Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕಾರಕ್ಕೆ ಬಂದ ಮೇಲೆ ಮೋದಿಗೆ...

ಅಧಿಕಾರಕ್ಕೆ ಬಂದ ಮೇಲೆ ಮೋದಿಗೆ ಗಂಗಾಮಾತೆಯ ನೆನಪೇ ಆಗಿಲ್ಲ: ಅಗರ್‌ವಾಲ್ ಸಮುದಾಯದ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ15 Oct 2018 11:11 PM IST
share
ಅಧಿಕಾರಕ್ಕೆ ಬಂದ ಮೇಲೆ ಮೋದಿಗೆ ಗಂಗಾಮಾತೆಯ ನೆನಪೇ ಆಗಿಲ್ಲ: ಅಗರ್‌ವಾಲ್ ಸಮುದಾಯದ ಆಕ್ರೋಶ

ಮುಂಬೈ, ಅ.15: ಗಂಗಾ ನದಿ ನೀರು ಸ್ವಚ್ಛಗೊಳಿಸುವ ತನ್ನ ಭರವಸೆಯನ್ನು ಕಳೆದ ನಾಲ್ಕು ವರ್ಷಕ್ಕೂ ಹೆಚ್ಚಿನ ಅವಧಿಯಲ್ಲಿ ಈಡೇರಿಸದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇದೀಗ ಸ್ವಚ್ಛ ಗಂಗಾ ಯೋಜನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಇರಾದೆಯಲ್ಲಿದೆ ಎಂದು ಅಗರವಾಲ್ ಸಮುದಾಯ ಟೀಕಿಸಿದೆ.

ಈ ಕುರಿತು ಅಖಿಲ ಭಾರತೀಯ ಅಗರವಾಲ್ ಸಮ್ಮೇಳನ(ಎಬಿಎಎಸ್)ದ ರಾಷ್ಟ್ರೀಯ ಕಾರ್ಯದರ್ಶಿ ಸುಮನ್ ಆರ್. ಅಗರ್‌ವಾಲ್ ಪ್ರಧಾನಿ ಮೋದಿಗೆ ಬರೆದಿರುವ ಪತ್ರದಲ್ಲಿ, ಗಂಗಾ ನದಿ ನೀರನ್ನು ಸ್ವಚ್ಛಗೊಳಿಸುವಂತೆ ಆಗ್ರಹಿಸಿ 111 ದಿನಗಳಿಂದ ಉಪವಾಸ ನಡೆಸಿದ್ದ ಪರಿಸರವಾದಿ ಜಿ.ಡಿ.ಅಗರ್‌ವಾಲ್ ಅಕ್ಟೋಬರ್ 9ರಂದು ನಿಧನರಾಗಿರುವುದನ್ನು ಉಲ್ಲೇಖಿಸಿದ್ದಾರೆ. ತಮ್ಮ ಉಪವಾಸದ ಅವಧಿಯಲ್ಲಿ ಅಗರ್‌ವಾಲ್ ಪ್ರಧಾನಿಗೆ ಮೂರು ಪತ್ರಗಳನ್ನು ಬರೆದಿದ್ದರು. ಈ ಪತ್ರ ಉತ್ತರಿಸಲು ಯೋಗ್ಯವಲ್ಲ ಎಂದು ಸರಕಾರ ಭಾವಿಸಿ ಸುಮ್ಮನಾಗಿತ್ತು. ಆದರೆ ಅಗರ್‌ವಾಲ್ ನಿಧನರಾದ ಬಳಿಕ ಪ್ರಧಾನಿ, ಸರಕಾರ ಹಾಗೂ ಇತರ ಸಚಿವರು ಅಗರ್‌ವಾಲ್ ಪರಿಸರಕ್ಕೆ ನೀಡಿದ ಮಹಾನ್ ಕೊಡುಗೆ ಸದಾ ಸ್ಮರಣೀಯ ಎಂದು ಟ್ವೀಟ್ ಮಾಡಿದ್ದರು . ಇದು ಮೋದಿ ಸರಕಾರದ ದ್ವಿಮುಖ ಧೋರಣೆ ಹಾಗೂ ಬೂಟಾಟಿಕೆಯನ್ನು ತೋರಿಸುತ್ತದೆ ಎಂದು ಸುಮನ್ ಆರ್. ಅಗರ್‌ವಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2014ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಬಳಿಕ ಗಂಗಾಮಾತೆಯ ಸ್ವಘೋಷಿತ ಪುತ್ರ(ನರೇಂದ್ರ ಮೋದಿ)ನಿಗೆ ಗಂಗಾಮಾತೆಯ ನೆನಪಾಗಲಿಲ್ಲ. ಆದರೆ 2017ರ ಉತ್ತರಪ್ರದೇಶ ಚುನಾವಣೆಯ ಸಂದರ್ಭ ಗಂಗಾಮಾತೆ ನೆನಪಾದಳು ಎಂದು ಸುಮನ್ ಅಗರ್‌ವಾಲ್ ಟೀಕಿಸಿದ್ದಾರೆ.

‘ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್’ ಎನ್ನುವ ನಿಮ್ಮ ಚುನಾವಣಾ ಘೋಷಣೆ ಕೇವಲ ಭರವಸೆ ಮಾತ್ರವೇ. ಅಗರ್‌ವಾಲ್ ಸಮುದಾಯವನ್ನು ಯಾಕೆ ನಿರಂತರವಾಗಿ ನಿರ್ಲಕ್ಷಿಸಲಾಗುತ್ತಿದೆ. ಗಂಗಾ ಸ್ವಚ್ಛತೆಗೆ ಆಗ್ರಹಿಸಿ ಉಪವಾಸ ನಿರತರಾಗಿದ್ದ ಸಂದರ್ಭ ಮೃತಪಟ್ಟ ಜಿ.ಡಿ.ಅಗರ್‌ವಾಲ್‌ರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವದೊಂದಿಗೆ ನಡೆಸಲಾಗುವುದೆಂದು ನಿರೀಕ್ಷಿಸಿದ್ದೆವು. ಆದರೆ ನಿರೀಕ್ಷೆ ಹುಸಿಯಾಗಿದೆ ಎಂದಿರುವ ಸುಮನ್ ಅಗರ್‌ವಾಲ್, ಇದೀಗ ಅವರ ಸಾವಿನಿಂದ 10 ಕೋಟಿ ಜನಸಂಖ್ಯೆಯುಳ್ಳ ಅಗರ್‌ವಾಲ್ ಸಮುದಾಯದಲ್ಲಿ ಅನಾಥಪ್ರಜ್ಞೆ ಕಾಡುತ್ತಿದೆ. ಈ ಸಮುದಾಯದ ಜನರ ಭಾವನೆ ಮತ್ತು ಆಕ್ರೋಶ 2019ರ ಚುನಾವಣೆಯಲ್ಲಿ ವ್ಯಕ್ತವಾಗಲಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X