Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳಪುವಿನಲ್ಲಿ ಕೆಸಿಸಿ ಆರೋಗ್ಯ...

ಬೆಳಪುವಿನಲ್ಲಿ ಕೆಸಿಸಿ ಆರೋಗ್ಯ ಕಾರ್ಡ್‍ಗೆ ತಡೆ

ಖಾಸಗಿ ಸಂಸ್ಥೆಯಿಂದ ಆರೋಗ್ಯ ಕಾರ್ಡ್ ನೋಂದಣಿ

ವಾರ್ತಾಭಾರತಿವಾರ್ತಾಭಾರತಿ16 Oct 2018 8:28 PM IST
share
ಬೆಳಪುವಿನಲ್ಲಿ ಕೆಸಿಸಿ ಆರೋಗ್ಯ ಕಾರ್ಡ್‍ಗೆ ತಡೆ

ಪಡುಬಿದ್ರಿ, ಅ. 16: ಆರೋಗ್ಯ ಕಾರ್ಡ್ ಹೆಸರಿನಲ್ಲಿ ಬೆಳಪುವಿನಲ್ಲಿ ಜನರಿಂದ ಹಣ ಸಂಗ್ರಹಿಸುತಿದ್ದ ಖಾಸಗಿ ಸಂಸ್ಥೆಯ ಅಸಲಿಯತ್ತು ಬೆಳಕಿಗೆ ಬರುತಿದ್ದಂತೆ ನೋಂದಣೆ ಮಾಡುವುದನ್ನು ತಡೆಹಿಡಿದ ಘಟನೆ ಮಂಗಳವಾರ ನಡೆದಿದೆ.

ಮಂಗಳೂರಿನ ದೇರಳಕಟ್ಟೆಯ ವಿಳಾಸ ಹೊಂದಿರುವ ಕೆಸಿಸಿ ಆರೋಗ್ಯ ಕಾರ್ಡ್‍ನಿಂದ ಮಂಗಳೂರು, ಉಡುಪಿ ಕಾರ್ಕಳ, ತೀರ್ಥಹಳ್ಳಿ ಮತ್ತು ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆಗಳು ಅಲ್ಲದೆ ಕೇರಳ ರಾಜ್ಯದ ಆಸ್ಪತ್ರೆಯಲ್ಲೀ ಉಚಿತ, ರಿಯಾಯಿತಿ ದರದಲ್ಲಿ ಚಿಕಿತ್ಸೆ, ಹೊರರೋಗಿ, ಒಳರೋಗಿ ದಾಖಲಾತಿಗೂ ಅನ್ವಯ ವಾಗುತ್ತದೆ ಎಂದು ಕರಪತ್ರದಲ್ಲಿ ತಿಳಿಸಲಾಗಿತ್ತು. ಅದರಂತೆ ಬೆಳಪು ಗ್ರಾಮ ಪಂಚಾಯತ್ ನಲ್ಲಿ ಮಂಗಳವಾರ ಮತ್ತು ಬುಧವಾರ ಕೆಸಿಸಿ ಆರೋಗ್ಯ ಕಾರ್ಡ್ ಶಿಬಿರ ಬೆಳಪು ಪಂಚಾಯತ್ ಹಾಗೂ ಅಂಗನವಾಡಿ ಕೇಂದ್ರ ಪಣಿಯೂರಿನಲ್ಲಿ ಆಯೋಜಿಸಲಾಗಿತ್ತು. 

ಈ ಕಾರ್ಡ್ ಬಗ್ಗೆ ಅನುಮಾನಗೊಂಡ ಬೆಳಪು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ನೋಂದಣಿ ಮಾಡುತ್ತಿದ್ದ ಸಿಬ್ಬಂದಿಯಲ್ಲಿ ವಿಚಾರಿಸಿದಾಗ ಅಸಮರ್ಪಕ ಉತ್ತರಿಸಿದರು. ಬಳಿಕ ಕರಪತ್ರದಲ್ಲಿರುವ ಆಸ್ಪತ್ರೆಗಳನ್ನು ಸಂಪರ್ಕಿಸಿ ಕೆಸಿಸಿ ಆರೋಗ್ಯ ಕಾರ್ಡ್ ಬಗ್ಗೆ ಒಡಂಬಡಿಕೆ ಇಲ್ಲದಿರುವುದನ್ನು ಖಚಿತ ಪಡಿಸಿದರು. ತಕ್ಷಣ ಪಂಚಾಯಿತಿಯಲ್ಲಿ ನೋಂದಣಿ ಮಾಡುತ್ತಿದ್ದ ಸಿಬ್ಬಂದಿಯಿಂದ ಹಣ ಹಾಗೂ ದಾಖಲಾತಿಗಳನ್ನು ಹಿಂದಕ್ಕೆ ಪಡೆದು ಫಲಾನುಭವಿಗಳಿಗೆ ಹಿಂತಿರುಗಿಸಿದರು.

ಕರಪತ್ರದಲ್ಲಿ ಸೂಚಿಸಿರುವ ತೀರ್ಥಹಳ್ಳಿ ಅನುರಾಧ ಆಸ್ಪತ್ರೆ ಹಾಗೂ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗಳಲ್ಲಿ ವಿಚಾರಿಸಿದಾಗ ಕೆಸಿಸಿ ಆರೋಗ್ಯ ಕಾರ್ಡ್‍ನ ಬಗ್ಗೆ ಯಾವುದೇ ಒಡಂಬಡಿಕೆ ಆಗದಿರುವ ಬಗ್ಗೆ ಅಲ್ಲಿನ ಸಿಬ್ಬಂದಿ  ಸ್ಪಷ್ಟಪಡಿಸಿದ್ದಾರೆ. ಕಾರ್ಡ್ ನೋಂದಣಿ ಮೂಲಕ ಜನರನ್ನು ವಂಚಿಸುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸುವುದಾಗಿ ದೇವಿಪ್ರಸಾದ್ ಮಾಹಿತಿ ನೀಡಿದರು.

ಪೂರ್ವಾಪರ ಮಾಹಿತಿ ಪಡೆಯದೆ ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ಹಲವು ಪಂಚಾಯಿತಿಗಳಲ್ಲಿ ಈಗಾಗಲೇ ಕೆಸಿಸಿ ಆರೋಗ್ಯ ಕಾರ್ಡ್ ನೊಂದಣಿಯಿಂದ ಮೋಸಕ್ಕೊಳಗಾಗಿವೆ. ಇಂತಹ ಬೋಗಸ್ ಕಾರ್ಡ್‍ಗಳ ಬಗ್ಗೆ ಆರೋಗ್ಯ ಇಲಾಖೆ ತಕ್ಷಣ ತನಿಖೆ ನಡೆಸಬೇಕು ಶೆಟ್ಟಿ ಆಗ್ರಹಿಸಿದ್ದಾರೆ. 

ಪಡುಬಿದ್ರಿ ಪಂಚಾಯಿತಿ ಸಹಭಾಗಿತ್ವದಲ್ಲಿ ತಿಂಗಳ ಹಿಂದೆ ಆರೋಗ್ಯ ಕಾರ್ಡ್ ನೋಂದಣಿಯಾಗಿತ್ತು. ಇಲ್ಲಿ ಸಾವಿರಾರು ರೂಪಾಯಿ ಹಣ ಸಂಗ್ರಹಿಸಲಾಗಿತ್ತು. ಕಾರ್ಡ್ ನೋಂದಣಿ ಮಾಡಿದ ಜನರು ಅವರು ಸೂಚಿಸಿದ ಆಸ್ಪತ್ರೆಗಳಿಗೆ ಸಂಪರ್ಕಿಸಿದಾಗ ಕಾರ್ಡ್‍ನ ಒಡಂಬಡಿಕೆ ಆಗದಿರುವುದನ್ನು ತಿಳಿಸಿದ್ದರು. ಅದರಂತೆ ಜನ ಗ್ರಾಮ ಸಭೆಯಲ್ಲಿ ಪ್ರಶ್ನಿಸಿದ್ದರು.

ರಾಜ್ಯ ಸರ್ಕಾರದ ಆರೋಗ್ಯ ಕಾರ್ಡ್, ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್, ಮಣಿಪಾಲ ಹೆಲ್ತ್ ಕಾರ್ಡ್ ಹೊರತು ಇತರ ಯಾವ ಕಾರ್ಡ್‍ಗಳ ಬಗ್ಗೆ ಆರೋಗ್ಯ ಇಲಾಖೆ ಗಮನಕ್ಕೆ ಬಂದಿಲ್ಲ. ಇಂತಹ ನಕಲಿ ಕಾರ್ಡ್‍ಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ಉಡುಪಿ ಆರೋಗ್ಯಾಧಿಕಾರಿ ಡಾ. ರೋಹಿಣಿ, ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X