Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಮೀ ಟೂ'ಗೆ ಇನ್ನೊಂದು ಸೇರ್ಪಡೆ: ಅರ್ಜುನ್...

'ಮೀ ಟೂ'ಗೆ ಇನ್ನೊಂದು ಸೇರ್ಪಡೆ: ಅರ್ಜುನ್ ಸರ್ಜಾ ಮೇಲೆ ಆರೋಪ ಹೊರಿಸಿದ ಶ್ರುತಿ ಹರಿಹರನ್

ವಾರ್ತಾಭಾರತಿವಾರ್ತಾಭಾರತಿ20 Oct 2018 3:13 PM IST
share
ಮೀ ಟೂಗೆ ಇನ್ನೊಂದು ಸೇರ್ಪಡೆ: ಅರ್ಜುನ್ ಸರ್ಜಾ ಮೇಲೆ ಆರೋಪ ಹೊರಿಸಿದ ಶ್ರುತಿ ಹರಿಹರನ್

ಚೆನ್ನೈ,ಆ.20 : ‘ಮೀ ಟೂ’ ಆಂದೋಲನಕ್ಕೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ. ಸೋಲೋ ಖ್ಯಾತಿಯ ಜನಪ್ರಿಯ ನಟಿ ಶ್ರುತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದಾರೆ. ಕನ್ನಡ ಚಿತ್ರ ‘ವಿಸ್ಮಯ'ದ ಚಿತ್ರೀಕರಣದ ರೊಮ್ಯಾಂಟಿಕ್ ದೃಶ್ಯದ ರಿಹರ್ಸಲ್ ವೇಳೆ  ಅರ್ಜುನ್ ತನ್ನನು ಅಪ್ಪಿಕೊಂಡು  ತನ್ನ ದೇಹದ ಮೇಲೆ ಕೈಯ್ಯಾಡಿಸಿದ್ದರು ಎಂದು ಶ್ರುತಿ ಆರೋಪಿಸಿದ್ದಾರೆ. ಈ ಬಗ್ಗೆ ಶ್ರುತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ.

“ಚಿತ್ರರಂಗದ ನನ್ನ ಪಯಣದ ವೇಳೆ ಹಲವಾರು ಬಾರಿ ನನಗೆ ತೀವ್ರ ಅಸುರಕ್ಷತೆ ಮೂಡಿಸಿದ ಹಲವು ಘಟನೆಗಳು ನಡೆದಿದ್ದರೂ 2016ರಲ್ಲಿ ಅರ್ಜುನ್ ಸರ್ಜಾ ಅವರ ಜತೆ ದ್ವಿಭಾಷೆಯ ಚಿತ್ರ ವಿಸ್ಮಯ (ತಮಿಳಿನಲ್ಲಿ ನಿಬುನನ್) ಚಿತ್ರೀಕರಣದ ವೇಳೆ ಘಟನೆಯೊಂದು ನನಗೆ ಆಘಾತವುಮಟು ಮಾಡಿತ್ತು. ನಾನು ಬಾಲ್ಯದಿಂದಲೂ ನೋಡಿದ್ದ ಚಿತ್ರಗಳಲ್ಲಿ ನಟಿಸಿದ್ದ ನಟನೊಬ್ಬನ ಜತೆ ನಟಿಸುವ ಬಗ್ಗೆ ಅತ್ಯುತ್ಸಾಹದಿಂದಿದ್ದೆ. ಚಿತ್ರದಲ್ಲಿ ನಾನು ಆತನ ಪತ್ನಿಯ ಪಾತ್ರ ನಿರ್ವಹಿಸುತ್ತಿದ್ದೆ. ಮೊದಲ ಕೆಲ ದಿನಗಳು ಎಲ್ಲವೂ ಚೆನ್ನಾಗಿತ್ತು. ನಂತರ ರೊಮ್ಯಾಂಟಿಕ್ ದೃಶ್ಯವೊಂದರ ಸಂದರ್ಭ ಸಣ್ಣ ಸಂಭಾಷಣೆಯ ನಂತರ ನಾವಿಬ್ಬರೂ ಪರಸ್ಪರ ಆಲಿಂಗಿಸಿಕೊಳ್ಳಬೇಕಿತ್ತು. ರಿಹರ್ಸಲ್ ಸಮಯ ಅರ್ಜುನ್ ನನ್ನನ್ನು ಆಲಂಗಿಸಿ ಯಾವುದೇ ಅನುಮತಿಯಿಲ್ಲದೆ ನನ್ನ  ಬೆನ್ನ ಮೇಲಿಂದ ಕೆಳಗೆ ಕೈಯ್ಯಾಡಿಸಿ ನನ್ನನ್ನು ಇನ್ನೂ ಹತ್ತಿರಕ್ಕೆಳೆದು ಈ ರೀತಿಯ ದೃಶ್ಯ ಸಿನೆಮಾದಲ್ಲಿ ಸೇರಿಸಬಹುದೇ ಎಂದು ನಿರ್ದೇಶಕರನ್ನು ಕೇಳಿದರು. ಆದರೆ ಇದು ನನಗೆ ಇಷ್ಟವಾಗಿಲ್ಲ ಎಂದು ನಿರ್ದೇಶಕರಿಗೆ ತಿಳಿಯಿತು. ಒಬ್ಬ ವೃತ್ತಿಪರ ನಟಿಯಾಗಿ ಚಿತ್ರದ ಚಿತ್ರೀಕರಣ ಮುಗಿಸಿದೆ ಆದರೆ ಈ ಸಮಯದುದ್ದಕ್ಕೂ  ಅವರ ವರ್ತನೆ ಹಿಡಿಸಿಲ್ಲ, ಕೆಲಸದ ನಂತರ ಅವರನ್ನು ಭೇಟಿಯಾಗುವಂತೆ ಅವರ ಆಹ್ವಾನ ನನಗೆ ಆಘಾತವುಂಟು ಮಾಡಿತ್ತು. ಮತ್ತೆ ಅವರು ಇಂತಹ ವರ್ತನೆಯನ್ನು ಬೇರೆ ನಟಿಯರ ಜತೆ ತೋರಿಸಿಕೊಳ್ಳದೇ ಇರಲಿ ಎಂಬ ಉದ್ದೇಶದಿಂದ ನಾನೀಗ ಇದನ್ನು ಹೇಳುತ್ತಿದ್ದೇನೆ ಎಂದು ಶ್ರುತಿ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.

ಅರ್ಜುನ್ ಸರ್ಜಾ ಇನ್ನೂ ಪ್ರತಿಕ್ರಿಯಿಸದೇ ಇದ್ದರೂ ಚಿತ್ರದ ನಿರ್ದೇಶಕ ಸದ್ಯದಲ್ಲಿಯೇ ಹೇಳಿಕೆ ನೀಡಲಿದ್ದಾರೆಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X