Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸತತ ಹತ್ತನೇ ದಿನ ಡೀಸೆಲ್ ಬೆಲೆಯೇರಿಕೆ

ಸತತ ಹತ್ತನೇ ದಿನ ಡೀಸೆಲ್ ಬೆಲೆಯೇರಿಕೆ

ಜನರಿಗೆ ಪ್ರಯೋಜನವಾಗದ ಸರಕಾರದ ದರ ಕಡಿತ

ವಾರ್ತಾಭಾರತಿವಾರ್ತಾಭಾರತಿ15 Oct 2018 8:23 PM IST
share
ಸತತ ಹತ್ತನೇ ದಿನ ಡೀಸೆಲ್ ಬೆಲೆಯೇರಿಕೆ

ಹೊಸದಿಲ್ಲಿ, ಅ.15: ಡೀಸೆಲ್ ಬೆಲೆ ಸತತ ಹತ್ತನೇ ದಿನ ಏರಿಕೆಯಾಗುವ ಮೂಲಕ 10 ದಿನಗಳ ಹಿಂದೆ ಸರಕಾರ ಘೋಷಿಸಿದ್ದ ತೆರಿಗೆ ದರ ಕಡಿತದ ಪ್ರಯೋಜನವನ್ನು ಅಳಿಸಿಹಾಕಿದೆ. ಆದರೆ ಸೋಮವಾರ ಪೆಟ್ರೋಲ್ ಬೆಲೆ ಏರಿಕೆಯಾಗಿಲ್ಲ.

ಅಕ್ಟೋಬರ್ 5ರಂದು ಸರಕಾರ ಅಬಕಾರಿ ಸುಂಕವನ್ನು 1.5 ರೂ.ನಷ್ಟು ಕಡಿತಗೊಳಿಸಿದ್ದು ಜೊತೆಗೆ 1 ರೂ. ಸಬ್ಸಿಡಿ ನೀಡುವಂತೆ ತೈಲ ಸಂಸ್ಥೆಗಳಿಗೆ ಸೂಚಿಸಿತ್ತು. ಇದರಿಂದ ತೈಲ ಬೆಲೆಯಲ್ಲಿ ಅ.5ರಂದು 2.50 ರೂ. ಕಡಿತವಾಗಿತ್ತು. ಆದರೆ ಆ ಬಳಿಕ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಎನ್‌ಡಿಎ ಸರಕಾರದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಕೇವಲ 2 ಬಾರಿ ಮಾತ್ರ ಅಬಕಾರಿ ಸುಂಕದಲ್ಲಿ ಕಡಿತ ಮಾಡಲಾಗಿದೆ.

ಸೋಮವಾರ ಡೀಸೆಲ್ ಬೆಲೆ ಲೀಟರ್‌ಗೆ 8 ಪೈಸೆಯಷ್ಟು ಹೆಚ್ಚಳವಾಗಿದೆ. ಕಳೆದ 10 ದಿನಗಳಿಂದ ಡೀಸೆಲ್ ಬೆಲೆ ಒಟ್ಟು 2.51 ರೂ.ನಷ್ಟು ಏರಿಕೆಯಾಗಿದೆ. ಕಳೆದ ವರ್ಷದ ಜೂನ್‌ನಲ್ಲಿ ತೈಲ ಕಂಪೆನಿಗಳು ತೈಲ ಉತ್ಪನ್ನಗಳ ಬೆಲೆಯನ್ನು ದೈನಂದಿನವಾಗಿ ಪರಿಷ್ಕರಿಸಲು ನಿರ್ಧರಿಸಿದ ಬಳಿಕ ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿದೆ. ದಿಲ್ಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 75.46 ರೂ. , ಪೆಟ್ರೋಲ್ ಬೆಲೆ ಲೀಟರ್‌ಗೆ 84 ರೂ. ಆಗಿದೆ.

ಮುಂಬೈಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 79.11 ರೂ, ಪೆಟ್ರೋಲ್ ಬೆಲೆ 88.18 ರೂ. ಆಗಿದೆ. 2014ರ ನವೆಂಬರ್‌ನಿಂದ 2016ರ ಜನವರಿವರೆಗಿನ ಅವಧಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಒಂಬತ್ತು ಕಂತುಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 11.77 ರೂ. ಹಾಗೂ 13.47 ರೂ.ನಷ್ಟು ಹೆಚ್ಚಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಿಂದ ಆರ್ಥಿಕ ಸ್ಥಿತಿಗತಿಗೆ ಸಮಸ್ಯೆಯಾಗಬಾರದೆಂಬ ಉದ್ದೇಶದಿಂದ ಅಬಕಾರಿ ಸುಂಕ ಏರಿಸಲಾಗಿದೆ ಎಂದು ಸರಕಾರ ಹೇಳಿಕೆ ನೀಡಿತ್ತು. ಆದರೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಏರಿಕೆಯಾದ ಬಳಿಕ ಕೇವಲ 2 ಬಾರಿ- ಕಳೆದ ವರ್ಷದ ಅಕ್ಟೋಬರ್‌ನಲ್ಲಿ 2 ರೂ, ಈ ವರ್ಷದ ಅಕ್ಟೋಬರ್‌ನಲ್ಲಿ 1.50 ರೂ. ಅಬಕಾರಿ ಸುಂಕ ಕಡಿತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X