ಮಂಗಳೂರು ತಾಲೂಕು ಸಖಾಫೀಸ್ ಜಲ್ಸಾ ಕಾರ್ಯಕ್ರಮ
ಮಂಗಳೂರು, ಅ.16: ಕರ್ನಾಟಕ ಸಖಾಫಿ ಕೌನ್ಸಿಲ್ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ಸಖಾಫೀಸ್ ಜಲ್ಸಾ ಕಾರ್ಯಕ್ರಮ ಪಡೀಲಿನ ಇಲ್ಮ್ ಸೆಂಟರಿನಲ್ಲಿ ಇತ್ತೀಚೆಗೆ ನಡೆಯಿತು.
ಕರ್ನಾಟಕ ಸಖಾಫಿ ಕೌನ್ಸಿಲ್ ಅಧ್ಯಕ್ಷ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಸಖಾಫಿ ಕೌನ್ಸಿಲ್ ನ ಅಧ್ಯಕ್ಷ ಅಬೂ ಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಎಸ್.ವೈ.ಎಸ್. ಅಧ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ತರಗತಿ ನಡೆಸಿದರು. ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯಃ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭ ರವಿವಾರ ನಿಧನರಾದ ಸಮಸ್ತ ಉಪಾಧ್ಯಕ್ಷ, ಸಅದಿಯಾ ಪ್ರಾಂಶುಪಾಲ ಶೈಖುನಾ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ( ಎ.ಕೆ.ಉಸ್ತಾದ್ ) ಅವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಯ ಸಖಾಫಿಗಳು ಉಪಸ್ಥಿತರಿದ್ದರು.
ತಾಲೂಕು ಸಖಾಫಿ ಕೌನ್ಸಿಲ್ ಇದರ ಪ್ರಧಾನ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ಸ್ವಾಗತಿಸಿದರು. ಅಬ್ದುಸ್ಸತ್ತಾರ್ ಸಖಾಫಿ ಅಡ್ಯಾರ್ ಪದವು ಕಾರ್ಯಕ್ರಮ ನಿರೂಪಿಸಿದರು.