Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಜ್‌ ಯಾತ್ರೆ-2019ರ ಅರ್ಜಿ ವಿತರಣೆ...

ಹಜ್‌ ಯಾತ್ರೆ-2019ರ ಅರ್ಜಿ ವಿತರಣೆ ಪ್ರಕ್ರಿಯೆ ಆರಂಭ: ಸಚಿವ ಝಮೀರ್‌ ಅಹ್ಮದ್‌

ವಾರ್ತಾಭಾರತಿವಾರ್ತಾಭಾರತಿ20 Oct 2018 8:17 PM IST
share
ಹಜ್‌ ಯಾತ್ರೆ-2019ರ ಅರ್ಜಿ ವಿತರಣೆ ಪ್ರಕ್ರಿಯೆ ಆರಂಭ: ಸಚಿವ ಝಮೀರ್‌ ಅಹ್ಮದ್‌

ಬೆಂಗಳೂರು, ಅ.20: ಭಾರತೀಯ ಹಜ್ ಸಮಿತಿಯು 2019ನೆ ಸಾಲಿನ ಹಜ್ ಯಾತ್ರೆಗಾಗಿ ಇಂದಿನಿಂದಲೆ ಅರ್ಜಿ ವಿತರಣೆ ಮಾಡುವ ಪ್ರಕ್ರಿಯೆಗೆ ಅವಕಾಶ ಕಲ್ಪಿಸಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್. ಝಮೀರ್‌ ಅಹ್ಮದ್‌ ಖಾನ್ ತಿಳಿಸಿದರು.

ಶನಿವಾರ ಹೆಗಡೆನಗರ ಸಮೀಪದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದಲ್ಲಿ 2019ನೆ ಸಾಲಿನ ಹಜ್‌ಯಾತ್ರೆಯ ಅರ್ಜಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಳೆದ ಬಾರಿಯ ಹಜ್ ಯಾತ್ರೆಗೆ ರಾಜ್ಯ ಹಜ್ ಸಮಿತಿಗೆ 18,427 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 6624 ಮಂದಿಯನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗಿತ್ತು. ಈ ಬಾರಿ ಕನಿಷ್ಠ 2000-2500 ಕೋಟಾ ಹೆಚ್ಚಳ ಮಾಡುವಂತೆ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮೇಲೆ ಒತ್ತಡ ಹೇರಲಾಗುವುದು ಎಂದು ಅವರು ಹೇಳಿದರು.

ಖಾಸಗಿ ಟೂರ್ ಆಪರೇಟರ್‌ಗಳಿಗೆ ಕಡಿವಾಣ: ಖಾಸಗಿ ಟೂರ್ ಆಪರೇಟರ್‌ಗಳ ಹಾವಳಿ ಹೆಚ್ಚಾಗಿದೆ. ಜನಸಾಮಾನ್ಯರಿಗೆ ಹಜ್, ಉಮ್ರಾ ಯಾತ್ರೆಗೆ ಕಳುಹಿಸುವುದಾಗಿ ನಂಬಿಸಿ ಹಣ ಪಡೆದು ಪರಾರಿಯಾಗುತ್ತಿರುವ ಘಟನೆಗಳು ಜರುಗುತ್ತಿವೆ. ಖಾಸಗಿ ಟೂರ್ ಆಪರೇಟರ್‌ಗಳ ಮೂಲಕ ಯಾತ್ರೆಗೆ ತೆರಳ ಬಯಸುವವರು, ಮೊದಲು ಅವರ ಬಳಿ ಪರವಾನಗಿ ಇದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ತಿಲಕ್‌ನಗರದ ಹರೀಮ್ ಟೂರ್ಸ್‌ ಮಾಲಕ 138 ಮಂದಿಗೆ ಹಜ್‌ಯಾತ್ರೆಗೆ ಕಳುಹಿಸುವುದಾಗಿ ಹೇಳಿ, ಹಣ ಕಟ್ಟಿಸಿಕೊಂಡು ನಾಪತ್ತೆಯಾಗಿದ್ದಾನೆ. ಈ 138 ಮಂದಿಯನ್ನು 2019ನೆ ಸಾಲಿನ ಹಜ್‌ಯಾತ್ರೆಗೆ ಯಾವುದೇ ಲಾಟರಿ ಇಲ್ಲದೆ, ನೇರವಾಗಿ ಆಯ್ಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇವರ ಪೈಕಿ 15-20 ಮಂದಿ ಆರ್ಥಿಕವಾಗಿ ತುಂಬಾ ಕಷ್ಟದಲ್ಲಿರುವುದರಿಂದ ಅವರನ್ನು ತನ್ನ ವೈಯಕ್ತಿಕ ಖರ್ಚಿನಲ್ಲಿ ಹಜ್‌ಯಾತ್ರೆಗೆ ಕಳುಹಿಸುವುದಾಗಿ ಝಮೀರ್‌ ಅಹ್ಮದ್‌ ಖಾನ್ ಹೇಳಿದರು.

ಹಜ್ ಸಮಿತಿಯು ಹಜ್‌ ಯಾತ್ರೆಗೆ ಒಬ್ಬರಿಂದ ತಲಾ 2.30 ಲಕ್ಷ ರೂ.ಪಡೆಯುತ್ತಿದೆ. ಈ ಪೈಕಿ ವಿಮಾನ ಪ್ರಯಾಣ ದರಕ್ಕೆ 76 ಸಾವಿರ ರೂ.ಗಳನ್ನು ಪಡೆಯಲಾಗುತ್ತಿದೆ. ನಾವೇ ವಿಮಾನ ಪ್ರಯಾಣದ ಟೆಂಡರ್ ಮಾಡಿದರೆ 33 ಸಾವಿರ ರೂ.ಗಳಾಗಬಹುದು. ಕೇಂದ್ರ ಸರಕಾರ ನಮ್ಮ ರಾಜ್ಯದ ಕೋಟಾ ನಮಗೆ ನೀಡಿದರೆ ಸಾಕು, ಉಳಿದ ವ್ಯವಸ್ಥೆಯನ್ನು ನಾವೇ ಮಾಡಿದರೆ ಜನಸಾಮಾನ್ಯರಿಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.

ರಾಜ್ಯ ಹಜ್ ಸಮಿತಿಯ ಅಧ್ಯಕ್ಷ ಆರ್.ರೋಷನ್‌ ಬೇಗ್ ಮಾತನಾಡಿ, ನಾನು ಹಾಗೂ ಸಚಿವ ಝಮೀರ್ ಇಬ್ಬರೂ ಸೇರಿ ಹಜ್ ಕೋಟಾ ಹೆಚ್ಚಿಸಲು ಪ್ರಯತ್ನಿಸುತ್ತೇವೆ. ಕಳೆದ ಬಾರಿ ಮಕ್ಕಾ ಹಾಗೂ ಮದೀನಾದಲ್ಲಿ ರಾಜ್ಯದ ಯಾತ್ರಿಗಳಿಗೆ ಸ್ಪಲ್ಪಮಟ್ಟದಲ್ಲಿ ವಸತಿ ಸಮಸ್ಯೆಯಾಗಿತ್ತು. ಮುಂದಿನ ಬಾರಿ ಇಂತಹ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲಾಗುವುದು ಎಂದರು.

ನವೆಂಬರ್-ಡಿಸೆಂಬರ್‌ನಲ್ಲಿ ಕೇಂದ್ರ ಹಜ್ ಸಮಿತಿಯ ನಿಯೋಗವು ಮಕ್ಕಾ ಹಾಗೂ ಮದೀನಾದಲ್ಲಿ ವಸತಿ ವ್ಯವಸ್ಥೆ ಪರಿಶೀಲನೆಗೆ ತೆರಳುತ್ತಿದೆ. ಮೂರು ತಿಂಗಳ ಮುಂಚಿತವಾಗಿಯೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿರುವುದರಿಂದ ಹರಮ್ ಹಾಗೂ ಪ್ರವಾದಿ ಮಸೀದಿ ಸಮೀಪ ಉತ್ತಮ ಗುಣಮಟ್ಟದ ಕಟ್ಟಡಗಳು ನಮಗೆ ಲಭ್ಯವಾಗಬಹುದು ಎಂದು ಅವರು ಹೇಳಿದರು.

ಹಜ್‌ ಭವನದಲ್ಲಿ ಸಭಾಂಗಣ, ಹೊಟೇಲ್, ಕಾಫಿ ಶಾಪ್, ಬಿಝಿನೆಸ್ ಸೆಂಟರ್, ಪ್ರವಾಸಿಗರ ತಂಗುದಾಣ, ಸಿಇಟಿ, ನೆಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆಗಮಿಸುವ ಹೊರ ಜಿಲ್ಲೆಗಳ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿ ಉಳಿದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ರೋಷನ್‌ ಬೇಗ್ ತಿಳಿಸಿದರು.

ಈ ಸಂದರ್ಭದಲ್ಲಿ  ಮೌಲಾನ ಲುತ್ಫುಲ್ಲಾ, ಮೌಲಾನ ಝೈನುಲ್ ಆಬಿದಿನ್, ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಝ್‌ ಖಾನ್ ಸರ್ದಾರ್‌ಮ ಹಜ್ ಸಮಿತಿಯ ಸದಸ್ಯರಾದ ಎಂ.ಎಸ್.ಅರ್ಶದ್, ಬಲ್ಕೀಸ್ ಬಾನು, ಸೈಯ್ಯದ್ ಸನಾವುಲ್ಲಾ, ಬಿಬಿಎಂಪಿ ಸದಸ್ಯ ಸೈಯ್ಯದ್ ಮುಜಾಹೀದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X