Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೀಘ್ರದಲ್ಲೆ ಇಸ್ರೇಲ್ ಮಾದರಿ ಕೃಷಿ...

ಶೀಘ್ರದಲ್ಲೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಜಾರಿ: ಸಚಿವ ಶಿವಶಂಕರರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ15 Oct 2018 8:05 PM IST
share
ಶೀಘ್ರದಲ್ಲೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಜಾರಿ: ಸಚಿವ ಶಿವಶಂಕರರೆಡ್ಡಿ

ಬೆಂಗಳೂರು, ಅ. 15: ಮಿತ ನೀರಿನ ಬಳಕೆ ಮತ್ತು ಆಧುನಿಕ ತಾಂತ್ರಿಕತೆಯ ಇಸ್ರೇಲ್ ಮಾದರಿಯ ಕೃಷಿ ಪದ್ಧತಿಯನ್ನು ಮುಂದಿನ ತಿಂಗಳಿಂದ ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿನ ತನ್ನ ಕಚೇರಿಯಲ್ಲಿ ಕೃಷಿ ಬೆಳೆಗಳಿಗೆ ತಗುಲುವ ಕೀಟಬಾಧೆ ಬಗ್ಗೆ ಮಾಹಿತಿ ನೀಡುವ ಅತ್ಯಾಧುನಿಕವಾದ ಪ್ಲಾಂಟಿಕ್ಸ್ ಮೊಬೈಲ್ ಅಪ್ಲಿಕೇಷನ್ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಇಸ್ರೇಲ್ ಮಾದರಿ ಕೃಷಿ ಪದ್ಧತಿಯ ಬಗ್ಗೆ ಈಗಾಗಲೇ ವರದಿ ಸಿದ್ಧಪಡಿಸಿದ್ದು ಶೀಘ್ರದಲ್ಲೆ ಮುಖ್ಯಮಂತ್ರಿಗೆ ಸಲ್ಲಿಕೆ ಮಾಡಲಾಗುವುದು ಎಂದರು.

ಇಸ್ರೇಲ್ ಮಾದರಿ ಕೃಷಿ ಅತ್ಯಂತ ಪರಿಣಾಮಕಾರಿ, ಲಾಭದಾಯಕ ಎಂಬುದು ಗೊತ್ತಾಗಿದೆ. ರಾಜ್ಯ ಸರಕಾರ ನಾಲ್ಕು ಮಾದರಿಗಳನ್ನು ಆಯ್ಕೆ ಮಾಡಿಕೊಂಡು ಅದನ್ನು ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿಗೆ ತರಲು ಉದ್ದೇಶಿಸಿದೆ ಎಂದ ಅವರು ಇದೇ ವೇಳೆ ಹೇಳಿದರು.

250ರಿಂದ 300 ಮಂದಿ ರೈತರ ಗುಂಪು ರಚಿಸಿ ಅವರ ಜಮೀನಿನಲ್ಲಿ ಒಂದೇ ರೀತಿ ಬೆಳೆ ಬೆಳೆಯವ ಪ್ರಸ್ತಾವನೆ ಇದೆ. ಇದರಿಂದ ಕೀಟಬಾಧೆ ಮತ್ತು ಪೋಷಕಾಂಶದ ನಿರ್ವಹಣೆ, ಮಾರುಕಟ್ಟೆ, ಕೂಲಿ ಕಾರ್ಮಿಕರ ಸಮಸ್ಯೆ ಎಲ್ಲವೂ ಬಗೆಹರಿಯಲಿವೆ. ಯಾವ ಭಾಗದಲ್ಲಿ ಯಾವ ರೀತಿಯ ಬೆಳೆಗಳನ್ನು ಗುರುತಿಸಲಾಗಿದೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗುವುದರಿಂದ ಬೆಲೆಯಲ್ಲಿ ಏರುಪೇರು ತಡೆಗಟ್ಟಲು ಸಾಧ್ಯ ಎಂದು ವಿವರಿಸಿದರು.

ಕೃಷಿ ವಿಶ್ವ ವಿದ್ಯಾಲಯಗಳು ಮತ್ತು ಸರಕಾರದ ಅಧೀನದಲ್ಲಿರುವ ಕೃಷಿ ಫಾರಂಗಳಲ್ಲಿ ಇಸ್ರೇಲ್ ಮಾದರಿಯ ವೈಜ್ಞಾನಿಕ ಕೃಷಿ ಪದ್ಧತಿ ಮತ್ತು ಸಲಕರಣೆಗಳನ್ನು ಅಳವಡಿಸಲಾಗುವುದು. ಜತೆಗೆ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶನ ಮಾಡಿ ರೈತರಿಗೆ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಕೆರೆ ಅಚ್ಚುಕಟ್ಟು ಪ್ರದೇಶಗಳಲ್ಲಿ ರೈತರು ಬೆಳೆ ಬೆಳೆಯುತ್ತಿದ್ದಾರೆ. ಅಲ್ಲಿ ನೀರಿನ ಮಿತವ್ಯಯದ ಬಗ್ಗೆ ವೈಜ್ಞಾನಿಕ ಮಾಹಿತಿ ನೀಡಲಾಗುವುದು. ಬಯಲು ಪ್ರದೇಶದಲ್ಲಿ ವೈಜ್ಞಾನಿಕ ಹನಿ ನೀರಾವರಿ ಪದ್ಧತಿಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೀಟಬಾಧೆಯ ಸಮಗ್ರ ಮಾಹಿತಿ ನೀಡುವ ಪ್ಲಾಂಟಿಕ್ಸ್ ಮೊಬೈಲ್ ಅಪ್ಲಿಕೇಷನ್ ನಂತಹ ವೈಜ್ಞಾನಿಕ ಪದ್ಧತಿಯನ್ನು ಬಳಸಿಕೊಂಡು ರೈತರಿಗೆ ಕಾಲ-ಕಾಲಕ್ಕೆ ಮಾಹಿತಿ ನೀಡಿ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭದಾಯಕವಾಗುವ ಬೆಳೆಗಳನ್ನು ಬೆಳೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

‘ಕೃಷಿ ಬೆಳೆಗಳಿಗೆ ತಗುಲುವ ಕೀಟಬಾಧೆ ಬಗ್ಗೆ ಸಮಗ್ರ ಮಾಹಿತಿ ನೀಡುವ ಅತ್ಯಾಧುನಿಕ ಪ್ಲಾಂಟಿಕ್ಸ್ ಮೊಬೈಲ್ ಅಪ್ಲಿಕೇಷನನ್ನು ಜರ್ಮನ್ ಕಂಪೆನಿ, ಇಂಟರ್ ನ್ಯಾಷನಲ್ ಕ್ರಾಪ್ಸ್ ರೀಸರ್ಚ್ ಇನ್ಸ್‌ಟಿಟ್ಯೂಟ್ ಫಾರ್ ದಿ ಸೆಮಿ ಅರೈಡ್ ಟ್ರಾಫಿಕ್ಸ್ ಸಂಸ್ಥೆಗಳ ಆಶ್ರಯದಲ್ಲಿ ನಿರ್ಮಿಸಿದ್ದು, ಈ ಅಪ್ಲಿಕೇಷನ್‌ನಿಂದ ರೈತರಿಗೆ ಹೆಚ್ಚಿನ ಅನುಕೂಲ ಆಗುತ್ತದೆ. ರೈತರು ರೋಗಬಾಧಿತ ಯಾವುದೇ ಬೆಳೆಯ ಫೋಟೋವನ್ನು ಅಪ್ಲಿಕೇಷನ್‌ಗೆ ಅಪ್‌ಲೋಡ್ ಮಾಡಿದರೆ ಅದು ತನ್ನ ಕೃತಕ ಬುದ್ಧಿವಂತಿಕೆಯಿಂದ ರೋಗವನ್ನು ಗುರುತಿಸಿ ನಿರ್ವಹಣಾ ಕ್ರಮವನ್ನು ತಿಳಿಸಲಿದೆ’

-ಎನ್.ಎಚ್.ಶಿವಶಂಕರ ರೆಡ್ಡಿ ಕೃಷಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X