Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೃತಸರ ರೈಲು ದುರಂತ: ಗಾಯಾಳುಗಳ ಸುಲಿಗೆ,...

ಅಮೃತಸರ ರೈಲು ದುರಂತ: ಗಾಯಾಳುಗಳ ಸುಲಿಗೆ, ಮೃತರ ವಸ್ತುಗಳನ್ನೂ ಬಿಡದ ಡಕಾಯಿತರು

ವಾರ್ತಾಭಾರತಿವಾರ್ತಾಭಾರತಿ21 Oct 2018 1:22 PM IST
share
ಅಮೃತಸರ ರೈಲು ದುರಂತ: ಗಾಯಾಳುಗಳ ಸುಲಿಗೆ, ಮೃತರ ವಸ್ತುಗಳನ್ನೂ ಬಿಡದ ಡಕಾಯಿತರು

ಅಮೃತಸರ,ಅ.21: ಅಮೃತಸರದಲ್ಲಿ ನಡೆದ ರೈಲು ದುರಂತದಲ್ಲಿ ಗಾಯಗೊಂಡು ನರಳುತ್ತಿದ್ದವರ ವಸ್ತುಗಳನ್ನು ದೋಚಿರುವ ಅಮಾನವೀಯ ಕೃತ್ಯ ನಡೆದಿದೆ. ಮೃತಪಟ್ಟವರ ವಸ್ತುಗಳನ್ನೂ ಬಿಡದಂತೆ ದೋಚಿರುವ ಸುಲಿಗೆಕೋರರ ಕೃತ್ಯಕ್ಕೆ ಇಡೀ ಮನುಕುಲವೇ ಬೆಚ್ಚಿಬಿದ್ದಿದೆ.

ರೈಲು ಹರಿದು ಗಾಯಗೊಂಡವರು ಅಸಹಾಯಕರಾಗಿ ನೆರವಿಗೆ ಯಾಚಿಸುತ್ತಿದ್ದರೆ, ಇನ್ನೊಂದೆಡೆ ಕಳ್ಳರು ಗಾಯಾಳುಗಳ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಘಟನೆಯಲ್ಲಿ 61 ಮಂದಿ ಮೃತಪಟ್ಟರು 143 ಮಂದಿ ಗಾಯಗೊಂಡಿದ್ದರು. ತಮ್ಮ ಸಂಬಂಧಿಕರ ಮೃತದೇಹಗಳನ್ನು ತರಲು ಹೋಗಿದ್ದಾಗ, ಅಮೂಲ್ಯ ಚಿನ್ನಾಭರಣಗಳು, ಮೊಬೈಲ್ ಹಾಗೂ ಪರ್ಸ್‍ಗಳನ್ನು ಲೂಟಿ ಮಾಡಲಾಗಿದೆ ಎಂದು ಮೃತರ ಸಂಬಂಧಿಕರು ಮತ್ತು ಗಾಯಾಳುಗಳು ದೂರಿದ್ದಾರೆ.

"ಆಡಳಿತ ಯಂತ್ರದ ವೈಫಲ್ಯದಿಂದಾಗಿ ಮತ್ತು ಸಂಘಟಕರ ಬೇಜವಾಬ್ದಾರಿತನದಿಂದಾಗಿ ನಾನು ನನ್ನ ಮಗನನ್ನು ಕಳೆದುಕೊಳ್ಳಬೇಕಾಯಿತು. ಆತನ ದೇಹ ಸಿವಿಲ್ ಆಸ್ಪತ್ರೆಯಲ್ಲಿ ಸಿಕ್ಕಿತು. ಆದರೆ 20 ಸಾವಿರ ಮೌಲ್ಯದ ಮೊಬೈಲ್, ಪರ್ಸ್ ಹಾಗೂ ಚಿನ್ನದ ಸರ ನಾಪತ್ತೆಯಾಗಿದೆ" ಎಂದು ಘಟನೆಯಲ್ಲಿ ಮೃತಪಟ್ಟ ವಾಸು (17) ಎಂಬ ಯುವಕನ ತಾಯಿ ಜ್ಯೋತಿ ಕುಮಾರಿ ರೋಧಿಸುತ್ತಿದ್ದರು.

ಕಮಲ್ ಕುಮಾರ್ ಹಾಗೂ ಅವರ ಮಗ ತರುಣ್ ಮಖಾನ್ (19) ಕೂಡಾ ದಸರಾ ವೀಕ್ಷಿಸಲು ಸ್ನೇಹಿತರ ಜತೆ ತೆರಳಿದ್ದರು. "ಅಪಘಾತದ ಬಳಿಕ ಸ್ನೇಹಿತರು ತರುಣ್‍ನ ದೇಹವನ್ನು ಗಾಡಿಯಲ್ಲಿ ಮನೆಗೆ ತಂದರು. ಆದರೆ ಆತನ ಮೊಬೈಲ್ ನಾಪತ್ತೆಯಾಗಿದೆ" ಎಂದು ಕಮಲ್ ಕುಮಾರ್ ದೂರುತ್ತಾರೆ.

ಮೂರು ವರ್ಷದ ಪುತ್ರಿ ನಂದಿನಿಯನ್ನು ಅಪಘಾತದಲ್ಲಿ ಕಳೆದುಕೊಂಡು ತೀವ್ರ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿರುವ ದೀಪಕ್ ಹೇಳುವಂತೆ, "ನಾನು ಮಗ ಹಾಗೂ ಮಗಳ ಜತೆ ದಸರಾ ವೀಕ್ಷಿಸಲು ಹೋಗಿದ್ದೆ. ನಾನು ಮಗಳನ್ನು ಕಳೆದುಕೊಂಡೆ. ಮಗ ಜೀವನ್ಮರಣ ಹೋರಾಟದಲ್ಲಿದ್ದಾನೆ. ನಾನು ನೆರವಿಗೆ ಯಾಚಿಸುತ್ತಿದ್ದರೆ, ಕೆಲವರು ನನ್ನ ಜೇಬಿನಿಂದ ಮೊಬೈಲ್ ಕಿತ್ತುಕೊಂಡರು".

share
ವಾರ್ತಾಭಾರತಿ
ವಾರ್ತಾಭಾರತಿ
Next Story
X