Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಲ್ಜಾತಿಯ ವೈದ್ಯರು ಚಿಕಿತ್ಸೆ...

ಮೇಲ್ಜಾತಿಯ ವೈದ್ಯರು ಚಿಕಿತ್ಸೆ ನೀಡಬೇಕೆಂದು ರೋಗಿಯ ಸಂಬಂಧಿಕರಿಂದ ಹಲ್ಲೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ14 Oct 2018 9:23 PM IST
share
ಮೇಲ್ಜಾತಿಯ ವೈದ್ಯರು ಚಿಕಿತ್ಸೆ ನೀಡಬೇಕೆಂದು ರೋಗಿಯ ಸಂಬಂಧಿಕರಿಂದ ಹಲ್ಲೆ: ಆರೋಪ

ಭೋಪಾಲ, ಅ.14: ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಮೇಲ್ಜಾತಿಯ ವೈದ್ಯರು ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದ ರೋಗಿಯ ಸಂಬಂಧಿಕರು, ಚಿಕಿತ್ಸೆಗೆ ಮುಂದಾದ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ವೈದ್ಯರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಶುಕ್ರವಾರ ಈ ಘಟನೆ ನಡೆದಿದೆ. ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರನ್ನು ಸರಕಾರಿ ಅಧೀನದ ಸುಭಾಷ್‌ಚಂದ್ರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆ ವೇಳೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಡಾ ಗೀತೇಶ್ ರಾತ್ರೆ ಎಂಬವರು ಚಿಕಿತ್ಸೆಗೆ ಮುಂದಾದಾಗ ಗಾಯಾಳು ಮಹಿಳೆಯರ ಸಂಬಂಧಿಕರೆನ್ನಲಾದ ಸುಮಾರು 12 ಮಂದಿಯಿದ್ದ ಗುಂಪು ಸ್ಥಳಕ್ಕೆ ಆಗಮಿಸಿ ರಾತ್ರೆಯ ಹೆಸರು ಮತ್ತು ಜಾತಿಯನ್ನು ಪ್ರಶ್ನಿಸಿದೆ. ತಮ್ಮ ಹೆಸರು ಮತ್ತು ಜಾತಿಯನ್ನು ರಾತ್ರೆ ತಿಳಿಸಿದಾಗ , ಮೇಲ್ಜಾತಿಯ ವೈದ್ಯರು ಮಾತ್ರ ಗಾಯಾಳು ಮಹಿಳೆಯರಿಗೆ ಚಿಕಿತ್ಸೆ ನೀಡಬೇಕೆಂದು ಗುಂಪಿನಲ್ಲಿದ್ದವರು ಪಟ್ಟು ಹಿಡಿದರು. ಆಗ ಕೆಲ ಹೊತ್ತು ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ತನ್ನ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಡಾ ರಾತ್ರೆ ದೂರು ನೀಡಿರುವುದಾಗಿ ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಎಸ್.ಖಾನ್ ತಿಳಿಸಿದ್ದಾರೆ.

ಹಲ್ಲೆಗೈದ ಬಳಿಕ ಗುಂಪಿನವರು ಬಲವಂತವಾಗಿ ಗಾಯಾಳುಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲು ಪ್ರಯತ್ನಿಸಿದ್ದಾರೆ ಎಂದು ದೂರಲಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಡಾ ರಾತ್ರೆಯವರ ದೂರಿನಂತೆ ಜಾತಿ ನಿಂದನೆ ಹಾಗೂ ಸರಕಾರಿ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X