Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವಜನತೆಗೆ ಸದಾ ಓದುವ ಹವ್ಯಾಸವಿರಲಿ:...

ಯುವಜನತೆಗೆ ಸದಾ ಓದುವ ಹವ್ಯಾಸವಿರಲಿ: ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ15 Oct 2018 9:58 PM IST
share
ಯುವಜನತೆಗೆ ಸದಾ ಓದುವ ಹವ್ಯಾಸವಿರಲಿ: ಚಂದ್ರಶೇಖರ ಕಂಬಾರ

ಬೆಂಗಳೂರು, ಅ.15: ಇಂದಿನ ಯುವಜನತೆ ಸಾಮಾಜಿಕ ಜಾಲತಾಣ, ಮೊಬೈಲ್ ಹಾಗೂ ಪುಸ್ತಕ ರೂಪದಲ್ಲಿ ಯಾವುದರಲ್ಲಾದರು ಸದಾ ಓದುವಂತಹ ಹವ್ಯಾಸ ರೂಢಿಸಿಕೊಳ್ಳಲಿ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಆಶಿಸಿದ್ದಾರೆ.

ಸೋಮವಾರ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಬೆಂಗಳೂರು ಪುಸ್ತಕ ಮಾರಾಟಗಾರರು ಹಾಗೂ ಪ್ರಕಾಶಕರ ಅಸೋಸಿಯೇಷನ್ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ಪುಸ್ತಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಯುವಕರು ಮೊಬೈಲ್‌ಗೆ ದಾಸರಾಗಿದ್ದಾರೆ ಎಂಬ ಆರೋಪಗಳಿವೆ. ಆದರೆ, ಮೊಬೈಲ್‌ನ್ನು ಬಳಸುವುದಕ್ಕಾಗಿ ವಿರೋಧಿಸುವುದು ಬೇಡ. ಮೊಬೈಲ್‌ನಲ್ಲೂ ತಮಗೆ ಇಷ್ಟವಾದ ಲೇಖಕ, ಲೇಖಕಿಯರ ಬರಹಗಳನ್ನು ಓದುವಂತಾಗಲಿ ಎಂದು ತಿಳಿಸಿದರು.

ಇವತ್ತಿನ ವಿಷಮಯ ವಾತಾವರಣದಲ್ಲಿ ಎಲ್ಲರ ಮನಸ್ಥಿತಿಗಳು ಹಾಳಾಗುತ್ತಿವೆ. ಇದಕ್ಕೆ ಪುಸ್ತಕಗಳು ಔಷಧಿಗಳಾಗಬಹುದು. ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಅರಿವನ್ನು ಪಡೆದು ಜವಾಬ್ದಾರಿಯುತ ನಾಗರಿಕರಾಗಿ ಬದುಕುವಂತಾಗಬೇಕು. ಈ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿರುವ ಪುಸ್ತಕೋತ್ಸವದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಅವರು ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ವಸುಂಧರಾ ಭೂಪತಿ ಮಾತನಾಡಿ, ಅ.15ರಿಂದ 21ರವರೆಗೆ ನಗರದ ಆರಮನೆ ಮೈದಾನದಲ್ಲಿ ಆಯೋಜಿಸಿರುವ ಪುಸ್ತಕೋತ್ಸವದಲ್ಲಿ ಆರೋಗ್ಯ, ವಿಜ್ಞಾನ, ಪರಿಸರ ಸೇರಿದಂತೆ ಸಾಹಿತ್ಯ ಹಾಗೂ ಸಾಹಿತ್ಯೇತರ ಪುಸ್ತಕಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ನಗರದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕೋತ್ಸವದಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

10 ಲಕ್ಷ ಪುಸ್ತಕಗಳು: ನಗರದ ಸತ್ರಿಪುರವಾಸಿನಿ ಮೈದಾನದಲ್ಲಿ ಸುಮಾರು 250ಕ್ಕೂ ಹೆಚ್ಚು ಮಳಿಗೆಗಳಲ್ಲಿ ಕನ್ನಡ, ತಮಿಳು, ಇಂಗ್ಲಿಷ್, ಹಿಂದಿ, ಸಂಸ್ಕೃತ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳ ಪುಸ್ತಕಗಳು ಓದುಗರನ್ನು ಕೈಬೀಸಿ ಕರೆಯುತ್ತಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಮಾರಾಟಕ್ಕೆ ಇಡಲಾಗಿದೆ. ಹೊಸ ಲೇಖಕರ ಪುಸ್ತಕಗಳು ಇಂದಿನ ಯುವಜನಾಂಗದ ಓದುಗರನ್ನು ಆಕರ್ಷಿಸುತ್ತಿವೆ. ಸಾಹಿತ್ಯ, ಕಾದಂಬರಿ, ನಾಟಕ, ಅಡುಗೆ ರುಚಿ, ಮನೆ ಔಷಧಿ, ಆಧ್ಯಾತ್ಮಿಕ ಪುಸ್ತಕಗಳು, ಯೋಗ, ಪ್ರಾಣಾಯಾಮ, ಧ್ಯಾನ ಕುರಿತ ಲಕ್ಷಾಂತರ ಪುಸ್ತಕಗಳು ಒಂದೇ ಸೂರಿನಡಿ ಲಭ್ಯವಿದೆ.

ಪುಸ್ತಕ ಪ್ರೇಮಿಗಳಿಗೆ ಮನರಂಜನೆ ನೀಡಲೆಂದು ಪ್ರತಿದಿನ ಸಂಜೆ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅ.16 ಹಾಗೂ 17ರಂದು ಕನ್ನಡ ಸಾಹಿತ್ಯೋತ್ಸವ ನಡೆಯಲಿದೆ. ನಿತ್ಯವೂ ಹೊಸ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ, ಕೈಬರಹ ಕಾರ್ಯಾಗಾರ, ರಸಪ್ರಶ್ನೆ ಸ್ಪರ್ಧೆ ಹಾಗೂ ಪದಬಂಧ ಸ್ಪರ್ಧೆಗಳು ನಡೆಯಲಿವೆ.

-ವಸುಂಧರಾ ಭೂಪತಿ ಅಧ್ಯಕ್ಷೆ, ಕನ್ನಡ ಪುಸ್ತಕ ಪ್ರಾಧಿಕಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X