Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು ಕೊಡವ ಸಮಾಜದಲ್ಲಿ ಸಾಧಕರಿಗೆ...

ಬೆಂಗಳೂರು ಕೊಡವ ಸಮಾಜದಲ್ಲಿ ಸಾಧಕರಿಗೆ ಸನ್ಮಾನ

ಫೀಲ್ಡ್ ಮಾರ್ಷಲ್ ಪ್ರತಿಮೆಗೆ ಮಾಲಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ14 Oct 2018 11:53 PM IST
share
ಬೆಂಗಳೂರು ಕೊಡವ ಸಮಾಜದಲ್ಲಿ ಸಾಧಕರಿಗೆ ಸನ್ಮಾನ

ಮಡಿಕೇರಿ,ಅ.14: ಬೆಂಗಳೂರು ಕೊಡವ ಸಮಾಜದಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅರ್ಥಪೂರ್ಣವಾಗಿ ಶನಿವಾರ ನಡೆಯಿತು.

ಕೊಡವ ಸಮಾಜದ ಬಳಿಯಿರುವ ಕಂಟೋನ್ಮೆಂಟ್ ವೃತ್ತದಲಿ ಬಿಬಿಎಂಪಿ ವತಿಯಿಂದ ಅನಾವರಣ ಮಾಡಲಾಗಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ವೃತ್ತಕ್ಕೆ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಕರ್ನಲ್ ಕಂಡ್ರತಂಡ ಸಿ.ಸುಬ್ಬಯ್ಯ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮಂಡೇಡ ರವಿ ಉತ್ತಪ್ಪ ಸೇರಿದಂತೆ ಹಲವು ಗಣ್ಯರು ಮಾಲಾರ್ಪಣ ಮಾಡಿ ನಮನ ಸಲ್ಲಿಸಿದರು.

ಕಂಟೋನ್ಮೆಂಟ್ ವೃತ್ತದಲ್ಲಿರುವ ಫೀ.ಮಾ. ಕಾರ್ಯಪ್ಪ ಪ್ರತಿಮೆಯನ್ನು  ಬಿಬಿಎಂಪಿಯಿಂದ ಅನಾವರಣಗೊಳಿಸಲಾಗಿದೆ. ಇದಕ್ಕೆ ಕೊಡವ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಬಳಿಕ ಕೊಡವ ಸಮಾಜದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

ಆರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಸಾಹಿತ್ಯ ಕ್ಷೇತ್ರದಲ್ಲಿ ಐತಿಚಂಡ ರಮೇಶ್ ಉತ್ತಪ್ಪ, ಕ್ರೀಡಾ ಕ್ಷೇತ್ರದಲ್ಲಿ ಮಚ್ಚಂಡ ರೋಹನ್ ಬೋಪಣ್ಣ, ಕೆಚ್ಚೆಟ್ಟಿರ ರೇಷ್ಮಾ ದೇವಯ್ಯ, ಕೊಲ್ಲಿರ ಸ್ಪೂರ್ತಿ. ಪಾಂಡಂಡ ದೇಚಮ್ಮ ಗಣಪತಿ ಅವರನ್ನು ಸನ್ಮಾನಿಸಲಾಯಿತು. ವಿದ್ಯಾನಿಧಿ ಚಿನ್ನದ ಪದಕವನ್ನು ಡಾ. ನುಚ್ಚಿಮಣಿಯಂಡ ಕಾರ್ತಿಕ್ ಅಯ್ಯಣ್ಣ,  ದೇವಣಿರ ಸಂತೋಷ್ ಅಪ್ಪಚ್ಚು, ಅಮ್ಮಣಿಚಂಡ ನೇಹಾ ವಿವೇಕ್, ಮದ್ರೀರ ದೇಚಮ್ಮ ಚಂಗಪ್ಪ ಅವರಿಗಳಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಮಾತನಾಡಿ, ಕೊಡವ ಸಮಾಜ ಜನಾಂಗದ ಸಾಧಕರಿಗೆ ಉತ್ತಮ ಪ್ರೋತ್ಸಾಹ, ನೆರವು ನೀಡುತ್ತಾ ಬರುತ್ತಿರುವುದು ಶ್ಲಾಘನೀಯ. ಬಿಬಿಎಂಪಿ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಯನ್ನು ಅನಾವರಣ ಮಾಡಿರುವುದು ಹೆಮ್ಮೆ ಎನ್ನಿಸುತ್ತಿದೆ. ಈ ವೃತ್ತಕ್ಕೆ ಫೀಲ್ಡ್ ಮಾರ್ಷಲ್ ಅವರ ಹೆಸರಿಡಲು ಹಾಗೂ ಅದರ ನಿರ್ವಹಣೆಯನ್ನು ಕೊಡವ ಸಮಾಜಕ್ಕೆ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು. 

ಮೇಯರ್ ಗಂಗಾಬಿಕೆ, ಹಾಗೂ ಮಾಜಿ ಮೇಯರ್ ಆರ್. ಸಂಪತ್ ರಾಜ್ ಅವರುಗಳಿಗೆ ಕೊಡವ ಸಮಾಜದಿಂದ ಸನ್ಮಾನ ಮಾಡಲಾಯಿತು. ಪ್ರತಿಮೆ ಅನಾವರಣಕ್ಕೆ ದುಡಿದ ಹಲವರಿಗೆ ಇದೇ ಸಂದರ್ಭ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಕೊಡವ ಸಮಾಜದ ಗೌರವ ಕಾರ್ಯದರ್ಶಿ ಚೆನ್ನಪಂಡ ಕೆ.ಸುಬ್ಬಯ್ಯ, ಸಹಕಾರ್ಯದರ್ಶಿ ಮಾಚೆಟ್ಟಿರ ಎಂ.ಡಾಲು, ಖಜಾಂಚಿ ಬೂವಡಿರ ಗಣಪತಿ, ಸಹ ಖಜಾಂಚಿ ಚೇರಂಡ ಎಂ.ಸುರೇಶ್, ಉಪಾಧ್ಯಕ್ಷಿಣಿ ಮಲ್ಲೇಂಗಡ ಮೀರಾ ಜಲಜಕುಮಾರ್, ಕೊಡವ ಸಮಾಜ ವಿದ್ಯಾನಿಧಿಯ ಅಧ್ಯಕ್ಷ ಚಂದೂರ ಪ್ರಿನ್ಸ್ ಕರುಂಬಯ್ಯ, ಸಂಚಾಲಕ ಬಾಳೆಕುಟ್ಟಿರ ನಂಜಪ್ಪ, ಖಜಾಂಚಿ ಚೊಟ್ಟೆಯಂಡಮಾಡ ಆರತಿ ಅಯ್ಯಮ್ಮ ಮುಂತಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ರಾಮಮೂರ್ತಿ ನಗರದ ನೆಲ್ಲಕ್ಕಿ ಕೊಡವ ಸಂಘ ಹಾಗೂ ಕೆ.ಆರ್.ಪುರ ಕಾವೇರಿ ಕೊಡವ ಸಂಘದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಲ್ಲೇಂಗಡ ಮುತ್ತಣ್ಣ ಹಾಗೂ ಪಳಂಗಂಡ ರೀಟಾ ನಾಚಪ್ಪ ಅವರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X