Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ಸದೃಢ, ನಿರ್ಣಾಯಕ ಸರಕಾರದ...

ಭಾರತಕ್ಕೆ ಸದೃಢ, ನಿರ್ಣಾಯಕ ಸರಕಾರದ ಅಗತ್ಯವಿದೆ: ಅರುಣ್ ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ16 Oct 2018 8:47 PM IST
share
ಭಾರತಕ್ಕೆ ಸದೃಢ, ನಿರ್ಣಾಯಕ ಸರಕಾರದ ಅಗತ್ಯವಿದೆ: ಅರುಣ್ ಜೇಟ್ಲಿ

ಹೊಸದಿಲ್ಲಿ,ಅ.16: ಭಾರತವು ತನ್ನ ಏರುಗತಿಯ ಬೆಳವಣಿಗೆಯನ್ನು ಮುಂದುವರಿಸಲು ಮತ್ತು ತ್ವರಿತ ನಿರ್ಧಾರಗಳನ್ನು ಕೈಗೊಳ್ಳಲು ಕೇಂದ್ರದಲ್ಲಿ ಸದೃಢ ಮತ್ತು ನಿರ್ಣಾಯಕ ನಾಯಕತ್ವವನ್ನು ಹೊಂದಿರುವುದು ಅಗತ್ಯವಾಗಿದೆ ಎಂದು ವಿತ್ತಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಇಲ್ಲಿ ಹೇಳಿದರು.

ಭಾರತವು ಎದುರಿಸುತ್ತಿರುವ ಸವಾಲುಗಳನ್ನು ಬಿಚ್ಚಿಟ್ಟ ಅವರು,ಭಾರತವು ಆಮದು ತೈಲವನ್ನು ಹೆಚ್ಚಾಗಿ ಅವಲಂಬಿಸಿರುವುದರಿಂದ ಜಾಗತಿಕ ಕಚ್ಚಾತೈಲ ಬೆಲೆಗಳಲ್ಲಿ ಏರಿಕೆಯು ದೇಶದ ಮೆಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ,ಹೀಗಾಗಿ ಇದನ್ನು ಎದುರಿಸಲು ಆರ್ಥಿಕತೆಯು ಪುಟಿದೇಳುವ ಸಾಮರ್ಥ್ಯ ಹೊಂದಿರಬೇಕಾಗುತ್ತದೆ ಎಂದರು.

ದುರ್ಬಲ ನಾಯಕತ್ವವಿದ್ದರೆ ಈಗಿನ ಸರಕಾರವು ಮಾಡಿದಂತೆ ಐಎಲ್ ಆ್ಯಂಡ್ ಎಫ್‌ಎಸ್‌ನ ಬಿಕ್ಕಟ್ಟನ್ನು ಕೆಲವೇ ದಿನಗಳಲ್ಲಿ ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಸೋಚಾಮ್‌ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮಾತನಾಡುತ್ತಿದ್ದ ಜೇಟ್ಲಿ ಹೇಳಿದರು.

 ಸಾಲದ ಹೊರೆಯಿಂದ ತತ್ತರಿಸುತ್ತಿದ್ದ ಐಎಲ್ ಆ್ಯಂಡ್ ಎಫ್‌ಎಸ್ ಮತ್ತು ಅದರ ಸಮೂಹ ಸಂಸ್ಥೆಗಳು ಸಾಲ ಮರುಪಾವತಿಸಲು ವಿಫಲಗೊಂಡಿದ್ದ ಹಿನ್ನೆಲೆಯಲ್ಲಿ ಸರಕಾರವು ಅದರ ಆಡಳಿಯ ಮಂಡಳಿಯನ್ನು ರದ್ದುಗೊಳಿಸಿ ಖ್ಯಾತ ಬ್ಯಾಂಕರ್ ಉದಯ ಕೋಟಕ್ ಅವರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸಿದೆ.

 ದೇಶವು ಎದುರಿಸುತ್ತಿರುವ ರಾಜಕೀಯ ಸವಾಲುಗಳ ಕುರಿತು ಮಾತನಾಡಿದ ಅವರು, ಅಸ್ಥಿರ ಮೈತ್ರಿಕೂಟಗಳು ಮತ್ತು ಉನ್ನತ ಸ್ಥಾನವನ್ನು ಪಡೆಯಲು ಹಾತೊರೆಯುತ್ತಿರುವ ಮಹತ್ವಾಕಾಂಕ್ಷಿ ರಾಜಕಾರಣಿಗಳು ಇದಕ್ಕೆ ಕಾರಣರಾಗಿದ್ದಾರೆ ಎಂದರು.

ಭಾರತವು ಹೆಚ್ಚಿನ ಬೆಳವಣಿಗೆಯ ಪಥವನ್ನು ಮುಂದುವರಿಸಿದರೆ ದೇಶವು ಬಡತನದಿಂದ ಪಾರಾಗಿ ಶ್ರೀಮಂತ ರಾಷ್ಟ್ರವಾಗಲು ಸಾಧ್ಯವಾಗುತ್ತದೆ. ಇದಕ್ಕಾಗಿ ನಿರ್ಧಾರಕ ಸರಕಾರವು ಅಗತ್ಯವಾಗಿದೆ ಎಂದರು.

ಕೆಲವು ರಾಷ್ಟ್ರಗಳ ಆಂತರಿಕ ನೀತಿಗಳು ಭಾರತದ ಮೇಲೆ ಪರಿಣಾಮಗಳನ್ನುಂಟು ಮಾಡಿವೆ ಎಂದ ಜೇಟ್ಲಿ,ಇಂತಹ ಪರಿಣಾಮಗಳು ಶಾಶ್ವತವಲ್ಲ. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಈ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ನಾವು ಹೊಂದಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X