ ವೇಗದಿಂದ ಅಪಘಾತ ಸಂಭವಿಸಿರುವುದು ಸ್ಥಳ ಪರಿಶೀಲನೆಯಿಂದ ಸ್ಪಷ್ಟವಾಗಿದೆ. ಆತನ ಮೊಬೈಲ್ ಫೋನ್ ಕಾಣೆಯಾಗಿದ್ದು, ಅದಕ್ಕಾಗಿ ನಾವು ಹುಡುಕಾಡುತ್ತಿದ್ದೇವೆ. ಘಟನೆಯ ಬಗ್ಗೆ ಪರಿಶೀಲಿಸಲು ಸಿಸಿಟಿವಿ ಫೂಟೇಜ್‌ಗಳನ್ನು ಸಂಗ್ರಹಿಸುತ್ತಿದ್ದೇವೆ,ಜೊತೆಗೆ ಸಿಂಗ್‌ನ ಕರೆ ದಾಖಲೆಯನ್ನೂ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X