Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುವೈತ್‌ನಲ್ಲಿ ಸಂಕಷ್ಟಕ್ಕೀಡಾಗಿದ್ದ...

ಕುವೈತ್‌ನಲ್ಲಿ ಸಂಕಷ್ಟಕ್ಕೀಡಾಗಿದ್ದ ಕನ್ನಡಿಗನಿಗೆ ಐಎಸ್‌ಎಫ್ ನೆರವು

ವಾರ್ತಾಭಾರತಿವಾರ್ತಾಭಾರತಿ16 Oct 2018 11:02 PM IST
share
ಕುವೈತ್‌ನಲ್ಲಿ ಸಂಕಷ್ಟಕ್ಕೀಡಾಗಿದ್ದ ಕನ್ನಡಿಗನಿಗೆ ಐಎಸ್‌ಎಫ್ ನೆರವು

ಮಂಗಳೂರು, ಅ.16: ವೀಸಾ ನವೀಕರಿಸಲಾಗದೆ, ಕುವೈತ್‌ನಲ್ಲಿ ಕಳೆದ ಒಂದು ವರ್ಷದಿಂದ ತನ್ನ ಪ್ರಾಯೋಜಕನಿಂದ ನಿರಂತರ ಶೋಷಣೆಗೊಳಗಾಗಿದ್ದ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಹಮೀದ್ ಇಸ್ಲಾಂ ಎಂಬವರು ಇಂಡಿಯನ್ ಸೋಶಿಯಲ್ ಫೋರಮ್ ಕುವೈಟ್ (ಐಎಸ್‌ಎಫ್) ನೆರವಿನಿಂದ ಯಶಸ್ವಿಯಾಗಿ ತನ್ನ ಕುಟುಂಬವನ್ನು ಮರುಸೇರಿದ್ದಾರೆ.

2013ರಲ್ಲಿ ಉದ್ಯೋಗವನ್ನರಸಿ ಕುವೈತ್‌ಗೆ ಪ್ರಯಾಣಿಸಿದ್ದ ಹಮೀದ್, ಆರಂಭದಲ್ಲಿ ರೆಸ್ಟೋರೆಂಟ್ ಒಂದರಲ್ಲಿ ಅಡುಗೆ ಕೆಲಸಕ್ಕಾಗಿ ಸೇರಿಕೊಂಡಿದ್ದರು. ಮೊದಲ 4ವರ್ಷಗಳಲ್ಲಿ ಎಲ್ಲವೂ ಉತ್ತಮವಾಗಿಯೇ ಇದ್ದವು. ಆದಾಗ್ಯೂ ಅವರ ಪ್ರಾಯೋಜಕರು ತನ್ನ ರೆಸ್ಟೋರೆಂಟ್ ಮುಚ್ಚಿದಾಗ ಕೆಲಸ ಕಳೆದುಕೊಂಡ ಹಮೀದ್ ಉದ್ಯೋಗವನ್ನರಸಿಕೊಂಡು ಹೊಸ ಪ್ರಾಯೋಜಕನನ್ನು ಸೇರಿಕೊಳ್ಳುವಲ್ಲಿ ನಿರ್ಬಂಧಿತರಾದರು.

ಹೊಸ ಪ್ರಾಯೋಜಕ ವಿಸಾ ನವೀಕರಿಸಲು ನಿರಾಕರಿಸಿದ್ದು ಮಾತ್ರವಲ್ಲದೆ ವೇತನವನ್ನೂ ನೀಡದೆ ಸತಾಯಿಸುತ್ತಿದ್ದ. ಪರಿಣಾಮವಾಗಿ ಅವರು ಕುವೈತ್‌ನಲ್ಲಿ ಆಹಾರ, ವಸತಿ ಹಾಗೂ ಯಾವುದೇ ಸೂಕ್ತವಾದ ಸೌಕರ್ಯಗಳಿಲ್ಲದೆ, ಸುಮಾರು ಒಂದು ವರ್ಷಗಳ ಕಾಲ ಸಂಕಷ್ಟಕ್ಕೀಡಾಗಿದ್ದರು.

ಇದೇ ಅವಧಿಯಲ್ಲಿ ಅವರ ಮಗಳ ವಿವಾಹವೂ ನಡೆದಿತ್ತಲ್ಲದೆ, ದುರದೃಷ್ಟವಶಾತ್ ಹಮೀದ್ ಅವರ ತಾಯಿಯೂ ಮೃತಪಟ್ಟಿದ್ದರು. ಕುವೈತ್ ಸರಕಾರವು ಪ್ರಯಾಣ ನಿಷೇಧ ಹೇರಿದ್ದರಿಂದ ತಾಯ್ನಿಡಿಗೆ ಮರಳಲಾಗದೆ ತನ್ನ ತಾಯಿಯ ಅಂತ್ಯಕ್ರಿಯೆಯಲ್ಲೂ ಪಾಲ್ಗೊಳ್ಳುವುದರಿಂದ ಹಮೀದ್ ವಂಚಿತರಾಗಿದ್ದರು.
ಹಮೀದ್ ಕುಟುಂಬಸ್ಥರು ಸ್ಥಳೀಯ ಎಸ್‌ಡಿಪಿಐ ಮುಖಂಡರೊಂದಿಗೆ ಅಳಲು ತೋಡಿಕೊಂಡು ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದರು. ಕುಟುಂಬಸ್ಥರ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಎಸ್‌ಡಿಪಿಐ ನಾಯಕರು, ಕುವೈತ್‌ನಲ್ಲಿ ಸಾಮಾಜಿಕ ಸೇವಾ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಇಂಡಿಯನ್ ಸೋಷಿಯಲ್ ಫೋರಮ್ (ಐಎಸ್‌ಎಫ್)ನಾಯಕರನ್ನು ಸಂಪರ್ಕಿಸಿ ಸಹಾಯಕ್ಕಾಗಿ ಕೋರಿದ್ದರು.

ತಕ್ಷಣ ಕಾರ್ಯ ಪ್ರವೃತ್ತರಾದ ಐಎಸ್‌ಎಫ್ ಕುವೈಟ್ ತಂಡ, ಹಮೀದ್ ಅವರನ್ನು ಭೇಟಿಯಾಗಿ, ಮಾಹಿತಿ ಕಲೆ ಹಾಕಿ, ಪ್ರಾಯೋಜಕರನ್ನು ಸಂಪರ್ಕಿಸಿತು. ನಿರಂತರ ಒಂದು ತಿಂಗಳ ಪ್ರಯತ್ನದೊಂದಿಗೆ ಕೊನೆಗೂ ಹಮೀದ್ ವಾಪಸಾತಿಗೆ ಅಗತ್ಯವಾದ ಎಲ್ಲ ಏರ್ಪಾಡುಗಳನ್ನು ಮಾಡಿತು. ಹಮೀದ್ ಮೇಲಿದ್ದ ಎಲ್ಲ ಪ್ರಾಯೊಜಕ ಸಂಬಂಧಿ ಕೇಸುಗಳನ್ನೂ ತೆರವುಗೊಳಿಸುವಲ್ಲಿ ಯಶಸ್ವಿಯಾಯಿತು.

ಅ.14ರಂದು ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಹಮೀದ್‌ ಇಸ್ಲಾಂ ಬೆಳ್ತಂಗಡಿ ತಲುಪಿದರು. ಎಸ್‌ಡಿಪಿಐ ಮುಖಂಡರಾದ ಮುಸ್ತಫಾ ಪೆರ್ನೆ ನೇತೃತ್ವದ ತಂಡ ಹಮೀದ್ ಅವರ ಮನೆಗೆ ಭೇಟಿ ನೀಡಿ ಕ್ಷೇಮ ವಿಚಾರಿಸಿತು. ಎಸ್‌ಡಿಪಿಐ ಹಾಗೂ ಐಎಸ್‌ಎಫ್ ಕುವೈತ್ ಶ್ರಮವನ್ನು ಹಮೀದ್ ಮತ್ತು ಕುಟುಂಬಿಕರು ಮುಕ್ತ ಕಂಠದಿಂದ ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X