Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್...

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಯುಎಇ ಘಟಕ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ21 Oct 2018 5:03 PM IST
share
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಯುಎಇ ಘಟಕ ಶುಭಾರಂಭ

ದುಬೈ, ಅ. 21: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಮಂಗಳೂರು ಇದರ ಯುಎಇ ಘಟಕದ ಉದ್ಘಾಟನಾ ಸಮಾರಂಭ ದುಬೈ ಜೆ.ಡಬ್ಲ್ಯೂ ಮೆರಿಯೆಟ್ ಹೊಟೇಲ್ ನಲ್ಲಿ ನಡೆಯಿತು.

ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಉದ್ದೇಶದಿಂದ ಎಸ್.ಎಂ. ರಶೀದ್ ಹಾಜಿ ಅವರ ನೇತೃತ್ವದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸ್ಥಾಪನೆಗೊಂಡ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ತಮ್ಮ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಯುಎಇ ಘಟಕದ ಉದ್ಘಾಟಿಸಿ ಚಾಲನೆ ನೀಡಿತು.

ಕಾರ್ಯಕ್ರಮದಲ್ಲಿ  ಪ್ರಾಸ್ತಾವಿಕ ಭಾಷಣ ಮಾಡಿದ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಸುಮಾರು 15 ಲಕ್ಷದಷ್ಟು ಇರುವ ಬ್ಯಾರಿ ಸಮುದಾಯ ಇದೀಗ ಎದುರಿಸುತ್ತಿರುವ ಸವಾಲುಗಳು ಮತ್ತು ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಭವಿಷ್ಯದಲ್ಲಿ ಉಳಿದ ವ್ಯಾಪಾರಿ ಸಮುದಾಯಗಳಂತೆ ಬಲಿಷ್ಠವಾಗಲು ಬೇಕಾದ ಪೂರ್ವ ತಯಾರಿಯ ಕುರಿತು ಅಂಕಿ ಅಂಶಗಳೊಂದಿಗೆ ವಿವರಿಸಿದರು.

ನಮ್ಮ ನಡುವೆ ಇಂದು ವೇದಿಕೆಯಲ್ಲಿರುವ ತುಂಬೆ ಗ್ರೂಪಿನ ಸ್ಥಾಪಕ ಡಾ. ತುಂಬೆ ಮುಹಿಯುದ್ದೀನ್ ಉದ್ಯಮಿಯಾಗಿ ಬೆಳೆದಿರುವ ರೀತಿ ನಮಗೆ ಮಾದರಿ, ಇಂತಹ ಉದ್ಯಮಿಗಳು ಸಮುದಾಯದಿಂದ ಮತ್ತಷ್ಟು ಬರಬೇಕು, ಆರ್ಥಿಕ ಸಾಮರ್ಥ್ಯ ಹಾಗೂ ವ್ಯಾಪಾರದ ಕೌಶಲ್ಯ ಹೊಂದಿರುವ ಸಮುದಾಯದ ಸಮರ್ಥ ಯುವ ಹಾಗೂ ಅನುಭವಿ ನಾಯಕರ ಭವಿಷ್ಯದ ಯೋಜನೆಗಳಿಗೆ ಬಿಸಿಸಿಐ ವೇದಿಕೆಯಾಗಲಿದೆ. ನಮ್ಮ ಯೋಜನೆಗಳು ಸಮರ್ಪಕವಾಗಿ ಜಾರಿಗೆ ತಂದಲ್ಲಿ ಬ್ಯಾರಿ ಸಮುದಾಯವನ್ನು ಭಾರತದ ಬಲಿಷ್ಠ ಸಮುದಾಯದಲ್ಲಿ ಒಂದಾಗಿ ಇತಿಹಾಸ ರಚಿಸಲಿದೆ ಎಂದು ಹೇಳಿದರು.

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಯುಎಇ ಘಟಕವನ್ನು ಅಧಿಕೃತವಾಗಿ ಉದ್ಘಾಟಿಸಿ ಮಾತನಾಡಿದ ಬಿಸಿಸಿಐ ಯುಎಇ ಘಟಕದ ಪೋಷಕರಾದ, ತುಂಬೆ ಗ್ರೂಪಿನ ಸ್ಥಾಪಕ ಡಾ.ತುಂಬೆ ಮುಹಿಯುದ್ದೀನ್, ಪ್ರಾಮಾಣಿಕತೆ, ನೈತಿಕ ಮೌಲ್ಯಾಧಾರಿತವಾಗಿ ನಿರಂತರ ಶ್ರಮದಿಂದ ನಡೆಸಿದ ಯಾವುದೇ ಕೆಲಸ, ಉದ್ಯಮ ಖಂಡಿತ ಯಶಸ್ಸನ್ನು ನೀಡುತ್ತದೆ. ಯಶಸ್ಸಿಗೆ ಯಾವುದೇ ಶಾರ್ಟ್ ಕಟ್ ಇಲ್ಲ, ಸುಮ್ಮನೆ ಕುಳಿತುಕೊಂಡು ಅದೃಷ್ಟ ಹುಡುಕಿಕೊಂಡು ಬಂದು ಯಶಸ್ಸು ತಂದು ಕೊಡುತ್ತೆ ಎಂದು ಆಶಿಸುವುದು ಮೂರ್ಖತನ. ಬಿಸಿಸಿಐ ಜಾಗೃತಿ ಮೂಡಿಸಲು ಯೋಜಿಸಿರುವ ಕಾರ್ಯಕ್ರಮಗಳು ಶ್ಲಾಘನೀಯ, ನಮ್ಮ ಬೆಂಬಲ ಸದಾ ಇದೆ, ಸಮುದಾಯದ ಸಬಲೀಕರಣಕ್ಕೆ ಇದು ನಾಂದಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಕರ್ನಾಟಕ ರಾಜ್ಯ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಮಾತನಾಡಿ, ಬಿಸಿಸಿಐ ಯುಎಇ ಘಟಕ ಚಾಲನೆ ನೀಡಿದ್ದು ಖುಷಿಯ ವಿಚಾರ, ಇದೇ ರೀತಿ ಗಲ್ಫ್ ದೇಶದೆಲ್ಲೆಡೆ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಲಿ, ಯಶಸ್ಸು ನಿಮ್ಮದಾಗಲಿ ಎಂದು ಹಾರೈಸಿದರು.

ಉಮರ್ ಟೀಕೆ ದಿಕ್ಸೂಚಿ ಭಾಷಣ ಮಾಡಿದರು. ಸಮಾರಂಭದ ವಿಶೇಷ ಅತಿಥಿಯಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಬಿ.ಎಮ್ ಫಾರೂಕ್, ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ ಯೂಸುಫ್, ಬಿಡಬ್ಲ್ಯೂಎಫ್ ಅಧ್ಯಕ್ಷ ಮಹಮ್ಮದ್ ಅಲಿ ಉಚ್ಚಿಲ್, ಮಮ್ತಾಝ್ ಅಲಿ, ಎಸ್ ಎಮ್ ಬಶೀರ್, ಕೆ.ಎಸ್ ಶೇಖ್ ಕರ್ನಿರೆ ಮಾತನಾಡಿದರು.

ತನ್ವೀರ್ ಅಹ್ಮದ್ ಮತ್ತು ಡಾ. ಕಾಪು ಕಾರ್ಯಕ್ರಮ ನಿರೂಪಿಸಿದರು. 

ಈ ಸಂದರ್ಭದಲ್ಲಿ ಬಿಸಿಸಿಐ ಮಂಗಳೂರಿನ ಉಪಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ, ಕಾರ್ಯದರ್ಶಿ ಮುಹಮ್ಮದ್ ನಿಸಾರ್, ಖಜಾಂಚಿ ಮನ್ಸೂರ್ ಅಹ್ಮದ್, ಬಿಸಿಸಿಐ ಟ್ರಸ್ಟಿಗಳಾದ ರಿಯಾಝ್ ಬಾವ, ಶೌಕತ್, ಮಹಮ್ಮದ್ ಹಾರಿಸ್, ಆಸಿಫ್ ಹೋಮ್ ಪ್ಲಸ್, ನಾಸಿರ್ ಲಕ್ಕೀ ಸ್ಟಾರ್, ಅಸ್ಗರ್ ಅಲಿ ಡೆಕ್ಕನ್ , ಶರೀಫ್ ಜೋಕಟ್ಟೆ, ಅಬ್ದುಲ್ ರಝಾಕ್, ಆಸಿಫ್ ಅಮೇಕೋ, ಬಶೀರ್ ರಿಯಾದ್, ಅಬ್ದುಲ್ಲಾ ಮೋನು ಖತರ್, ಯು.ಟಿ ಇಫ್ತಿಕಾರ್, ಹಿದಾಯ ಫೌಂಡೇಶನ್ ನ ಚೇರ್ಮೆನ್ ಕಾಸಿಮ್ ಅಹ್ಮದ್ ಎಚ್.ಕೆ., ನಂಡೆ ಪೆಂಙಲ್ ಅಧ್ಯಕ್ಷ ನೌಷಾದ್ ಸೂರಲ್ಪಾಡಿ, ಮನ್ಸೂರ್ ಬಹರೈನ್, ಮುಸ್ತಫಾ ಹಾಗು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X