Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಕೆರೆ ಹೂಳೆತ್ತದೆ ಕಾಮಗಾರಿ...

ಚಿಕ್ಕಮಗಳೂರು: ಕೆರೆ ಹೂಳೆತ್ತದೆ ಕಾಮಗಾರಿ ಬಿಲ್ ಪಾವತಿ; ಆರೋಪ

ಪರಿಶೀಲನೆಗೆ ಬಂದ ಇಂಜಿನಿಯರ್ ಗಳನ್ನು ಅಡ್ಡಗಟ್ಟಿದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ20 Oct 2018 11:53 PM IST
share
ಚಿಕ್ಕಮಗಳೂರು: ಕೆರೆ ಹೂಳೆತ್ತದೆ ಕಾಮಗಾರಿ ಬಿಲ್ ಪಾವತಿ; ಆರೋಪ

ಚಿಕ್ಕಮಗಳೂರು, ಅ.20: ಕೆರೆ ಹೂಳೆತ್ತಲು ಬಿಡುಗಡೆಯಾದ ಅನುದಾನ ದುರ್ಬಳಕೆ ಸಂಬಂಧ ರೈತರು ಲೋಕಾಯುಕ್ತರಿಗೆ ನೀಡಿದ್ದ ದೂರಿನ ಪರಿಶೀಲನೆಗೆ ಇಂಜಿನಿಯರ್ ಗಳು ಬಂದಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ರೈತ ಮುಖಂಡರು ಇಂಜಿನಿಯರ್ ಗಳನ್ನು ಅಡ್ಡಗಟ್ಟಿ ತರಾಟೆಗೆ ಪಡೆದ ಘಟನೆ ಶನಿವಾರ ನಗರ ಸಮೀಪದ ಹಂಪಾಪುರ ಗ್ರಾಮದಲ್ಲಿ ನಡೆದಿದೆ.

ನಗರ ಹೊರವಲಯದ ಹಂಪಾಪುರದ ತೂಬುಗೆರೆಯ ಹೂ ತೆಗೆಯುವುದು ಸೇರಿದಂತೆ ಇತರ ಕಾಮಾರಿಗಳಿಗೆ ಸರಕಾರದಿಂದ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು. ಆದರೆ ಕೆರೆಯಲ್ಲಿನ ಹೂಳೆತ್ತುವ ಕಾಮಗಾರಿ ಮಾಡದೆ ಕಾಮಗಾರಿ ನಡೆದಿದೆ ಎಂದು ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಬಿಲ್ ಸಿದ್ಧಪಡಿಸಿ ಹಣ ಪಾವತಿಸಿದ್ದಾರೆಂದು ಆರೋಪಿಸಿ ರೈತ ಸಂಘದ ಸದಸ್ಯರು ಲೋಕಾಯುಕ್ತರಿಗೆ ಈ ಹಿಂದೆ ದೂರು ಸಲ್ಲಿಸಿದ್ದರು.

ಶನಿವಾರ ಬೆಳಗ್ಗೆ ಲೋಕೋಪಯೋಗಿ ಇಲಾಖೆಯ ಇಬ್ಬರು ಇಂಜಿನಿಯರ್ ಗಳು ಪರಿಶೀಲಿಸಲು ಹಂಪಾಪುರ ಗ್ರಾಮದ ಕೆರೆ ಬಳಿ ಆಗಮಿಸಿದ್ದರು. ಹೀಗೆ ಬಂದ ಅಧಿಕಾರಿಗಳು ಲೋಕಾಯುಕ್ತ ಸಂಸ್ಥೆಯವರಲ್ಲ ಎಂಬುದು ಖಾತ್ರಿಯಾಗುತ್ತಿದ್ದಂತೆ ರೈತ ಸಂಘದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕೆರೆಯನ್ನು ಪರಿಶೀಲಿಸಲು ಅವಕಾಶ ನೀಡದೇ ಇಂಜಿನಿಯರ್ ಗಳನ್ನು ಗ್ರಾಮದ ಮಧ್ಯೆಯೇ ಅಡ್ಡಗಟ್ಟಿದರು.

ಈ ವೇಳೆ, ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಪರಿಶೀಲನೆಗಾಗಿ ಗ್ರಾಮಕ್ಕೆ ಬಂದಿರುವುದಾಗಿ ಇಂಜಿನಿಯರ್ ಗಳು ಸಮಾಜಾಯಿಸಿ ನೀಡಿದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ಜಿಲ್ಲಾಧಿಕಾರಿಗಳ ವಿರುದ್ಧವೂ ನಾವು ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದೇವೆ. ಅವರು ಹೇಗೆ ಕಾಮಗಾರಿ ಪರಿಶೀಲಿಸಲು ಸೂಚನೆ ನೀಡುತ್ತಾರೆ. ಲೋಕಾಯುಕ್ತರೇ ಇಲ್ಲಿಗೆ ಬಂದು ಕಾಮಗಾರಿ ಪರಿಶೀಲಿಸಬೇಕೆಂದು ಪಟ್ಟು ಹಿಡಿದರು.

ಜಿಲ್ಲೆಯಲ್ಲಿ ಒಟ್ಟು 244 ಕೆರೆಗಳ ಹೂಳು ತೆಗೆಯಲು ಸರಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ ಯಾವುದೇ ಕೆರೆಯ ಹೂಳು ತೆಗೆದಿಲ್ಲ. ಎಲ್ಲೆಡೆ ಕಾಮಗಾರಿ ನಿರ್ವಹಿಸದೇ ಬಿಲ್ ಪಾವತಿಯಾಗಿರುವುದು ಕಂಡು ಬಂದಿದ್ದು, ಸಾರ್ವಜನಿಕರ ಹಣವನ್ನು ಅಧಿಕಾರಿಗಳು, ಇಂಜಿನಿಯರ್ ಗಳು ಲೂಟಿ ಮಾಡುತ್ತಿದ್ದಾರೆ. ಕೆರೆಗಳಲ್ಲಿ ನೀರು ಖಾಲಿಯಾದಾಗ ರೈತರು ಕೆರೆಯಲ್ಲಿನ ಹೂಳು ತೆಗೆದು ತಮ್ಮ ಜಮೀನಿಗೆ ಹಾಕಿಕೊಳ್ಳುವುದು ಸಾಮಾನ್ಯ ಸಂಗತಿ. ಹೀಗೆ ಮಣ್ಣು ತೆಗೆದ ಕೆರೆಗಳ ಫೋಟೊ ತೆಗೆದು ತಾವೇ ಕಾಮಗಾರಿ ಮಾಡಿರುವುದಾಗಿ ಅಧಿಕಾರಿಗಳು, ಗುತ್ತಿಗೆದಾರರು ಬಿಲ್ ಮಾಡಿಕೊಂಡಿದ್ದಾರೆ. ಯಾವುದೇ ಕಾಮಗಾರಿ ನಡೆದರೂ ಎಷ್ಟು ಮೊತ್ತ, ಏನು ಕೆಲಸ, ಗುತ್ತಿಗೆದಾರರ ಹೆಸರು ಎಲ್ಲವನ್ನೂ ಸೇರಿಸಿ ನಾಮಫಲಕ ಹಾಕಬೇಕು. ಆದರೆ ಇಲ್ಲಿ ಯಾವುದೇ ನಾಮಫಲಕ ಹಾಕಿಲ್ಲ ಎಂದು ಇದೇ ವೇಳೆ ಆರೋಪಿಸಿದ ಗ್ರಾಮಸ್ಥರು, ರೈತ ಮುಖಂಡರು, ಕಾಮಗಾರಿ ಇಲ್ಲಿ ನಡೆದಿರುವುದು ನಿಜವಾದರೆ ಕೂಡಲೆ ನಾಮಫಲಕ ಹಾಕಿ, ಅದರಲ್ಲಿ ಕಾಮಗಾರಿಗಳ ಪಟ್ಟಿಯನ್ನೂ ಹಾಕಿ. ಆ ನಂತರ ನಾವು ನಿಮ್ಮನ್ನು ಪ್ರಶ್ನಿಸಲು ಸಾಧ್ಯವಾಗುತ್ತದೆ. ನೀವು ಏನು ತನಿಖೆ ನಡೆಸುತ್ತೀರಿ ಎಂಬುದೂ ನಮಗೆ ತಿಳಿಯುತ್ತದೆ ಎಂದು ಪಟ್ಟು ಹಿಡಿದರು.

ಇದಕ್ಕೆ ಸ್ಥಳದಲ್ಲಿದ್ದ ಇಂಜಿನಿಯರ್ ಗಳು ಪ್ರತಿಕ್ರಿಯಿಸಿ, ಸಿಮೆಂಟ್, ಕಬ್ಬಿಣ, ಎಷ್ಟು ಬಳಕೆ ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಳಿಸಿದ್ದಾರೆ. ಹೂಳಿನ ವಿಚಾರ ತಮಗೆ ಗೊತ್ತಿಲ್ಲ ಎಂದರು, ಇದಕ್ಕೆ ಗ್ರಾಮಸ್ಥರು, ನೀವು ಯಾವ ಆಧಾರದಲ್ಲಿ ತನಿಖೆ, ಪರಿಶೀಲನೆ ಮಾಡುತ್ತೀರಿ, ಲೋಕಾಯುಕ್ತರು ಬರುವವರೆಗೂ ನಿಮ್ಮನ್ನು ಬಿಡುವುದಿಲ್ಲ ಎಂದು  ಪಟ್ಟು ಹಿಡಿದು ಕುಳಿತರು. 

ಬೆಳಗ್ಗೆ ಸುಮಾರು 11 ಗಂಟೆಗೆ ಗ್ರಾಮಕ್ಕೆ ಬಂದ ಇಂಜಿನಿಯರ್ ಳೊಂದಿಗೆ ಸಂಜೆ 4-30ರವರೆಗೂ ರೈತರು ಹಾಗೂ ಗ್ರಾಮಸ್ಥರು ಮಾತಿನ ಚಕಮಕಿ ನಡೆಸಿದರು. ನಂತರ ಅಧಿಕಾರಿಗಳು ಪರಿಶೀಲನೆ ಕೈಬಿಟ್ಟು ಹಿಂದಿರುಗುವುದಾಗಿ ಹೇಳಿದಾಗ ರೈತರು ಸುಮ್ಮನಾದರು.

ರೈತ ಸಂಘದ ಮುಖಂಡರುಗಳಾದ ಮಂಜುನಾಥ ಗೌಡ, ಕೃಷ್ಣೇಗೌಡ, ಚಂದ್ರೇಗೌಡ, ಎಂ.ಸಿ.ಬಸವರಾಜ್, ಲಕ್ಷ್ಮಣ್ ಹಾಗೂ ನೂರಾರು ಗ್ರಾಮಸ್ಥರು ಈ ವೇಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X