ಗೋವಾ ಕಾಂಗ್ರೆಸ್ನ ಇಬ್ಬರು ಶಾಸಕರು ದಿಲ್ಲಿಗೆ ದೌಡು: ಬಿಜೆಪಿಗೆ ಸೇರ್ಪಡೆ ಸಾಧ್ಯತೆ
ಪಣಜಿ, ಅ.16: ಗೋವಾ ಕಾಂಗ್ರೆಸ್ನ ಇಬ್ಬರು ಶಾಸಕರಾದ ದಯಾನಂದ ಸೊಪ್ಟೆ ಹಾಗೂ ಸುಭಾಶ್ ಶಿರೋಡ್ಕರ್ ಸೋಮವಾರ ಮಧ್ಯರಾತ್ರಿ ಗೋವಾ ಆರೋಗ್ಯ ಸಚಿವ ಹಾಗೂ ಬಿಜೆಪಿ ಶಾಸಕ ವಿಶ್ವಜಿತ್ ರಾಣೆ ಅವರೊಂದಿಗೆ ದಿಲ್ಲಿಗೆ ದೌಡಾಯಿಸಿದ್ದಾರೆ. ಈ ಇಬ್ಬರು ಕೈ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆಂಬ ವದಂತಿ ಹರಿದಾಡುತ್ತಿದೆ.
ಹೊಸದಿಲ್ಲಿಯಲ್ಲಿ ಇಬ್ಬರು ಶಾಸಕರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
‘‘ಕಾಂಗ್ರೆಸ್ನ ಇಬ್ಬರು ಶಾಸಕರು ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಿಜೆಪಿಗೆ ಸೇರಲಿದ್ದಾರೆ’’ ಎಂದು ಹಿರಿಯ ಬಿಜೆಪಿ ನಾಯಕರು ಪಿಟಿಐಗೆ ತಿಳಿಸಿದ್ದಾರೆ.
ದಯಾನಂದ ಸೊಪ್ಟೆ 2017ರ ವಿಧಾನಸಭಾ ಚುನಾವಣೆಯಲ್ಲಿ ಮಾಂಡ್ರೆಮ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಬಿಜೆಪಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೆಕರ್ರನ್ನು ಸೋಲಿಸಿ ಗಮನ ಸೆಳೆದಿದ್ದರು. ಶಿರೋಡ್ಕರ್ ಶಿರೋಡಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆದು ವಿಜಯಿಯಾಗಿದ್ದರು.