Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಎಚ್1ಎನ್1 ರೋಗದ 3 ಪ್ರಕರಣ...

ಕೊಡಗಿನಲ್ಲಿ ಎಚ್1ಎನ್1 ರೋಗದ 3 ಪ್ರಕರಣ ಪತ್ತೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಲಹೆ

ವಾರ್ತಾಭಾರತಿವಾರ್ತಾಭಾರತಿ20 Oct 2018 11:09 PM IST
share
ಕೊಡಗಿನಲ್ಲಿ ಎಚ್1ಎನ್1 ರೋಗದ 3 ಪ್ರಕರಣ ಪತ್ತೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಲಹೆ

ಮಡಿಕೇರಿ, ಅ.20: ಕೊಡಗು ಜಿಲ್ಲೆಯಲ್ಲಿ ಈ ವರ್ಷದಲ್ಲಿ ಅ.17ರ ವರೆಗೆ 5 ಶಂಕಿತ ಎಚ್1ಎನ್1 ಇನ್‌ಫ್ಲುಯೆಂಝಾ ರೋಗ ಪ್ರಕರಣ ವರದಿಯಾಗಿದ್ದು, ಅವುಗಳಲ್ಲಿ 3 ಪ್ರಕರಣಗಳಿಗೆ ಎಚ್1ಎನ್1 ರೋಗ ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಎಂ. ಶಿವಕುಮಾರ್ ತಿಳಿಸಿದ್ದಾರೆ. 

ಎಚ್1 ಎನ್1 ರೋಗ ಹರಡುವ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕೆಂದು ಮನವಿ ಮಾಡಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿ, ತೀವ್ರ ಸ್ವರೂಪದ ಜ್ವರ, ಕೆಮ್ಮು ಮತ್ತು ಹಳದಿ ಕಫ, ನೆಗಡಿ ಮತ್ತು ಗಂಟಲು ಕೆರೆತ, ಅತೀ ಬೇಧಿ - ವಾಂತಿ ರೋಗದ ಪ್ರಾಥಮಿಕ ಗುಣಲಕ್ಷಣಗಳಾಗಿದ್ದು, ಇಂತಹಾ ಲಕ್ಷಣಗಳು ಕಂಡು ಬಂದ ಕೂಡಲೇ ಹತ್ತಿರದ ಆರೋಗ್ಯಕೇಂದ್ರಗಳನ್ನು ಸಂಪರ್ಕಿಸಬೇಕೆಂದು ವಿನಂತಿಸಿದ್ದಾರೆ. ಸಾಮಾನ್ಯ ಪ್ಲೂ ಹರಡುವ ರೀತಿಯಲ್ಲಿಯೇ ಇನ್‌ಪ್ಲೂಯೆಂಝಾ ಎಚ್1ಎನ್1 ಹರಡುವುದಾಗಿ ಮಾಹಿತಿ ನೀಡಿರುವ ಅವರು, ಅತೀಯಾದ ಮೈ ಕೈ ನೋವು, ಉಸಿರಾಟ ತೊಂದರೆ ಕಾಣಿಸಿಕೊಳ್ಳುವುದು ತೀವ್ರ ತರಹವಾದ ರೋಗ ಲಕ್ಷಣಗಳು ಎಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ, ಸೀನಿದಾಗ ಈ ವೈರಸ್‌ಗಳು ಹರಡುತ್ತವೆ. ವೈಯುಕ್ತಿಕ ಸ್ವಚ್ಛತೆ ಇಲ್ಲದೇ, ಮೂಗು ಬಾಯಿ ಆಗಿಂದಾಗೆ ಮುಟ್ಟುವುದರಿಂದಲೂ ಸೋಂಕು ಹರಡಬಹುದು. ಈ ಲಕ್ಷಣಗಳು ಕಂಡುಬಂದ ವ್ಯಕ್ತಿಯ ಮೂಗು, ಗಂಟಲಿನ ಸ್ರಾವದ ಲೇಪನವನ್ನು ಪ್ರಯೋಗಶಾಲೆಯಲ್ಲಿ ಪರೀಕ್ಷೆಗೆ ಒಳಪಡಿಸಿ ಸೋಂಕನ್ನು ದೃಢ ಪಡಿಸಲಾಗುತ್ತದೆ. ಎಲ್ಲಾ ಶಂಕಿತ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸುವ ಅವಶ್ಯಕತೆ ಇರುವುದಿಲ್ಲ. ಸರಕಾರದ ಮಾರ್ಗದರ್ಶಿಯಂತೆ ಕೇವಲ ತೀವ್ರ ತರಹದ ಲಕ್ಷಣಗಳುಳ್ಳ ಪ್ರಕರಣಗಳಿಗೆ ಮಾತ್ರ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ಡಾ. ಶಿವಕುಮಾರ್‌ಮಾಹಿತಿ ನೀಡಿದ್ದಾರೆ.

ದೇಶದೆಲ್ಲೆಡೆ ಮಾರಕವಾಗಿ ಪರಿಣಮಿಸಿರುವ ಎಚ್1 ಎನ್1 ಇನ್‌ಫ್ಲುಯೆಂಝಾ ಸೋಂಕಿಗೆ ಪರಿಣಾಮಕಾರಿಯಾದ ಔಷಧ ಲಭ್ಯವಿದೆ. ಜಿಲ್ಲೆಯಲ್ಲಿ ರೋಗ ಪ್ರಕರಣ ವರದಿಯಾದರೆ ಸೂಕ್ತ ಚಿಕಿತ್ಸೆ ನೀಡಲು ಟ್ಯಾಮಿಪ್ಲೂ ಔಷಧವನ್ನು ದಾಸ್ತಾನು ಇಡಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ. ಶಿವಕುಮಾರ್ ಹೇಳಿದ್ದಾರೆ.

ಎಚ್1ಎನ್1 ಇನ್‌ಫ್ಲುಯೆಂಝಾ ರೋಗವು ವೈರಸ್‌ನಿಂದ ಬರುವ ಕಾಯಿಲೆ. ಎಚ್1 ಎನ್1 ಇನ್‌ಫ್ಲುಯೆಂಝಾ ರೋಗಕ್ಕೂ ಹಂದಿಗಳಿಗೂ ಯಾವುದೇ ಸಂಬಂಧವಿಲ್ಲ. ಹಂದಿ ಸಾಕಣೆ ಮಾಡುವುದರಿಂದ ಮತ್ತು ಮಾಂಸ ಸೇವನೆಯಿಂದ ರೋಗ ಹರಡುವುದಿಲ್ಲ. ಈ ರೋಗವು ಕೇವಲ ಮನುಷ್ಯರಿಂದ ಮನುಷ್ಯರಿಗೆ ಮಾತ್ರ ಹರಡುತ್ತದೆ.

-ಡಾ.ಎಂ. ಶಿವಕುಮಾರ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ

ಮುಂಜಾಗೃತಾ ಕ್ರಮಗಳು

-ಎಚ್1 ಎನ್1 ಇನ್‌ಫ್ಲುಯೆಂಝಾ ರೋಗ ಒಬ್ಬರಿಂದ ಒಬ್ಬರಿಗೆ ಹರಡದಂತೆ ಕೆಮ್ಮುವಾಗ, ಸೀನು ವಾಗ ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮೂಗನ್ನು ಮುಚ್ಚಿಕೊಳ್ಳಬೇಕು.

-ಆಗಾಗ ಕೈಗಳನ್ನು ಸಾಬೂನಿನಿಂದ ತೊಳೆಯುತ್ತಿ ರಬೇಕು. ವೈಯುಕ್ತಿಕ ಸ್ವಚ್ಛತೆ ಪಾಲಿಸಿ, ಸ್ನಾನ ಮಾಡಿ, ಶುಭ್ರ ಬಟ್ಟೆ ಧರಿಸಬೇಕು.

-ಸೋಂಕು ಇದ್ದಲ್ಲಿ ಮನೆಯಲ್ಲಿಯೇ ವಿಶ್ರಾಂತಿ ತೆಗೆದುಕೊಳ್ಳುವುದು, ಒತ್ತಡವನ್ನು ನಿಭಾಯಿಸಿ ಪೌಷ್ಟಿಕ ಆಹಾರ ಸೇವಿಸಬೇಕು.

-ಸಣ್ಣ ಮಕ್ಕಳಿದ್ದಲ್ಲಿ ಅವರು ಸೋಂಕಿಗೆ ಒಳಗಾಗದಂತೆ ಎಚ್ಚರವಹಿಸಬೇಕು.

-ಶಾಲಾ ಮಕ್ಕಳಲ್ಲಿ ಸೋಂಕಿದ್ದರೆ ಶಾಲೆಗೆ ಕಳುಹಿಸದೇ ಸೂಕ್ತ ಚಿಕಿತ್ಸೆ ಪಡೆದು ಮನೆಯಲ್ಲಿಯೇ ವಿಶ್ರಾಂತಿ ಪಡೆಯಬೇಕು.

-ಜನನಿಬಿಡ ಪ್ರದೇಶದಿಂದ ದೂರವಿರಬೇಕು.

-ಎಚ್1 ಎನ್1 ಇನ್‌ಫ್ಲುಯೆಂಝಾ ರೋಗ ಹೆಚ್ಚಿನ ಮಾಹಿತಿಗೆ ಆರೋಗ್ಯ ಇಲಾಖೆಯ ಸಹಾಯವಾಣಿ 104ಕ್ಕೆ ಕರೆ ಮಾಡಿ ಪಡೆದುಕೊಳ್ಳಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X