Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತಮ ಪತ್ರಕರ್ತನಾಗಲು ಉತ್ತಮ...

ಉತ್ತಮ ಪತ್ರಕರ್ತನಾಗಲು ಉತ್ತಮ ಓದುಗನಾಗಬೇಕು : ದಿನೇಶ್ ಅಮೀನ್ ಮಟ್ಟು

ಭಟ್ಕಳ: ವಿದ್ಯಾರ್ಥಿಗಳಿಗಾಗಿ ಪತ್ರಿಕೋದ್ಯಮ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ18 Oct 2018 1:31 PM IST
share
ಉತ್ತಮ ಪತ್ರಕರ್ತನಾಗಲು ಉತ್ತಮ ಓದುಗನಾಗಬೇಕು : ದಿನೇಶ್ ಅಮೀನ್ ಮಟ್ಟು

ಭಟ್ಕಳ, ಅ. 18: ಪತ್ರಕರ್ತರಾಗಲು ಬಯಸುವವರು ಮೊದಲು ಓದುವುದನ್ನು ಕಲಿಯಬೇಕು. ನೀವು ಎಷ್ಟು ಹೆಚ್ಚು ಪತ್ರಿಕೆಗಳನ್ನು, ನಿಯತಕಾಲಿಕಗಳನ್ನು, ಪುಸ್ತಕಗಳನ್ನು ಓದುತ್ತೀರಿ ಅಷ್ಟು ಒಳ್ಳೆಯ ಬರಹಗಾರರಾಗುತ್ತೀರಿ. ಓದದೆ ಪತ್ರಕರ್ತರಾಗಲು ಸಾಧ್ಯವಿಲ್ಲ ಎಂದು ಹಿರಿಯ ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ. 

ಅವರು ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯು ಮಂಗಳೂರಿನ ಮಾಧ್ಯಮ ಕೇಂದ್ರದ ಸಹಯೋಗದಲ್ಲಿ ನಡೆಸಿದ 'ವಿದ್ಯಾರ್ಥಿಗಳಿಗಾಗಿ ಪತ್ರಿಕೋದ್ಯಮ ಕಾರ್ಯಾಗಾರ'ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದರು.

ಮುಸ್ಲಿಮರು ಮುಖ್ಯವಾಹಿನಿಗೆ ಬರಬೇಕು ಎಂದು ಹೇಳುವುದನ್ನು ನಾನು ಪೂರ್ಣ ಒಪ್ಪುವುದಿಲ್ಲ. ಮುಸ್ಲಿಮೇತರರೂ ಮುಸ್ಲಿಮರ ಜೊತೆ ಮುಖ್ಯ ವಾಹಿನಿಗೆ ಬರಬೇಕಾಗಿದೆ. ಕನ್ನಡದ ಪ್ರಮುಖ ನೂರು ಲೇಖಕರನ್ನು, ಸಾಹಿತಿಗಳನ್ನು ತೆಗೆದುಕೊಂಡರೆ ಕನಿಷ್ಠ 10 - 15 ಮುಸ್ಲಿಮರು ಸಿಗುತ್ತಾರೆ. ಸುಮಾರು 25 ಮಂದಿ ದಲಿತರು , 25 - 30 ಹಿಂದುಳಿದ ಜಾತಿಯವರು ಇರುತ್ತಾರೆ. ಆದರೆ ಪತ್ರಕರ್ತರ ಪಟ್ಟಿ ಮಾಡಿದರೆ ನೂರರಲ್ಲಿ ಅಹಿಂದ ವರ್ಗಗಳ 10 - 15 ಮಂದಿಯೂ ಸಿಗುವುದಿಲ್ಲ. ಅಲ್ಲಿ ಕೇವಲ ಒಂದು ಸಮುದಾಯದವರೇ ತುಂಬಿ ಹೋಗಿದ್ದಾರೆ. ಸಾಹಿತಿ, ಕವಿ, ಲೇಖಕ ಆಗುವ ಸಾಮರ್ಥ್ಯ ಇರುವ ಅಹಿಂದ ವರ್ಗಗಳ ಪ್ರತಿಭಾವಂತರು ಏಕೆ ಪತ್ರಕರ್ತರಾಗುವುದು ಸಾಧ್ಯವಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ. ಆ ಕ್ಷೇತ್ರಕ್ಕೆ ಹಾಕಿರುವ ಬೀಗದ ಕೀಲಿ ಕೈಯನ್ನು ಅಹಿಂದ ವರ್ಗ ಪಡೆಯಬೇಕಾಗಿದೆ ಎಂದು ಅಮೀನ್ ಮಟ್ಟು ಹೇಳಿದರು.

ಇಂದು ಯುವ ಲೇಖಕರು ಹೆಚ್ಚು ಬರೆಯುತ್ತಿಲ್ಲ. ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸಬೇಕಾಗಿದೆ. ಲೇಖಕರು, ಪತ್ರಕರ್ತರು ಅವರ ಸಮುದಾಯದೊಳಗಿನ ವಿಷಯಗಳ ಬಗ್ಗೆ ವಸ್ತುನಿಷ್ಠವಾಗಿ ಬರೆದಾಗ, ಪ್ರಶ್ನಿಸಿದಾಗ ಅದನ್ನು ಆ ಸಮುದಾಯ ಸ್ವೀಕರಿಸಬೇಕು, ಪ್ರೋತ್ಸಾಹಿಸಬೇಕು ಎಂದು ಅವರು ಕರೆ ನೀಡಿದರು.

ಹೈದರಾಬಾದ್ ನ ಸಿಯಾಸತ್ ಉರ್ದು ದೈನಿಕದ ವ್ಯವಸ್ಥಾಪಕ ಸಂಪಾದಕ ಝಹೀರುದ್ದೀನ್ ಅಲಿ ಖಾನ್ , ಖಲೀಜ್ ಟೈಮ್ಸ್  ಹಾಗು ಗಲ್ಫ್ ನ್ಯೂಸ್ ಪತ್ರಿಕೆಗಳ ಮಾಜಿ ಬ್ಯುರೋ ಚೀಫ್ ಸಯ್ಯದ್ ಖಮರ್ ಹಸನ್, ಭಟ್ಕಳ ಜಾಮಿಯಾ ಮಸೀದಿಯ ಧರ್ಮಗುರುಗಳಾದ ಮೌಲಾನಾ ಅಬ್ದುಲ್ ಅಲೀಮ್ ಖತೀಬ್, ವಾರ್ತಾಭಾರತಿಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಮತ್ತಿತರರು ಮಾತನಾಡಿದರು. 

ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಕಾಝಿಯ ಅಧ್ಯಕ್ಷತೆ ವಹಿಸಿದ್ದರು. ತಂಝೀಮ್ ಪ್ರಧಾನ ಕಾರ್ಯದರ್ಶಿ ಮೊಹಿದ್ದೀನ್ ಅಲ್ತಾಫ್ ಖರೂರಿ ಹಾಗು ಮಾಧ್ಯಮ ವಿಭಾಗದ ಸಂಚಾಲಕ ಆಫ್ತಾಬ್ ಕೋಲಾ, ತಂಝೀಮ್ ಉಪಾಧ್ಯಕ್ಷ ಮೊಹ್ತಿಶಮ್ ಮುಹಮ್ಮದ್ ಜಾಫರ್,ಖಾಝಿ ಮೌಲಾನ ಅಬ್ದುಲ್ ಅಝೀಮ್ ಕಾಝಿಯ, ಅಂಜುಮಾನ್ ಹಮಿ ಇ ಮುಸ್ಲಿಮೀನ್ ಅಧ್ಯಕ್ಷ ಅಬ್ದುರಹೀಮ್ ಜುಕಾಕು, ಜಾಮಿಯಾ ಇಸ್ಲಾಮಿಯಾ ಪ್ರಿನ್ಸಿಪಾಲ್ ಮೌಲಾನ ಮಕ್ಬೂಲ್ ಕೊಬಟ್ಟೆ, ಟಿಎಂಸಿ ಮುಖ್ಯಸ್ಥ ಮಟ್ಟ ಮುಹಮ್ಮದ್ ಸಿದ್ದೀಖ್, ಮೀಡಿಯಾ ಸಮಿತಿಯ ಸಂಚಾಲಕ ಇನಾಯತುಲ್ಲಾ ಗವಾಯಿ, ಭಟ್ಕಳ ಯೂತ್ ಫೆಡರೇಶನ್ ಅಧ್ಯಕ್ಷ ಇಮ್ತಿಯಾಝ್ ಉದ್ಯಾವರ ಮತ್ತು ಇತರರು ಈ ಸಂದರ್ಭ ಉಪಸ್ಥಿತರಿದ್ದರು.

ಹಫೀಝ್ ಅಬೂಬಕರ್ ಉಕಸಾಹ ಕಿರಾಅತ್, ಹಸನ್ ಸಿದ್ದಿಬಾಪ ನಾತ್ ಪಠಿಸಿದರು. ಮೊಹಿದ್ದೀನ್ ಅಲ್ತಾಫ್ ಖರೂರಿ ಸ್ವಾಗತಿಸಿ, ತಂಝೀಮ್ ಉಪಾಧ್ಯಕ್ಷ  ಇನಾಯತುಲ್ಲಾ ಶಾಬಂದ್ರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X