Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಬರಿಮಲೆ ವಿಷಯದಿಂದ ಗಮನ ಬೇರೆಡೆ ಸೆಳೆಯಲು...

ಶಬರಿಮಲೆ ವಿಷಯದಿಂದ ಗಮನ ಬೇರೆಡೆ ಸೆಳೆಯಲು ತನ್ನ ವಿರುದ್ಧ ದೂರು: ಉಮ್ಮನ್ ಚಾಂಡಿ

ವಾರ್ತಾಭಾರತಿವಾರ್ತಾಭಾರತಿ21 Oct 2018 4:53 PM IST
share
ಶಬರಿಮಲೆ ವಿಷಯದಿಂದ ಗಮನ ಬೇರೆಡೆ ಸೆಳೆಯಲು ತನ್ನ ವಿರುದ್ಧ ದೂರು: ಉಮ್ಮನ್ ಚಾಂಡಿ

ತಿರುವನಂತಪುರ,ಅ.21: ಸೋಲಾರ್ ಹಗರಣದ ಆರೋಪಿ ಸರಿತಾ ನಾಯರ್ ಸಲ್ಲಿಸಿರುವ ಲೈಂಗಿಕ ದುರ್ವರ್ತನೆ ದೂರಿನ ಮೇರೆಗೆ ಕೇರಳ ಪೊಲೀಸ್‌ನ ಕ್ರೈಂ ಬ್ರಾಂಚ್ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಸಂಸದ ಕೆ.ಸಿ.ವೇಣುಗೋಪಾಲ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಇಲ್ಲಿ ಸುದ್ದಿಗಾರರಿಗೆ ಈ ವಿಷಯವನ್ನು ದೃಢಪಡಿಸಿದ ಡಿಜಿಪಿ ಲೋಕನಾಥ ಬೆಹೆರಾ ಅವರು,ಕಾನೂನು ತನ್ನದೇ ದಾರಿಯಲ್ಲಿ ಸಾಗಲಿದೆ ಎಂದರು.

ಪ್ರಕರಣಗಳ ತನಿಖೆಗಾಗಿ ಎಸ್‌ಪಿ ಅಬ್ದುಲ್ ಕರೀಂ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವೊಂದನ್ನು ರಚಿಸಲಾಗಿದೆ ಎಂದೂ ಅವರು ತಿಳಿಸಿದರು.

ಈ ಬೆಳವಣಿಗೆಗೆ ಪ್ರತಿಕ್ರಿಯುಸಿದ ಚಾಂಡಿ,ಪ್ರಕರಣಗಳನ್ನು ಕಾನೂನುಬದ್ಧವಾಗಿ ಎದುರಿಸಲು ತಾವು ಸಿದ್ಧರಿದ್ದೇವೆ ಎಂದು ಹೇಳಿದರು. ಇವು ರಾಜಕೀಯವಾಗಿ ಪ್ರೇರಿತ ಪ್ರಕರಣಗಳು ಎಂದು ಹೇಳಿದ ಅವರು,ಈಗ ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಜ್ಯದ ಸಿಪಿಎಂ ನೇತೃತ್ವದ ಸರಕಾರವು ಜನರ ಗಮನವನ್ನು ಶಬರಿಮಲೆ ವಿವಾದದಿಂದ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದರು.

ಚಾಂಡಿ ಅವರು 2012ರಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕ್ಲಿಫ್ ಹೌಸ್’ನಲ್ಲಿ ತನ್ನನ್ನು ಲೈಂಗಿಕವಾಗಿ ಶೋಷಿಸಿದ್ದರು ಮತ್ತು ವೇಣುಗೋಪಾಲ ಅವರು ಆಗಿನ ರಾಜ್ಯ ಸಚಿವ ಎ.ಪಿ.ಅನಿಲಕುಮಾರ್ ಅವರ ನಿವಾಸದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಸರಿತಾ ನಾಯರ್ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ.

 ನಾಯರ್ ಮತ್ತು ಬಿಜು ರಾಧಾಕೃಷ್ಣನ್ ಸೌರ ಫಲಕಗಳನ್ನು ಒದಗಿಸುವುದಾಗಿ ಹೇಳಿ ಹಲವಾರು ಜನರಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿದ್ದು ಬಹಿರಂಗಗೊಂಡಾಗ ಹಿಂದಿನ ಯುಡಿಎಫ್ ಸರಕಾರವು ವಿಚಾರಣೆಗಾಗಿ ಜಿ.ಶಿವರಾಜನ್ ಆಯೋಗವನ್ನು ರಚಿಸಿತ್ತು. ಕಳೆದ ವರ್ಷದ ನ.9ರಂದು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಆಯೋಗದ ವರದಿಯು ಚಾಂಡಿ ಮತ್ತು ಅವರ ನಾಲ್ವರು ಖಾಸಗಿ ಸಿಬ್ಬಂದಿಗಳು ಗ್ರಾಹಕರನ್ನು ವಂಚಿಸಲು ನಾಯರ್ ಮತ್ತು ಆಕೆಯ ಕಂಪನಿ ಟೀಂ ಸೋಲಾರ್‌ಗೆ ನೆರವಾಗಿತ್ತು ಎನ್ನುವುದನ್ನು ಬೆಟ್ಟು ಮಾಡಿತ್ತು. ವರದಿಯು ಚಾಂಡಿ ಸೇರಿದಂತೆ ವಿವಿಧ ಕಾಂಗ್ರೆಸ್ ಮತ್ತು ಯುಡಿಎಫ್ ನಾಯಕರ ವಿರುದ್ಧ ಲೈಂಗಿಕ ದುರ್ವರ್ತನೆಯ ಆರೋಪಗಳನ್ನು ಹೊರಿಸಿ ನಾಯರ್ 2013,ಜು.19ರಂದು ಪೊಲೀಸ್ ಆಯುಕ್ತರಿಗೆ ಬರೆದಿದ್ದ ಪತ್ರದ ವಿವರಗಳನ್ನೂ ಒಳಗೊಂಡಿತ್ತು.

ವರದಿಯಲ್ಲಿನ ತನ್ನ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಚಾಂಡಿ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಅಂಗೀಕರಿಸಿದ್ದ ಕೇರಳ ಉಚ್ಚ ನ್ಯಾಯಾಲಯವು ನಾಯರ್ ಪತ್ರವನ್ನು ಆಧರಿಸಿ ಅವರ ವಿರುದ್ಧ ಆಯೋಗವು ಬೆಟ್ಟು ಮಾಡಿದ್ದ ಅಂಶಗಳನ್ನು ಅಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X