Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅರೆ ಹೊಟ್ಟೆಯಲ್ಲಿ ಬೆಂಗಳೂರು ವಿವಿಯ ವಸತಿ...

ಅರೆ ಹೊಟ್ಟೆಯಲ್ಲಿ ಬೆಂಗಳೂರು ವಿವಿಯ ವಸತಿ ನಿಲಯದ ವಿದ್ಯಾರ್ಥಿಗಳು : ಬ್ರೆಡ್, ಬಿಸ್ಕೆಟ್ ಊಟವೇ ಗತಿ!

ಊಟಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೂ ಮನವಿ ಪತ್ರ

ವಾರ್ತಾಭಾರತಿವಾರ್ತಾಭಾರತಿ16 Oct 2018 10:45 PM IST
share

ಬೆಂಗಳೂರು, ಅ. 16: ಬೆಂಗಳೂರು ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಸಿಗಬೇಕಾದ ಕನಿಷ್ಠ ಮಟ್ಟದ ಊಟದ ಸೌಲಭ್ಯವೂ ಸಿಗದೆ, ಕೆಲವು ನಿಲಯದ ವಿದ್ಯಾರ್ಥಿಗಳು ಸ್ಥಳೀಯ ಸ್ನೇಹಿತರು ತಂದ ಊಟದ ಬಾಕ್ಸ್‌ನಲ್ಲಿ ಹೊಟ್ಟೆ ತುಂಬಿಸಿ ಕೊಂಡರೆ, ಇನ್ನು ಕೆಲವರು ಬ್ರೆಡ್, ಬಿಸ್ಕೆಟ್ ತಿಂದು ಅರೆ ಹೊಟ್ಟೆಯಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ.

ಬೆಂ ವಿವಿಯ ವಸತಿ ನಿಲಯದಲ್ಲಿರುವ ಬಹುಪಾಲು ವಿದ್ಯಾರ್ಥಿಗಳು ಬಡ ಕುಟುಂಬದವರು. ಜೀವನದಲ್ಲಿ ಏನಾದರೂ ಸಾಧಿಸಬೇಕು ಎಂದು ಕನಸು ಹೊತ್ತು ರಾಜ್ಯದ ನಾನಾ ಭಾಗಗಳಿಂದ ಬಂದು ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.
ಹಸಿವಾಗುತ್ತಿದೆ ಊಟ ಕೊಡಿ ಎಂದು ಹಾಸ್ಟೆಲ್ ವಾರ್ಡನ್ ಬಳಿ ವಿದ್ಯಾರ್ಥಿಗಳು ಕೇಳಿಕೊಂಡಾಗ, ಕನಿಷ್ಠ ಮಾನವೀಯತೆ ತೋರದೆ ಹಣ ಕಟ್ಟಿ ಊಟ ಮಾಡಿ ಎಂದು ನಿರ್ದಾಕ್ಷಿಣ್ಯವಾಗಿ ಹೇಳುತ್ತಾರೆ. ಹೀಗಾಗಿ ಮೂರು ತಿಂಗಳಿನಿಂದ ವಸತಿ ನಿಲಯದಲ್ಲಿ ಊಟ ಸಿಗದೆ ಹೊಟ್ಟೆ ಕಟ್ಟಿಕೊಳ್ಳುವ ಪರಿಸ್ಥಿತಿ ಒದಗಿಬಂದಿದೆ ಎಂಬುದು ವಿದ್ಯಾರ್ಥಿಗಳ ನೋವು.

ವಿದ್ಯಾರ್ಥಿ ವೇತನವನ್ನು ವಸತಿ ನಿಲಯಕ್ಕೆ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಊಟ ನೀಡದೆ ಸತಾಯಿಸಲಾಗುತ್ತಿದೆ. ಎಸ್ಸಿ-ಎಸ್ಟಿ ಹಾಗೂ ಪ್ರ.1ಕ್ಕೆ ಸೇರಿದಂತೆ ಒಟ್ಟು 110 ವಿದ್ಯಾರ್ಥಿಗಳಲ್ಲಿ ಸುಮಾರು 15 ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿ ಊಟ ಸಿಗುತ್ತಿಲ್ಲ. ಈ ಹಿಂದೆ ವಸತಿ ನಿಲಯದಿಂದ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯಗಳು ಸಿಗುತ್ತಿದ್ದವು. ವಿದ್ಯಾರ್ಥಿಗಳಿಗೆ ಸರಕಾರ ನೀಡುವ ವಿದ್ಯಾರ್ಥಿ ವೇತನವನ್ನು ವಸತಿ ನಿಲಯಕ್ಕೆ ನೀಡಿಲ್ಲ ಎಂಬ ಕಾರಣಕ್ಕೆ ಮೂರು ತಿಂಗಳಿಂದ ವಿದ್ಯಾರ್ಥಿಗಳಿಗೆ ಊಟ ಕೊಡುವುದನ್ನೇ ನಿಲ್ಲಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸಚಿವರಿಗೆ ಮನವಿ ಪತ್ರ
ಕುಲಪತಿ ಹಾಗೂ ಕುಲ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೂ ಮನವಿ ಪತ್ರ ಸಲ್ಲಿಸಿದ್ದೇವೆ.
-ನಿಲಯದ ನೊಂದ ವಿದ್ಯಾರ್ಥಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X