Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರಾಜೆ-ಕೊಳಕೆ ಸಂಪರ್ಕ ಕಲ್ಪಿಸುವ ಒಳ...

ಕಾರಾಜೆ-ಕೊಳಕೆ ಸಂಪರ್ಕ ಕಲ್ಪಿಸುವ ಒಳ ರಸ್ತೆ-ಒಳಚರಂಡಿ ಕಾಮಗಾರಿ ಅವೈಜ್ಞಾನಿಕ

ಪೋಲಾಗುತ್ತಿದೆ 2.50 ಕೋಟಿ ರೂ.: ಗ್ರಾಮಸ್ಥರ ಆಕ್ರೋಶ

-ಅಬ್ದುಲ್ ರಹ್ಮಾನ್ ತಲಪಾಡಿ-ಅಬ್ದುಲ್ ರಹ್ಮಾನ್ ತಲಪಾಡಿ21 Oct 2018 3:46 PM IST
share
ಕಾರಾಜೆ-ಕೊಳಕೆ ಸಂಪರ್ಕ ಕಲ್ಪಿಸುವ ಒಳ ರಸ್ತೆ-ಒಳಚರಂಡಿ ಕಾಮಗಾರಿ ಅವೈಜ್ಞಾನಿಕ

► ಅಪಾಯಕಾರಿ ಮಿದ್ಯುತ್ ಕಂಬವನ್ನು ತೆರವುಗೊಳಿಸದೆ ಕಾಮಗಾರಿ ಪ್ರಕ್ರಿಯೆ!

► ಒಳಚರಂಡಿಯಲ್ಲಿಯೇ ಕುಡಿಯುವ ನೀರಿನ ಹೊಸ ಪೈಪ್‌ಲೈನ್ ಅಳವಡಿಕೆ!

ಬಂಟ್ವಾಳ, ಅ. 20: ಕಾರಾಜೆ-ಕೊಳಕೆ ಸಂಪರ್ಕ ಕಲ್ಪಿಸುವ ಒಳ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಯು ಅವ್ಯವಸ್ಥೆಯಿಂದ ಕೂಡಿದ್ದು, ಅವೈಜ್ಞಾನಿಕವಾಗಿದೆ. ಇಲ್ಲಿನ ರಸ್ತೆಯ ಇಕ್ಕೆಲಗಳಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೆ ಕಾಮಗಾರಿ ಪ್ರಕ್ರಿಯೆ ನಡೆಯುತ್ತಿದ್ದು, ಸಾರ್ವಜನಿಕರ ಹಣ ಪೋಲಾಗುತ್ತಿದೆ ಎಂದು ಸಜಿಪಮೂಡ ಗ್ರಾಮಸ್ಥರು ಆರೋಪಿಸಿದ್ದರೆ.

 ಈ ಒಳ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕರ ವಿಶೇಷ ಅನುದಾನ ಮಂಜುರಾತಿಯಾಗಿದ್ದು, ಇಲ್ಲಿನ ರಸ್ತೆ ಹಾಗೂ ಸಮರ್ಪಕ ಒಳಚರಂಡಿ ಸೇರಿ ಕಾಮಗಾರಿಗಾಗಿ ಸುಮಾರು 2.50ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಕಾರಾಜೆ, ಕುಚ್ಚಿಗುಡ್ಡೆ, ಮಿತ್ತಮಜಲು, ಕಾಂತಾಡಿ, ಕೂಡೂರು ಮಾರ್ಗವಾಗಿ ಕೊಳಕೆಯನ್ನು ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಇದರ ಕಾಮಗಾರಿ ಅವ್ಯವಸ್ಥೆ ಹಾಗೂ ಅವೈಜ್ಞಾನಿಕವಾಗಿದೆ ಎಂದು ಎಸ್‌ಡಿಪಿಐ ಬಂಟ್ವಾಳ ಸಮಿತಿಯ ಸದಸ್ಯ ಮಲಿಕ್ ದೂರಿದ್ದಾರೆ.

ರಸ್ತೆ ಹಾಗೂ ಒಳಚರಂಡಿ ನಿರ್ಮಾಣ ಕಾರ್ಯದಲ್ಲಿ ಯಾವುದೇ ರೂಪುರೇಷೆ ಮಾಡಿಲ್ಲ. ಅಲ್ಲದೆ, ರಸ್ತೆ-ಒಳಚರಂಡಿ ಕಾಮಗಾರಿಗೂ ಮೊದಲು ರಸ್ತೆಯ ಇಕ್ಕೆಲಗಳಲ್ಲಿರುವ ಸುಮಾರು 27 ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಮಾಡಿ ಎಂದು ನಿರ್ದೇಶನ ನೀಡಲಾಗಿತ್ತು. ಆದರೆ, ಕಾಮಗಾರಿ ಗುತ್ತಿಗೆದಾರರು ವಿದ್ಯುತ್ ಕಂಬಗಳಿರುವ ಸ್ಥಳದಲ್ಲೇ ಒಳಚರಂಡಿ ನಿರ್ಮಿಸಿದ್ದಾರೆ. ಇಲ್ಲಿನ ಕೆಲ ವಿದ್ಯುತ್ ಕಂಬಗಳು ಬೀಳುವ ಪರಿಸ್ಥಿಯಲ್ಲಿದ್ದರೂ ಪಿಡಬ್ಲ್ಯೂಡಿ ಅಧಿಕಾರಿಗಳು ನಿರ್ಲಕ್ಷ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಮಲಿಕ್ ಆರೋಪಿಸಿದ್ದಾರೆ.

ವಿದ್ಯುತ್ ಕಂಬಗಳ ತೆರವಿಗೆ ನಿರ್ದೇಶನವಿದ್ದರೂ, ಅಪಾಯಕಾರಿ ವಿದ್ಯುತ್ ಕಂಬ ತೆರವು ಮಾಡದೆ ಇರುವುದಕ್ಕೆ ಮೆಸ್ಕಾಂ ಇಲಾಖೆಯನು ಪ್ರಶ್ನಿಸಿದರೆ ಕಾಮಗಾರಿ ಮೇಲ್ವಿಚಾರಕರಲ್ಲಿ ತಿಳಿಸುವಂತೆ ತಾತ್ಸ್ಸಾರದ ಮಾತುಗಳು ಕೇಳಿಬರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ನಿರ್ಮಾಣದ ವಿಸ್ತೀರ್ಣ ಅಪೂರ್ಣ:

ಸುಮಾರು 2.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ, ಒಳಚರಂಡಿ ಕಾಮಗಾರಿಯ ವಿಸ್ತೀರ್ಣ ಅಪೂರ್ಣವಾಗಿದೆ. 4.350 ಕಿ. ಮೀಟರ್ ರಸ್ತೆಯ ವಿಸ್ತೀರ್ಣವನ್ನು ಹೊದಿದ್ದರೂ ಕೇವಲ 3ಕಿ.ಮೀ. ನಷ್ಟು ರಸ್ತೆ ನಿರ್ಮಾಣ ಮಾಡಲಾಗಿದೆ. ಅದಲ್ಲದೆ ಒಳಚರಂಡಿ ಕೂಡ ಕಡಿಮೆ ವಿಸ್ತೀರ್ಣವನ್ನು ಹೊಂದಿದೆ ಎಂಬ ಆರೋಪಕೇಳಿ ಬಂದಿದೆ.

ಈ ಬಗ್ಗೆ ಗ್ರಾಮ ಪಂಚಾಯತ್, ಪಿಡಿಒ ಹಾಗೂ ವಾರ್ಡ್ ಸದಸ್ಯರಲ್ಲೂ ಮಾಹಿತಿ ನೀಡಿ, ವೌಖಿಕವಾಗಿ ಒತ್ತಾಯ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ, ಇಲ್ಲಿನ ಪಂಚಾಯತ್ ಸದಸ್ಯರು ಇತ್ತ ಸುಳಿಯಲೇ ಇಲ್ಲ. ಅಂಗನವಾಡಿ ಸಮೀಪವಿರುವ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದೆ. ಒಂದು ವೇಳೆ ಅನಾಹುತ ಸಂಭವಿಸಿದರೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳೇ ಹೊಣೆ. ಒಂದು ವಾರದೊಳಗೆ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸದೇ ಇದ್ದಲ್ಲಿ, ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರ ಹಾಗೂ ಸಜಿಪಮೂಡ ಗ್ರಾಮಸ್ಥರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಲಿದ್ದಾರೆ.

ಮಲಿಕ್, ಎಸ್‌ಡಿಪಿಐ ಬಂಟ್ವಾಳ ಸಮಿತಿ ಸದಸ್ಯ

ಒಳಚರಂಡಿಯಲ್ಲೇ ಕುಡಿಯುವ ನೀರಿನ ಪೈಪ್‌ಲೈನ್

ಒಳಚರಂಡಿ ಕಾಮಗಾರಿಯು ಪ್ರಾರಂಭವಾಗಿದ್ದು, ಈ ಚರಂಡಿಯೊಳಗೆಯೇ ಕುಡಿಯುವ ನೀರಿನ ಹೊಸ ಪೈಪ್‌ಲೈನ್ ಹಾದುಹೋಗಿದೆ. ಅಲ್ಲದೆ, ಚರಂಡಿಯಲ್ಲಿಯೇ ನೀರಿನ ಗೇಟ್‌ಬಾಲ್ ಅನ್ನು ಅಳವಡಿಸಲಾಗಿದೆ. ಕೆಲವೆಡೆ ಪೈಪ್ ಒಡೆದು ಹೋಗಿದ್ದು, ಗ್ರಾಮಸ್ಥರು ರೋಗದ ಭೀತಿ ಎದುರಿಸುವಂತಾಗಿದೆ. ಇದರಿಂದ ಒಳಚರಂಡಿಯಲ್ಲಿ ಅಳವಡಿಸಿರುವ ಪೈಪ್‌ಲೈನ್ ಅನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

share
-ಅಬ್ದುಲ್ ರಹ್ಮಾನ್ ತಲಪಾಡಿ
-ಅಬ್ದುಲ್ ರಹ್ಮಾನ್ ತಲಪಾಡಿ
Next Story
X